AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ವಾಹನಾಪಘಾತ; ರಿಚ್‌ಮಂಡ್ ವೃತ್ತದಲ್ಲಿ ದಂಪತಿ ಸಾವು

ಬೆಂಗಳೂರಿನ ರಿಚ್‌ಮಂಡ್ ವೃತ್ತದಲ್ಲಿ ನವೆಂಬರ್ 1 ರಂದು ತಡರಾತ್ರಿ ಅತಿವೇಗದ ಆಂಬ್ಯುಲೆನ್ಸ್ ಮೂರು ಮೋಟಾರ್‌ಸೈಕಲ್‌ಗಳಿಗೆ ಗುದ್ದಿದ್ದು, ಸ್ಕೂಟರ್​ನಲ್ಲಿದ್ದ ಗಂಡ ಹೆಂಡತಿಯಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಿಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿರುವುದು ಪೊಲೀಸರ ತನಿಖೆಯಿಂದ ದೃಢಪಟ್ಟಿದೆ.

ಬೆಂಗಳೂರು: ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ವಾಹನಾಪಘಾತ; ರಿಚ್‌ಮಂಡ್ ವೃತ್ತದಲ್ಲಿ ದಂಪತಿ ಸಾವು
ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ವಾಹನಾಪಘಾತ
ಭಾವನಾ ಹೆಗಡೆ
|

Updated on:Nov 03, 2025 | 10:42 AM

Share

ಬೆಂಗಳೂರು, ನವೆಂಬರ್ 3: ಜೀವ ಉಳಿಸಬೇಕಾದ ಆಂಬುಲೆನ್ಸ್ (Ambulance Accident) ಜೀವ ತೆಗೆದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನವೆಂಬರ್ 1 ರ ತಡರಾತ್ರಿ ಬೆಂಗಳೂರಿನ ರಿಚ್‌ಮಂಡ್ ವೃತ್ತದಲ್ಲಿ ಕ್ಲೌಡ್‌ನೈನ್ ಆಸ್ಪತ್ರೆಯಿಂದ ಬಂದ ಅತಿವೇಗದ ಆಂಬ್ಯುಲೆನ್ಸ್ ಮೂರು ಮೋಟಾರ್ ಸೈಕಲ್​ಗೆ ಹೊಡೆದಿದೆ. ಸ್ಕೂಟರ್​ನಲ್ಲಿದ್ದ ಗಂಡ ಹೆಂಡತಿಯಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಅತಿವೇಗದಿಂದ 3 ವಾಹನಗಳಿಗೆ ಗುದ್ದಿದ ಆಂಬುಲೆನ್ಸ್

ಶನಿವಾರ ರಾತ್ರಿ 11:00 ಗಂಟೆ ಸುಮಾರಿಗೆ ನಗರದ ರಿಚ್ಮಂಡ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ಆಂಬ್ಯುಲೆನ್ಸ್ ಮೂರು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಅವುಗಳಲ್ಲಿ ಒಂದನ್ನು ಕೆಲವು ಮೀಟರ್‌ಗಳಷ್ಟು ಎಳೆದುಕೊಂಡು ಹೋಗಿದ್ದು, ಪೊಲೀಸ್ ಹೊರಠಾಣೆಯೊಂದಕ್ಕೆ ಡಿಕ್ಕಿ ಹೊಡೆದ ನಂತರ ನಿಂತಿತ್ತು. ಅತಿ ವೇಗದಿಂದ ಬಂದ ಆಂಬುಲೆನ್ಸ್, 3 ವಾಹನಗಳಲ್ಲಿದ್ದ ಮೊಹಮ್ಮದ್ ರಿಯಾಜ್ (22), ಮೊಹಮ್ಮದ್ ಸಿದ್ದಿಕ್ (25) ಮತ್ತು ಇಸ್ಮಾಯಿಲ್ ನಾಥನ್ ದಬಾಪು (40) ದಂಪತಿಗಳಿಗೆ ಗುದ್ದಿತ್ತು.

ಎಕ್ಸ್​ನಲ್ಲಿ ಪೋಸ್ಟ್ ಮಾಡಲಾದ ವೀಡಿಯೋ ಇಲ್ಲಿದೆ

ಸ್ಥಳದಲ್ಲೇ ದಂಪತಿ ಸಾವು

ಘಟನೆಯಲ್ಲಿ ಡಿಯೋ ಸ್ಕೂಟರ್ನಲ್ಲಿದ್ದ ಇಸ್ಮಾಯಿಲ್ ನಾಥನ್ ದಬಾಪು ಮತ್ತು ಅವರ ಪತ್ನಿ ಸಮೀನ್ ಬಾನು (33)ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೊಹಮ್ಮದ್ ರಿಯಾಜ್ ಮತ್ತು ಮೊಹಮ್ಮದ್ ಸಿದ್ದಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಓಡಿಹೋಗಿದ್ದ ಆಂಬುಲೆನ್ಸ್ ಚಾಲಕ ಅಶೋಕ್ ಕುಮಾರ್, ನಂತರ ಪೊಲೀಸರಲ್ಲಿ ಶರಣಾಗಿದ್ದು, ಪೊಲೀಸರು ಆತನ ಮೇಲೆ ಅತಿವೇಗ ಚಾಲನೆಯ ಆರೋಪ ಹೊರಿಸಿದ್ದಾರೆ. ಯಾವುದೇ ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದಿದ್ದರೂ ಚಾಲಕ ನಿರ್ಲಕ್ಷ್ಯದಿಂದ ವಾಹನವನ್ನು ವೇಗವಾಗಿ ಚಲಾಯಿಸಿರುವುದು ಪೊಲೀಸರ ತನಿಖೆಯ ವೇಲೆ ದೃಢಪಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:40 am, Mon, 3 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ