AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು

ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. 18 ತಿಂಗಳ ಮಗು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದೆ. ನೇಪಾಳ ಮೂಲದ ದಂಪತಿಯ ಪುತ್ರಿ ದುರಂತದಲ್ಲಿ ಪ್ರಾಣ ಕಳೆದುಕೊಂಡಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು
ಸುಟ್ಟು ಕರಕಲಾದ ಮನೆ
ಗಂಗಾಧರ​ ಬ. ಸಾಬೋಜಿ
|

Updated on: Sep 03, 2025 | 8:52 PM

Share

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಜಾಲ ಎಂವಿಐಟಿ ಕಾಲೇಜು ರಸ್ತೆಯಲ್ಲಿರುವ ಜಸ್ಟ್​ ಬೇಕ್​ನಲ್ಲಿ ನಡೆದಿದೆ. ಬಿಹಾರ ಮೂಲದ 20 ವರ್ಷದ ಭೂಪೇಂದ್ರ ಚೌಧರಿ ಮೃತ ಯುವಕ.

ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್‌ ಭೀಮನಗೌಡ ಗುಂಡಿನ ದಾಳಿಗೆ ಬಲಿ

ಭೂಪೇಂದ್ರ ಚೌಧರಿ 3 ತಿಂಗಳ ಹಿಂದೆಯಷ್ಟೇ ಜಸ್ಟ್ ಬೇಕ್​ಗೆ ಕೆಲಸಕ್ಕೆ ಸೇರಿದ್ದ. ಬಿಸ್ಕತ್ ಸಾಗಿಸುವಾಗ ಎರಡನೇ ಫ್ಲೋರ್​ನಲ್ಲಿ ತಲೆ ಹೊರಗೆ ಮಾಡಿದ್ದ, ಈ ವೇಳೆ ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಂಜಿತಾ(28) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: 1ನೇ ಕ್ಲಾಸ್ ವಿದ್ಯಾರ್ಥಿಗಳ ಗಲಾಟೆ ಸಾವಿನಲ್ಲಿ ಅಂತ್ಯ: ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತಾಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನವಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ಎರಡನೇ ಮದುವೆ ಆಗಿದ್ದು, ಹಬ್ಬಕ್ಕೆ ತವರು ಮನೆಗೆ ಬಂದಿದ್ದಳು. ಈ ನಡುವೆ ಗಂಡ ಜೊತೆ ಜಗಳವಾಗಿದೆ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ