AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ಅವಘಡ; ಮೂರು ದಿನಗಳ ನಂತರ ಫ್ಲ್ಯಾಟ್​ಗಳಿಗೆ ವಾಪಸ್ ಆದ ನಿವಾಸಿಗಳು

Bengaluru Fire Accident: ಫ್ಲ್ಯಾಟ್ಗಳಲ್ಲಿ 2 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿಯಿಂದ ಫ್ಲ್ಯಾಟ್ಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹೀಗಾಗಿ ತಮ್ಮ ಫ್ಲ್ಯಾಟ್‌ಗಳಿಗೆ ನಿವಾಸಿಗಳು ವಾಪಸಾಗುತ್ತಿದ್ದಾರೆ. ಅಗ್ನಿ ದುರಂತಕ್ಕೆ ಕಾರಣವೇನೆಂಬುವುದು ಇನ್ನೂ ನಿಗೂಢವಾಗಿದೆ.

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ಅವಘಡ; ಮೂರು ದಿನಗಳ ನಂತರ ಫ್ಲ್ಯಾಟ್​ಗಳಿಗೆ ವಾಪಸ್ ಆದ ನಿವಾಸಿಗಳು
ಬೆಂಗಳೂರು ಅಪಾರ್ಟ್​ಮೆಂಟ್​ ಅಗ್ನಿ ಅವಘಡ
TV9 Web
| Updated By: Digi Tech Desk|

Updated on:Sep 23, 2021 | 12:25 PM

Share

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ ಇಡೀ ಫ್ಲ್ಯಾಟ್ ಸಂಪೂರ್ಣ ಕರಕಲಾಗಿ ಹೋಗಿದೆ. ಮನೆಯಲ್ಲಿದ್ದ ಪ್ರತಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಜನರನ್ನು ಬೇರೆ ಕಡೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಈಗ ಮೂರು ದಿನಗಳ ನಂತರ ಫ್ಲ್ಯಾಟ್ಗಳಿಗೆ ನಿವಾಸಿಗಳು ವಾಪಸ್ ಆಗಿದ್ದಾರೆ. ಫ್ಲ್ಯಾಟ್ಗಳಲ್ಲಿ 2 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿಯಿಂದ ಫ್ಲ್ಯಾಟ್ಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹೀಗಾಗಿ ತಮ್ಮ ಫ್ಲ್ಯಾಟ್‌ಗಳಿಗೆ ನಿವಾಸಿಗಳು ವಾಪಸಾಗುತ್ತಿದ್ದಾರೆ. ಅಗ್ನಿ ದುರಂತಕ್ಕೆ ಕಾರಣವೇನೆಂಬುವುದು ಇನ್ನೂ ನಿಗೂಢವಾಗಿದೆ. ಸದ್ಯ ಎಫ್ಎಸ್ಎಲ್ ಘಟನಾ ಸ್ಥಳ ಪರಿಶೀಲನೆ ನಡೆಸಿದ್ದು ಪೊಲೀಸರು ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.

ಕಾನೂನು ಪ್ರಕಾರವೇ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ ದುರಂತದ ಬಗ್ಗೆ ಮಾತನಾಡಿದ ಅಪಾರ್ಟ್ಮೆಂಟ್ ನಿರ್ಮಿಸಿದ್ದ ಆಸ್ಪೈರ್ ಬಿಲ್ಡರ್ಸ್ ಸಂಸ್ಥೆಯ ಶ್ರೀನಿವಾಸ್‌ರೆಡ್ಡಿ, ನಾನು ಎಲ್ಲಿಯೂ ಓಡಿ ಹೋಗಿಲ್ಲ, ಬೆಂಗಳೂರಿನಲ್ಲೇ ಇದ್ದೇನೆ. ಕಾನೂನು ಪ್ರಕಾರವೇ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ. ಈ ಕಟ್ಟಡಕ್ಕೆ ಅಗ್ನಿಶಾಮಕ ನಿಯಮಗಳು ಅನ್ವಯವಾಗಲ್ಲ. ಸೆಟ್ಬ್ಯಾಕ್ ಬಿಟ್ಟು ಅಪಾರ್ಟ್‌ಮೆಂಟ್ ನಿರ್ಮಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ ಬೆಂಗಳೂರಿನ ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ (Bangalore Apartment) ಸೆಪ್ಟೆಂಬರ್ 21ರ ಸಂಜೆ ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿತ್ತು. ಅಪಾರ್ಟ್​ಮೆಂಟ್​ನ ಫ್ಲಾಟ್​ ಧಗಧಗನೆ ಹೊತ್ತಿ ಉರಿದ ಪರಿಣಾಮ ಅಮೆರಿಕದಿಂದ ವಾಪಾಸ್ ಬಂದಿದ್ದ ತಾಯಿ-ಮಗಳು ಸಜೀವ ದಹನವಾಗಿದ್ದರು. ಈ ದುರಂತಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಸಿಲಿಂಡರ್ ಸ್ಫೋಟದಿಂದ (Cylinder Blast) ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿತ್ತು. ಅಲ್ಲದೆ, ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಅನುಸರಿಸದೆ ಇದ್ದುದು ಈ ದುರಂತ ನಡೆಯಲು ಮುಖ್ಯ ಕಾರಣವಾಗಿತ್ತು.

ಇದನ್ನೂ ಓದಿ: Bengaluru Fire Accident: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ದುರಂತಕ್ಕೆ ದೇವರ ದೀಪವೇ ಕಾರಣವಾ?

Published On - 10:31 am, Thu, 23 September 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್