AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು

ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. 18 ತಿಂಗಳ ಮಗು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದೆ. ನೇಪಾಳ ಮೂಲದ ದಂಪತಿಯ ಪುತ್ರಿ ದುರಂತದಲ್ಲಿ ಪ್ರಾಣ ಕಳೆದುಕೊಂಡಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಸುಟ್ಟು ಕರಕಲಾದ 18 ತಿಂಗಳ ಕೂಸು
ಸುಟ್ಟು ಕರಕಲಾದ ಮನೆ
ಗಂಗಾಧರ​ ಬ. ಸಾಬೋಜಿ
|

Updated on: Sep 03, 2025 | 8:52 PM

Share

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಜಾಲ ಎಂವಿಐಟಿ ಕಾಲೇಜು ರಸ್ತೆಯಲ್ಲಿರುವ ಜಸ್ಟ್​ ಬೇಕ್​ನಲ್ಲಿ ನಡೆದಿದೆ. ಬಿಹಾರ ಮೂಲದ 20 ವರ್ಷದ ಭೂಪೇಂದ್ರ ಚೌಧರಿ ಮೃತ ಯುವಕ.

ಇದನ್ನೂ ಓದಿ: ವಿಜಯಪುರ: ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್‌ ಭೀಮನಗೌಡ ಗುಂಡಿನ ದಾಳಿಗೆ ಬಲಿ

ಭೂಪೇಂದ್ರ ಚೌಧರಿ 3 ತಿಂಗಳ ಹಿಂದೆಯಷ್ಟೇ ಜಸ್ಟ್ ಬೇಕ್​ಗೆ ಕೆಲಸಕ್ಕೆ ಸೇರಿದ್ದ. ಬಿಸ್ಕತ್ ಸಾಗಿಸುವಾಗ ಎರಡನೇ ಫ್ಲೋರ್​ನಲ್ಲಿ ತಲೆ ಹೊರಗೆ ಮಾಡಿದ್ದ, ಈ ವೇಳೆ ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಂಜಿತಾ(28) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: 1ನೇ ಕ್ಲಾಸ್ ವಿದ್ಯಾರ್ಥಿಗಳ ಗಲಾಟೆ ಸಾವಿನಲ್ಲಿ ಅಂತ್ಯ: ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತಾಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನವಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ಎರಡನೇ ಮದುವೆ ಆಗಿದ್ದು, ಹಬ್ಬಕ್ಕೆ ತವರು ಮನೆಗೆ ಬಂದಿದ್ದಳು. ಈ ನಡುವೆ ಗಂಡ ಜೊತೆ ಜಗಳವಾಗಿದೆ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?