AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪತ್ನಿಗೆ ಡೆತ್ ನೋಟ್​​ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್​ಪೆಕ್ಟರ್ ಆತ್ಮಹತ್ಯೆ​

ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ಪತ್ನಿ ಜೊತೆ ಜಗಳ ಮಾಡಿಕೊಂಡು ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಪತ್ನಿಗೆ ಡೆತ್ ನೋಟ್​​ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್​ಪೆಕ್ಟರ್ ಆತ್ಮಹತ್ಯೆ​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 11, 2023 | 11:24 AM

ಬೆಂಗಳೂರು: ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. ಜ.20ರಂದು ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ ಡೆತ್​ನೋಟ್​​ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಜನವರಿ 23ರಂದು ಮಿಸ್ಸಿಂಗ್ ಕೇಸ್ ದಾಖಲು ಮಾಡಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ.

ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಹಳೇ ದ್ವೇಷಕ್ಕೆ ಚಾಕು ಇರಿದು ಸ್ನೇಹಿತ ಶರತ್​(25) ಎಂಬಾತನನ್ನ ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್​ನಲ್ಲಿ ನಡೆದಿದೆ. ಶರತ್ ಕುಮಾರ್ ಮತ್ತು ಲೋಕೇಶ್ ಇಬ್ಬರು ಸ್ನೇಹಿತಾಗಿದ್ರು, ಹಣಕಾಸಿನ ವಿಚಾರಕ್ಕೆ ಇಬ್ಬರು ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಮೊದಲು ಲೋಕೇಶ್​ಗೆ ಚಾಕು ಇರಿಯಲು ಮುಂದಾಗಿದ್ದ ಶರತ್ ಕುಮಾರ್. ಈ ವೇಳೆ ಶರತ್ ಕುಮಾರ್ ಬಳಿಯ ಚಾಕು ಕಸಿದುಕೊಂಡು ಲೋಕೇಶ್ ಅವನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ತಕ್ಷಣವೇ ಗಾಯಾಳುಗಳನ್ನು ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶರತ್​(25) ಸಾವನ್ನಪ್ಪಿದ್ದು, ಕುಮಾರಸ್ವಾಮಿ ಲೇಔಟ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ನಿನ್ನೆ ರಾತ್ರಿ ಶ್ರೀಧರ್ ಎಂಬಾತ ಮುನಿಯಪ್ಪ(45) ಎಂಬಾತನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅಲಸಹಳ್ಳಿ ಮುಖ್ಯ ರಸ್ತೆಯ ಬಾರ್ ಬಳಿ ನಡೆದಿದೆ. ಒಂದೇ ಏರಿಯಾದಲ್ಲಿ ವಾಸವಿದ್ದ ಶ್ರೀಧರ್ ಹಾಗೂ ಮುನಿಯಪ್ಪ ರಾತ್ರಿ ಕುಡಿದ ನಂತ್ರ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಶ್ರೀಧರ್​ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಶ್ರೀಧರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Hassan: ಮೊದಲು ಮಿಸ್ಸಿಂಗ್, ಆ ಮೇಲೆ ಕಿಡ್ನಾಪ್, ಕೊನೆಗೆ ಕೊಲೆ ಕೇಸ್: ಇದು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆಯಾದ ಕತೆ

ಮದ್ದೂರು ಬಳಿ ಕಾರು ಡಿಕ್ಕಿಯಾಗಿ ಜಿಂಕೆ‌ಮರಿ ಸಾವು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮದ್ದೂರು ಬಳಿ ಕಾರು ಡಿಕ್ಕಿಯಾಗಿ ಜಿಂಕೆ‌ಮರಿ ಸಾವನ್ನಪ್ಪಿದೆ. ರಾ.ಹೆ. 66 ರಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಕಾರು ಡಿಕ್ಕಿಯಾಗಿದೆ. ಈ ಕುರಿತು ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಂಧ್ರಪ್ರದೇಶದ ಚಿತ್ತೂರು ಮೂಲದ ಚಾಲಕ ಸಬೀರ್​ನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ