
ಬೆಂಗಳೂರು, ಜುಲೈ 14: ಕಳೆದ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (AQI) ಉತ್ತಮವಾಗಿದೆ. ಇಂದೂ ಸಹ ಬೆಳಗಾವಿ, ಬಾಗಲಕೋಟೆ ಜೊತೆಗೆ ಇನ್ನೂ ಹಲವು ಜಿಲ್ಲೆಗಳಲ್ಲಿ ಏರ್ ಕ್ವಾಲಿಟಿ ಸುಧಾರಿಸಿದೆ. ರಾಜ್ಯದಲ್ಲಿ ಸುರಿದ ಮುಂಗಾರು ಮಳೆಯಿಂದಾಗಿ ಗರಿಷ್ಠ ಮಟ್ಟದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿದ್ದು, ಮಳೆಗಾಲ ಮುಗಿಯುವವರೆಗೂ ವಾಯು ಗುಣಮಟ್ಟ ಉತ್ತಮವಾಗಿಯೇ ಇರಲಿದೆ ಎಂದು ಹೇಳಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 67ರಷ್ಟಿದ್ದು, ಇದು ಮಧ್ಯಮ ವಿಭಾಗಕ್ಕೆ ಸೇರುತ್ತದೆ. ನಗರದ ಪ್ರಮುಖ ಮಾಲಿನ್ಯಕಾರಕವಾಗಿ PM10 ಕಣಗಳು ಕಂಡುಬಂದಿವೆ. ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ವಾಯು ಗುಣಮಟ್ಟ ಈ ಕೆಳಗಿನಂತಿದೆ.
ಬೆಂಗಳೂರಿನ ಇಂದಿನ ಗಾಳಿಯು ಸಾಮಾನ್ಯ ಜನರಿಗೆ ಸುರಕ್ಷಿತವಾಗಿದ್ದರೂ, ಉಸಿರಾಟದ ತೊಂದರೆ ಇರುವವರು ಹಾಗೂ ಸೂಕ್ಷ್ಮ ಆರೋಗ್ಯ ಹೊಂದಿರುವವರು ದೀರ್ಘಕಾಲದ ಹೊರಾಂಗಣ ಚಟುವಟಿಕೆಗಳ ಸಮಯದಲ್ಲಿ ಸ್ವಲ್ಪ ಜಾಗರೂಕರಾಗಿರುವುದು ಒಳ್ಳೆಯದು.
ಬಾಗಲಕೋಟೆಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಸುಧಾರಿತವಾಗಿದ್ದು, ಉತ್ತಮ ಶ್ರೇಣಿಯಲ್ಲಿದೆ. ಬೆಳಗಾವಿ ಮತ್ತು ಬಳ್ಳಾರಿ ನಗರಗಳಲ್ಲಿ ಕೈಗಾರಿಕಾ ಚಟುವಟಿಕೆಗಳಿದ್ದರೂ, ಇಂದಿನ AQI ಮಧ್ಯಮ ಮಟ್ಟದಲ್ಲಿ ದಾಖಲಾಗಿದೆ. ಭದ್ರಾವತಿಯಲ್ಲಿ ಇಲ್ಲಿಯೂ ಗಾಳಿಯ ಗುಣಮಟ್ಟ ಮಧ್ಯಮ ಶ್ರೇಣಿಯಲ್ಲೇ ಮುಂದುವರಿದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಗಾಳಿಯ ಗುಣಮಟ್ಟ ಕೊಂಚ ಕುಸಿದಿದ್ದು,ಕಳಪೆ ಮಟ್ಟವನ್ನು ತಲುಪಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ