ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ

Karnataka Weather Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ತಾಪಮಾನ 17°C ಇರಲಿದ್ದು, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಹೆಚ್ಚಾಗಿ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ನಿರೀಕ್ಷೆಯಿಲ್ಲ. ಮುಂಜಾನೆ ವಾಹನ ಸವಾರರು ಎಚ್ಚರದಿಂದಿರಲು ಸೂಚಿಸಲಾಗಿದೆ. ಮುಂದಿನ 7 ದಿನ ಒಣಹವೆ, ಚಳಿ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ
ಸಾಂದರ್ಭಿಕ ಚಿತ್ರ

Updated on: Dec 25, 2025 | 8:00 AM

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru winter weather) ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ. ಮುಂದಿನ 7 ದಿನಗಳಲ್ಲಿ ಮಂಜು ಬೀಳಲಿದೆ. ರಾತ್ರಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 26°C (79°F) ತಲುಪುವ ನಿರೀಕ್ಷೆಯಿದೆ , ಕನಿಷ್ಠ ತಾಪಮಾನವು ಸುಮಾರು 15°C (59°F) ಇರುತ್ತದೆ. ಡಿಸೆಂಬರ್ ತಿಂಗಳ ಸರಾಸರಿ ತಾಪಮಾನದ ವ್ಯಾಪ್ತಿಯು 16°C ನಿಂದ 28°C (60°F ನಿಂದ 82°F) ವರೆಗೆ ಇರುತ್ತದೆ. ಪ್ರಸ್ತುತ ತಾಪಮಾನವು ಈ ವ್ಯಾಪ್ತಿಯಲ್ಲಿಯೇ ಇರಲಿದೆ. ದಿನವು ಬಹುತೇಕ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ, ಮಳೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ, ಇದರಿಂದಾಗಿ ಹಗಲಿನಲ್ಲಿ ಸಾಕಷ್ಟು ಬಿಸಿಲು ಇರುತ್ತದೆ.

ಉತ್ತರ, ಮಧ್ಯ, ದಕ್ಷಿಣ ಒಳನಾಡು ಹಾಗೂ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಇನ್ನು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ ಎಂದು ಹೇಳಲಾಗಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಚಳಿ ಅಧಿಕವಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ಒಣ ಹವೆ ಇರಲಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ತಂಪಾದ ವಾತಾವರಣ ಇರಲಿ. ಹಾಗಾಗಿ ಮುಂಜಾನೆ ಹೊತ್ತು ವಾಹನ ಸವಾರರು ಸ್ವಲ್ಪ ಎಚ್ಚರದಿಂದ ಇರುವಂತೆ ಹೇಳಿದ್ದಾರೆ. ಹಾಗೂ ಇಂದು ರೈಲ್ವೆ, ವಿಮಾನ ಹಾರಾಟಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ. ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಜತೆಗೆ ಚಳಿಯೂ ತೀವ್ರಗೊಳಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ