AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

ಜ್ಯೋತಿಷಿ ಮೋಹನ್ ಕುಮಾರ್ ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬೆಂಗಳೂರಿನ ಬ್ಯೂಟಿಷಿಯನ್ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಕುಟುಂಬದವರಿಗೆ ವಾಮಾಚಾರ ಮಾಡಿಸುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರಾಮನಗರ ಮತ್ತು ಮೈಸೂರಿನಲ್ಲಿಯೂ ಈ ಕೃತ್ಯ ನಡೆದಿದೆ. ಆರೋಪಿಯ ಕಾಟ ತಾಳಲಾರದೆ ಸಂತ್ರಸ್ತೆ ಸಿ.ಕೆ. ಅಚ್ಚುಕಟ್ಟು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!
ಬೆಂಗಳೂರು ಜ್ಯೋತಿಷಿ ಅತ್ಯಾಚಾರ
ರಾಚಪ್ಪಾಜಿ ನಾಯ್ಕ್
| Edited By: |

Updated on: May 03, 2026 | 8:00 AM

Share

ಬೆಂಗಳೂರು, ಮೇ.3: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ.

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಇದನ್ನೂ ಓದಿ: ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us