AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!

ಬೆಂಗಳೂರಿನ ಅಶೋಕ ನಗರದಲ್ಲಿರುವ ಆರ್ಮಿ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಸಂದೇಶವನ್ನು ಮಾಡಲಾಗಿದ್ದು. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಶ್ವಾನದಳ ಪರಿಶೀಲನೆ ನಡೆಸಿದೆ.

ಬೆಂಗಳೂರಿನ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!
ಆರ್ಮಿ ಶಾಲೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 18, 2024 | 4:41 PM

ಬೆಂಗಳೂರು (ಸೆಪ್ಟೆಂಬರ್.18): ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಇಂದು (ಸೆ.18) ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು (ಬುಧವಾರ) ಆಶೋಕ ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್‌ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ, ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

ಇದೊಂದು ಸುಳ್ಳು ಬೆದರಿಕೆ ಇ ಮೇಲ್ ಎಂಬುದು ಬೆಳಕಿಗೆ ಬಂದಿದೆ. ಇ ಮೇಲ್ ಬೆದರಿಕೆ ಸಂಬಂಧಿಸಿದಂತೆ ಆಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:35 pm, Wed, 18 September 24

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು