AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ

ಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತ ರ್ದುದೈವಿ. ಹತ್ತು ದಿನದ ಹಿಂದೆಯಷ್ಟೇ ವಿವಾಹವಾಗಿದ್ದ ಸೋಮಸುಂದರ್,  ಸಂಜೆಯ ವೇಳೆ ಸುಬ್ರಮಣ್ಯ ಭಾಗದಲ್ಲಿ ಭಾರೀ ಸಿಡಿಲು ಬಡಿದಿದೆ.

ಮಂಗಳೂರು: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ
ಮೃತ ವ್ಯಕ್ತಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on:May 03, 2024 | 11:05 PM

Share

ಮಂಗಳೂರು, ಮೇ.03: ಸಿಡಿಲು (lightning) ಬಡಿದು ನವವಿವಾಹಿತ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತ ರ್ದುದೈವಿ. ಹತ್ತು ದಿನದ ಹಿಂದೆಯಷ್ಟೇ ವಿವಾಹವಾಗಿದ್ದ ಸೋಮಸುಂದರ್,  ಸಂಜೆಯ ವೇಳೆ ಸುಬ್ರಮಣ್ಯ ಭಾಗದಲ್ಲಿ ಭಾರೀ ಸಿಡಿಲು ಬಡಿದಿದೆ. ಮಳೆ ಮುನ್ಸೂಚನೆ ಹಿನ್ನಲೆ ಅಂಗಳದಲ್ಲಿದ್ದ ಅಡಿಕೆ ರಾಶಿ ಮಾಡುತ್ತಿದ್ದ ವೇಳೆ  ಸೋಮ ಸುಂದರ್ ಗೆ ಸಿಡಿಲು ಬಡಿದಿದ್ದು, ಆಸ್ಪತ್ರೆ ಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ.

ಕಾರು ಓವರ್‌ಟೇಕ್‌ ವಿಚಾರಕ್ಕೆ ಗಲಾಟೆ, ಚಾಲಕನ ಮೇಲೆ ಹಲ್ಲೆ ಮಾಡಿ ಎಸ್ಕೇಪ್​

ಬೆಂಗಳೂರು, ಕಾರು ಓವರ್‌ಟೇಕ್‌ ಮಾಡುವ ವಿಷಯವಾಗಿ ಗಲಾಟೆ ನಡೆದು, ಬಳಿಕ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಬಳಿ ಇಂದು (ಮೇ.03) ಸಾಯಂಕಾಲ ನಡೆದಿದೆ.

ಇದನ್ನೂ ಓದಿ:ಬೆಂಗಳೂರು: ಗ್ರಾ.ಪಂಚಾಯತಿ ವಾಟರ್​ಮ್ಯಾನ್​ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

ರಾಷ್ಟ್ರೀಯ ಹೆದ್ದಾರಿ4 ತುಮಕೂರು-ಬೆಂಗಳೂರು ಮಾರ್ಗವಾಗಿ ಎರಡು ಕಾರುಗಳು ಬರುತ್ತಿದ್ದು, ಈ ನಡುವೆ ಇನ್ನೋವಾ ಕಾರಿಗೆ ಶಿಫ್ಟ್ ಕಾರು ಚಾಲಕ ಓವರ್ ಟೇಕ್ ಮಾಡಿದ್ದ. ಇಷ್ಟಕ್ಕೆ ಕೋಪಗೊಂಡ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಶಿಫ್ಟ್ ಕಾರು ಚಾಲಕನಿಗೆ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.

ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್

ಇನ್ನು ಗಲಾಟೆ ಹಿನ್ನಲೆ ಸ್ಥಳೀಯರು ಸೇರುತ್ತಿದ್ದಂತೆ ಕಾರಿನ ಜೊತೆ ನಾಲ್ವರು ಪರಾರಿಯಾಗಿದ್ದಾರೆ. ಹೆದ್ದಾರಿಯಲ್ಲಿ ಗಲಾಟೆ ಹಾಗೂ ಹಲ್ಲೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹಲ್ಲೆ ನಡೆಸಿ ಪರಾರಿಯಾದ ಇನ್ನೋವಾ ಕಾರಿನಲ್ಲಿದ್ದವರಿಗೆ ಪೊಲೀಸರ ಶೋಧ ನಡೆಸಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Fri, 3 May 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More