AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ?

ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಮೇ 23 ರಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಹಾಗೂ ತೃಪ್ತಿಕರ ಮಟ್ಟದಲ್ಲಿದೆ. ಬೆಂಗಳೂರಿನ ವಿವಿಧ ಪ್ರದೇಶಗಳ ಇಂದಿನ ಮಾಲಿನ್ಯ ಮಟ್ಟ, ಮೈಸೂರು, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರಗಳ ಸಂಪೂರ್ಣ ವಾಯು ಗುಣಮಟ್ಟದ ವರದಿ ಮತ್ತು ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ.

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ?
ಮಾಲಿನ್ಯ ಮುಕ್ತವಾಯ್ತು ಕರ್ನಾಟಕ!
ಭಾವನಾ ಹೆಗಡೆ
|

Updated on: May 23, 2026 | 7:29 AM

Share

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ.
  • ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ.
  • ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI ಮಟ್ಟ 40 ರಿಂದ 65 ರ ಆಸುಪಾಸಿನಲ್ಲಿದೆ. ಇದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಮಾನದಂಡಗಳ ಪ್ರಕಾರ ತೃಪ್ತಿಕರ ಅಥವಾ ಉತ್ತಮ ಎಂದು ವರ್ಗೀಕರಿಸಲಾಗಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್​ನಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ AQI ಸ್ವಲ್ಪ ಮಟ್ಟಿಗೆ ಹೆಚ್ಚಿದ್ದು, 64 ರಿಂದ 75 ರಷ್ಟಿದೆ (ತೃಪ್ತಿಕರ). ಜಯನಗರ ಮತ್ತು ಸಿಟಿ ರೈಲ್ವೆ ಸ್ಟೇಷನ್​ಗಳಲ್ಲಿ ಗಾಳಿಯ ಗುಣಮಟ್ಟ ಸಾಧಾರಣವಾಗಿದ್ದು, 60 ರಿಂದ 72ರಷ್ಟಿದೆ. ಹೆಬ್ಬಾಳ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ಹೆದ್ದಾರಿ ಬಳಿಯಿದ್ದರೂ ಇಂದಿನ ವಾಯು ಸೂಚ್ಯಂಕ 42 ರಿಂದ 57 ರಷ್ಟಿದ್ದು, ಉಸಿರಾಟಕ್ಕೆ ಯೋಗ್ಯವಾಗಿದೆ.

ನಗರದಲ್ಲಿ ಇಂದಿನ ಪ್ರಮುಖ ಮಾಲಿನ್ಯಕಾರಕ ಘಟಕಗಳೆಂದರೆ PM10 ಮತ್ತು PM2.5 ಸೂಕ್ಷ್ಮ ಕಣಗಳಾಗಿವೆ. ಆದಾಗ್ಯೂ, ಇವುಗಳು ಅಪಾಯಕಾರಿ ಮಟ್ಟವನ್ನು ಮೀರಿಲ್ಲದ ಕಾರಣ ಸಾರ್ವಜನಿಕರು ಮುಕ್ತವಾಗಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು.

ಕರ್ನಾಟಕದ ಇತರೆ ಪ್ರಮುಖ ನಗರಗಳ AQI ವಿವರ

ಕರ್ನಾಟಕದ ಇತರೆ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟವು (AQI) ಅತ್ಯಂತ ಉತ್ತಮವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಶುದ್ಧತೆ ಆರೋಗ್ಯಕರ ಮಟ್ಟದಲ್ಲಿದೆ. ಪ್ರವಾಸಿ ನಗರಿ ಮೈಸೂರು ಮತ್ತು ಕರಾವಳಿಯ ಮಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು (AQI 28 ರಿಂದ 35), ಹಸಿರು ವಲಯದಲ್ಲಿದೆ (ಅತ್ಯುತ್ತಮ ಗಾಳಿ). ಇನ್ನು ಉತ್ತರ ಕರ್ನಾಟಕದ ಪ್ರಮುಖ ನಗರಗಳಾದ ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ AQI ಮಟ್ಟವು 32 ರಿಂದ 45 ರಷ್ಟಿದ್ದು, ಉತ್ತಮ ವಾತಾವರಣವಿದೆ. ಗಣಿ ನಾಡು ಬಳ್ಳಾರಿಯಲ್ಲಿ ಇಂದಿನ ವಾಯು ಸೂಚ್ಯಂಕ 48 ರಷ್ಟಿದ್ದರೆ, ಕಲಬುರಗಿಯಲ್ಲಿ ಸ್ವಲ್ಪ ಮಟ್ಟಿಗೆ ಹೆಚ್ಚಾಗಿ ಅಂದರೆ 56 ರಷ್ಟ ದಾಖಲಾಗುವ ಮೂಲಕ ‘ತೃಪ್ತಿಕರ’ ವಲಯದಲ್ಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ