AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು

ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. 18 ತಿಂಗಳ ಮಗು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದೆ. ನೇಪಾಳ ಮೂಲದ ದಂಪತಿಯ ಪುತ್ರಿ ದುರಂತದಲ್ಲಿ ಪ್ರಾಣ ಕಳೆದುಕೊಂಡಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು
ಸುಟ್ಟು ಕರಕಲಾದ ಮನೆ
ಗಂಗಾಧರ​ ಬ. ಸಾಬೋಜಿ
|

Updated on: Sep 03, 2025 | 8:52 PM

Share

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಜಾಲ ಎಂವಿಐಟಿ ಕಾಲೇಜು ರಸ್ತೆಯಲ್ಲಿರುವ ಜಸ್ಟ್​ ಬೇಕ್​ನಲ್ಲಿ ನಡೆದಿದೆ. ಬಿಹಾರ ಮೂಲದ 20 ವರ್ಷದ ಭೂಪೇಂದ್ರ ಚೌಧರಿ ಮೃತ ಯುವಕ.

ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್‌ ಭೀಮನಗೌಡ ಗುಂಡಿನ ದಾಳಿಗೆ ಬಲಿ

ಭೂಪೇಂದ್ರ ಚೌಧರಿ 3 ತಿಂಗಳ ಹಿಂದೆಯಷ್ಟೇ ಜಸ್ಟ್ ಬೇಕ್​ಗೆ ಕೆಲಸಕ್ಕೆ ಸೇರಿದ್ದ. ಬಿಸ್ಕತ್ ಸಾಗಿಸುವಾಗ ಎರಡನೇ ಫ್ಲೋರ್​ನಲ್ಲಿ ತಲೆ ಹೊರಗೆ ಮಾಡಿದ್ದ, ಈ ವೇಳೆ ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಂಜಿತಾ(28) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: 1ನೇ ಕ್ಲಾಸ್ ವಿದ್ಯಾರ್ಥಿಗಳ ಗಲಾಟೆ ಸಾವಿನಲ್ಲಿ ಅಂತ್ಯ: ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತಾಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನವಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ಎರಡನೇ ಮದುವೆ ಆಗಿದ್ದು, ಹಬ್ಬಕ್ಕೆ ತವರು ಮನೆಗೆ ಬಂದಿದ್ದಳು. ಈ ನಡುವೆ ಗಂಡ ಜೊತೆ ಜಗಳವಾಗಿದೆ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.