AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್ ಜನರ ಜೀವ ಉಳಿಸಿದ ನಾಯಿ! ಮೂಕಪ್ರಾಣಿಯ ಸಮಯಪ್ರಜ್ಞೆಗೆ ಜನ ಬೆರಗು

ಏನೇ ಆದರೂ, ಎರಡು ಫ್ಲಾಟ್ ಹೊತ್ತಿ ಉರಿದ ಅಗ್ನಿ ಅವಘಡದ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದಕ್ಕೆ ಇಲ್ಲಿ ವಿಶೇಷ ಕಾರಣ ಒಂದಿದೆ. ಅದುವೇ ಫ್ಲಾಟ್​ನ ಸಾಕು ನಾಯಿ.

ಅಪಾರ್ಟ್​ಮೆಂಟ್ ಜನರ ಜೀವ ಉಳಿಸಿದ ನಾಯಿ! ಮೂಕಪ್ರಾಣಿಯ ಸಮಯಪ್ರಜ್ಞೆಗೆ ಜನ ಬೆರಗು
ಅಪಾರ್ಟ್​ಮೆಂಟ್ ಜನರ ಜೀವ ಉಳಿಸಿದ ನಾಯಿ
TV9 Web
| Edited By: |

Updated on: Nov 17, 2021 | 5:17 PM

Share

ಆನೇಕಲ್: ಇಲ್ಲಿನ ಅಪಾರ್ಟ್​ಮೆಂಟ್ ಒಂದರಲ್ಲಿ ಇಂದು (ನವೆಂಬರ್ 17) ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್​ ಸಿಟಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವಸುಂಧರಾ ಲೇಔಟ್​ನ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್​​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆ ಎರಡು ಫ್ಲ್ಯಾಟ್​ಗಳಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.

ಈ ದುರ್ಘಟನೆ ಇಷ್ಟರಲ್ಲೇ ಮುಗಿದಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ‌ ಇಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೂ ತಿಳಿದುಬಂದಿಲ್ಲ. ಏನೇ ಆದರೂ, ಎರಡು ಫ್ಲಾಟ್ ಹೊತ್ತಿ ಉರಿದ ಅಗ್ನಿ ಅವಘಡದ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದಕ್ಕೆ ಇಲ್ಲಿ ವಿಶೇಷ ಕಾರಣ ಒಂದಿದೆ. ಅದುವೇ ಫ್ಲಾಟ್​ ಒಂದರ ಸಾಕು ನಾಯಿ.

ಒಂದು ಮೂಕ ಪ್ರಾಣಿ ಅಪಾರ್ಟ್​ಮೆಂಟ್​ನ ಜನರಿಗೆ ಆಗಬಹುದಾಗಿದ್ದ ದೊಡ್ಡ ಹಾನಿಯನ್ನು ಕಡಿಮೆ ಮಾಡಿದೆ. ಸಣ್ಣ ಪ್ರಮಾಣದಲ್ಲಿ ಅಪಾಯ ತಪ್ಪಿಸಿದೆ. ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಹತ್ತಿದ ತಕ್ಷಣ ನಾಯಿ ಜೋರಾಗಿ ಕೂಗಿಕೊಂಡಿದೆ. 119 ರ ಫ್ಲಾಟ್​ನಲ್ಲಿ ಇದ್ದ ನಾಯಿ ಜೋರಾಗಿ ಬೊಗಳಿದೆ. ಇಡೀ ಅಪಾರ್ಟ್ಮೆಂಟ್ ಓಡಿ ಕೂಗಿದ ಕಾರಣ ಜನರಿಗೆ ಎಚ್ಚರವಾಗಿದೆ. ನಾಯಿ ಕೂಗೋದನ್ನು ಕೇಳಿ ಚಾಲೇಟ್ ಅಪಾರ್ಟ್​ಮೆಂಟ್ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ.

ನಾಯಿ ಬೊಗಳುವಿಕೆ ಕೇಳಿ ಜನರು ಹೊರ ಬಂದು ನೋಡುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಹೊಗೆ ನೋಡಿ ಜನರು ಗಾಬರಿ ಪಟ್ಟಿದ್ದಾರೆ. ಇದಕ್ಕೂ ಮೊದಲು ನಾಯಿ ಸೆಕ್ಯುರಿಟಿ ಸಿಬ್ಬಂದಿ ಬಳಿ ಬಂದು ಬೊಗಳಿ ಓಡಿತ್ತು ಎಂದು ತಿಳಿದುಬಂದಿದೆ. ನಾಯಿಯ ಸಮಯ ಪ್ರಜ್ಞೆ ಕಂಡು ಇದೀಗ ಅಪಾರ್ಟ್​ಮೆಂಟ್ ನಿವಾಸಿಗಳು ಬೆರಗಾಗಿದ್ದಾರೆ.

ಇದನ್ನೂ ಓದಿ: ಆನೇಕಲ್: ಅಪಾರ್ಟ್​ಮೆಂಟ್ ಒಂದರಲ್ಲಿ ಅಗ್ನಿ ಅವಘಡ; ಎರಡು ಫ್ಲಾಟ್​ಗಳಿಗೆ ಆವರಿಸಿದ ಬೆಂಕಿ

ಇದನ್ನೂ ಓದಿ: ಮುಂಬೈನ ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​​ನಲ್ಲಿ ಬೆಂಕಿ; 8 ಅಗ್ನಿಶಾಮಕ ವಾಹನಗಳು ದೌಡು

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ