AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಟಶಕ್ತಿ ಓಡಿಸುತ್ತೇನೆಂದು ಹೋಟೆಲ್​ನಲ್ಲಿ ಪೂಜೆ: ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ

ಜ್ಯೋತಿಷಿಯೊಬ್ಬರು ಬೆಂಗಳೂರಿನ ಮಹಿಳೆಯೊಬ್ಬರಿಗೆ ಐದು ಲಕ್ಷ ರೂಪಾಯಿ ವಂಚಿಸಿದ್ದಾರೆ. ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಮಹಿಳೆಗೆ ಜ್ಯೋತಿಷಿ ನಿಮ್ಮಲ್ಲಿ ದುಷ್ಟಶಕ್ತಿಗಳು ಸೇರಿಕೊಂಡಿವೆ, ಪೂಜೆಗಳ ಮೂಲಕ ಓಡಿಸುವುದಾಗಿ ಹೇಳಿ ಹಣ ಪಡೆದಿದ್ದಾನೆ. ಮುಂದೇನಾಯ್ತು? ಪೂಜೆಗಳ ನಂತರ ಮಹಿಳೆಯ ಆರೋಗ್ಯ ಸುಧಾರಿಸಿತೇ? ಇಲ್ಲಿದೆ ಸಂಪೂರ್ಣ ವಿವರ.

ದುಷ್ಟಶಕ್ತಿ ಓಡಿಸುತ್ತೇನೆಂದು ಹೋಟೆಲ್​ನಲ್ಲಿ ಪೂಜೆ: ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 14, 2025 | 6:04 PM

Share

ಬೆಂಗಳೂರು, ಮೇ 14: ನಿಮ್ಮಲ್ಲಿರುವ ದುಷ್ಟಶಕ್ತಿಯನ್ನು ಓಡಿಸುತ್ತೇನೆ ಎಂದು ಜ್ಯೋತಿಷಿ (Astrologer) ಬೆಂಗಳೂರಿನ (Bengaluru) ವಿಭೂತಿಪುರದ ನಿವಾಸಿಯಾಗಿರುವ 33 ವರ್ಷದ ಮಹಿಳೆಯಿಂದ ಐದು ಲಕ್ಷ ರೂ. ಪಡೆದು ವಂಚಿಸಿದ್ದಾನೆ. ವಂಚಕನ ವಿರುದ್ಧ ವಂಚನೆಗೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಹಿಳೆ 2023ರ ಡಿಸೆಂಬರ್​ನಲ್ಲಿ ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ, ಮಹಿಳೆಯ ಕೈ ಮತ್ತು ಕಾಲುಗಳು ಊದಿಕೊಂಡಿದ್ದವು. ಈ ವಿಚಾರವನ್ನು ವಂಚನೆಗೊಳಗಾದ ಮಹಿಳೆ ತನ್ನ ಸ್ನೇಹಿತರೊಬ್ಬರಿಗೆ ಹೇಳಿದ್ದಾರೆ.

ಆಗ, ಮಹಿಳೆಯ ಸ್ನೇಹಿತರು ಓರ್ವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಾರೆ. ಜ್ಯೋತಿಷಿ, ಮಹಿಳೆಗೆ ನಿಮ್ಮನ್ನು 15 ದುಷ್ಟಶಕ್ತಿಗಳು ಕಾಡುತ್ತಿವೆ. ಪೂಜೆಗಳನ್ನು ಮಾಡುವ ಮುಖಾಂತರ ದುಷ್ಟಶಕ್ತಿಗಳನ್ನು ಓಡಿಸಬಹುದು ಎಂದಿದ್ದಾರೆ. ನಂತರ, ವಂಚನೆಗೊಳಗಾದ ಮಹಿಳೆ 2023 ರ ಡಿಸೆಂಬರ್​ 14 ರಂದು ತಮ್ಮ ಜಾತಕ ಮತ್ತು ಫೋಟೋಗಳನ್ನು ಜ್ಯೋತಿಷಿಗೆ ಕಳುಹಿಸಿದ್ದಾರೆ. ಹಾಗೇ, ಆನ್​ಲೈನ್​ ಮೂಲಕ ಹಣ ಪಾವತಿಸಿದ್ದಾರೆ. ಮೊದಲಿಗೆ ಮಹಿಳೆ ಜ್ಯೋತಿಷಿಗೆ 150 ರೂ. ನಂತರ 151 ರೂ. ವರ್ಗಾವಣೆ ಮಾಡಿದ್ದಾರೆ. ಬಳಿಕ, 1 ಲಕ್ಷ ರೂ. ನಗದು ರೂಪದಲ್ಲಿ ನೀಡುವುದರ ಜೊತೆಗೆ ಆನ್​ಲೈನ್​ನಲ್ಲಿ ಸುಮಾರು 4.2 ಲಕ್ಷ ರೂ. ವರ್ಗಾಯಿಸಿದ್ದಾರೆ.

ಹೋಟೆಲ್​ನಲ್ಲಿ ಪೂಜೆ ನಡೆಸಿದ್ದ ಜ್ಯೋತಿಷಿ

2024ರ ಸೆಪ್ಟೆಂಬರ್ 09 ರಂದು ಜ್ಯೋತಿಷಿ ಕೋರಮಂಗಲದ ಹೋಟೆಲ್​ವೊಂದರಲ್ಲಿ ಪೂಜೆ ಮಾಡಿದ್ದಾನೆ. ಈ ಪೂಜೆಯಲ್ಲಿ ವಂಚನೆಗೊಳಗಾದ ಮಹಿಳೆ ಕೂಡ ಭಾಗಿಯಾಗಿದ್ದರು. ಜ್ಯೋತಿಷಿ ಮೊದಲಿಗೆ ನಿಂಬೆ ಹಣ್ಣುಗಳನ್ನು ಕತ್ತರಿಸಿ, ಧೂಪ ಹಚ್ಚಿದ್ದಾನೆ. ನಂತರ ಮಹಿಳೆಯ ಮುಖಕ್ಕೆ ಬೂದಿ ಎರಚಿದ್ದಾನೆ. ನಂತರ, ಮಹಿಳೆಗೆ ನವಿಲು ಗರಿಗಳಿಂದ ಹೊಡೆದು, ಅವರ ಕೂದಲನ್ನು ಹಿಡಿದು “ಆತ್ಮ ದೂರ ಹೋಗು” ಎಂದು ಕಿರಿಚಿದ್ದಾನೆ. ಪೂಜೆಗಳೆಲ್ಲ ಮುಗಿದ ನಂತರ ದುಷ್ಟಶಕ್ತಿಗಳು ನಿಮ್ಮನ್ನು ಬಿಟ್ಟು ಹೋದವು ಎಂದಿದ್ದಾನೆ.

ಇದನ್ನೂ ಓದಿ: ಪಿಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ, ಛತ್ತೀಸ್​ಗಢ ಮೂಲದ ಟೆಕ್ಕಿ ಬಂಧನ

ಆದರೆ, ಮಹಿಳೆಯ ಆರೋಗ್ಯದಲ್ಲಿ ಮಾತ್ರ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಹಣ ಮರುಪಾವತಿಸುವಂತೆ ಜ್ಯೋತಿಷಿಗೆ ಸಂಪರ್ಕಿಸಲು ಯತ್ನಿಸಿದರು. ಆದರೆ, ಜ್ಯೋತಿಷಿ ಮಾತ್ರ ಮಹಿಳೆಯ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ನಂತರ ಮಹಿಳೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧಾರದ ಮೇಲೆ ಜ್ಯೋತಿಷಿ ವಿರುದ್ಧ ಬಿಎನ್​ಎಸ್​ ಸೆಕ್ಷನ್​ 318ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು