AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು

ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. 18 ತಿಂಗಳ ಮಗು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದೆ. ನೇಪಾಳ ಮೂಲದ ದಂಪತಿಯ ಪುತ್ರಿ ದುರಂತದಲ್ಲಿ ಪ್ರಾಣ ಕಳೆದುಕೊಂಡಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು
ಸುಟ್ಟು ಕರಕಲಾದ ಮನೆ
ಗಂಗಾಧರ​ ಬ. ಸಾಬೋಜಿ
|

Updated on: Sep 03, 2025 | 8:52 PM

Share

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಜಾಲ ಎಂವಿಐಟಿ ಕಾಲೇಜು ರಸ್ತೆಯಲ್ಲಿರುವ ಜಸ್ಟ್​ ಬೇಕ್​ನಲ್ಲಿ ನಡೆದಿದೆ. ಬಿಹಾರ ಮೂಲದ 20 ವರ್ಷದ ಭೂಪೇಂದ್ರ ಚೌಧರಿ ಮೃತ ಯುವಕ.

ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್‌ ಭೀಮನಗೌಡ ಗುಂಡಿನ ದಾಳಿಗೆ ಬಲಿ

ಭೂಪೇಂದ್ರ ಚೌಧರಿ 3 ತಿಂಗಳ ಹಿಂದೆಯಷ್ಟೇ ಜಸ್ಟ್ ಬೇಕ್​ಗೆ ಕೆಲಸಕ್ಕೆ ಸೇರಿದ್ದ. ಬಿಸ್ಕತ್ ಸಾಗಿಸುವಾಗ ಎರಡನೇ ಫ್ಲೋರ್​ನಲ್ಲಿ ತಲೆ ಹೊರಗೆ ಮಾಡಿದ್ದ, ಈ ವೇಳೆ ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಂಜಿತಾ(28) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: 1ನೇ ಕ್ಲಾಸ್ ವಿದ್ಯಾರ್ಥಿಗಳ ಗಲಾಟೆ ಸಾವಿನಲ್ಲಿ ಅಂತ್ಯ: ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತಾಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನವಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ಎರಡನೇ ಮದುವೆ ಆಗಿದ್ದು, ಹಬ್ಬಕ್ಕೆ ತವರು ಮನೆಗೆ ಬಂದಿದ್ದಳು. ಈ ನಡುವೆ ಗಂಡ ಜೊತೆ ಜಗಳವಾಗಿದೆ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್