AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರಿನ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಸದಸ್ಯರ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 1.73 ಕೋಟಿ ರೂ. ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂಬ ನಿವಾಸಿಗಳ ದೂರಿನ ಮೇರೆಗೆ, ಬಾಗಲಗುಂಟೆ ಪೊಲೀಸರು 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ
ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌Image Credit source: tv9
ಗಣಪತಿ ಶರ್ಮಾ
|

Updated on: Mar 20, 2026 | 2:43 PM

Share

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್ ನಾಯ್ಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಪ್ರತಿ ಫ್ಲಾಟ್‌ನಿಂದ ವರ್ಷಕ್ಕೆ ಸುಮಾರು 60 ಸಾವಿರ ರೂಪಾಯಿ ಸಂಗ್ರಹಿಸಲಾಗುತ್ತಿದ್ದು, 700 ಫ್ಲಾಟ್‌ಗಳಿಂದ ಒಟ್ಟಾರೆ ಸುಮಾರು 3.6 ಕೋಟಿ ರೂಪಾಯಿ ವಸೂಲಿ ಮಾಡಲಾಗುತ್ತದೆ. ಆದರೆ, ಈ ಹಣವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ಬಳಸದೇ, ಲೆಕ್ಕಪತ್ರಗಳಲ್ಲಿ ಅಕ್ರಮ ಎಸಗಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ಸುಮಾರು 1.73 ಕೋಟಿ ರೂಪಾಯಿ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಖರ್ಚುಗಳನ್ನು ತಪ್ಪಾಗಿ ತೋರಿಸಲಾಗಿದೆ. ಉದಾಹರಣೆಗೆ; ವಾಟರ್‌ಮ್ಯಾನ್‌ಗೆ ಅನಗತ್ಯವಾಗಿ 2 ಲಕ್ಷ ರೂಪಾಯಿ ನೀಡಲಾಗಿದೆ ಎಂದು ದಾಖಲಿಸಿರುವುದು ಗಮನಕ್ಕೆ ಬಂದಿದೆ. ಜೊತೆಗೆ, ಆಡಿಟ್ ಖರ್ಚನ್ನು ಒಂದು ವರ್ಷ 35 ಲಕ್ಷ ರೂಪಾಯಿ, ಮತ್ತೊಂದು ವರ್ಷ 24 ಲಕ್ಷ ರೂಪಾಯಿ ಎಂದು ತೋರಿಸಿರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಅಸೋಸಿಯೇಷನ್ ಹಣವನ್ನು ಆರೋಪಿಗಳು ತಮ್ಮ ಕುಟುಂಬದ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹೆಂಡತಿ, ಮನೆ ಕೆಲಸದವರ ಬ್ಯಾಂಕ್ ಖಾತೆಗಳಿಗೂ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಒಟ್ಟಾರೆ, ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಣ ವಂಚನೆ ಆರೋಪ ಕೇಳಿಬಂದಿರುವುದು ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನ ಉಂಟುಮಾಡಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!