AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಇತ್ತೀಚೆಗೆ ರೌಡಿಶೀಟರ್​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಮೃತ ರೌಡಿಶೀಟರ್​ ಸಾಗರ್​
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 9:25 AM

Share

ಬೆಂಗಳೂರು: ಇತ್ತೀಚೆಗೆ ರೌಡಿಶೀಟರ್(Rowdy Sheeter)​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ. ರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡಿದ್ದ ಸಾಗರ್​ ಹಾಗೂ ನವೀನ್. ಬಳಿಕ ಮಾತಿಗೆ ಮಾತು ಬೆಳೆದು ಸಾಗರ್, ನವೀನ್ ನಡುವೆ ಜಗಳ ಶುರುವಾಗಿದೆ. ಈ ವೇಳೆ ಲಾಂಗ್​​ನಿಂದ ಹಲ್ಲೆ ಮಾಡಿದ್ದ ನವೀನ್ ಸಾಗರ್​ನನ್ನ​ ಕೊಲೆಗೈದಿದ್ದಾನೆ. ಈ ಕುರಿತು ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರೌಡಿಶೀಟರ್ ನವೀನ್​​​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್​ ಸುನೀಲ್​ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.

ಇದನ್ನೂ ಓದಿ:ಹುಣಸೂರು ಡಬಲ್ ಮರ್ಡರ್ ಕೇಸ್: ಜೈಲಿಂದ ಆರೋಪ ಮುಕ್ತನಾಗಿ ಹೊರಬಂದ ರೌಡಿಶೀಟರ್​ ಚಂದು ಭೀಕರ ಹತ್ಯೆ, ಹಂತಕರು ಯಾರು?

ಕೆಲ ದಿನಗಳ ಹಿಂದೆ ನನ್ನನ್ನ ಕೊಲೆ ಮಾಡಲು ಸ್ಕೆಚ್; ಬಾತ್ರೂಮ್​ನಲ್ಲಿ ನನ್ನ ಶವ ಸೀಗಬಹುದು ಹೇಳಿದ್ದ ಸುನೀಲ್​ ಹೌದು ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್​ ‘ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಅಥವಾ ಬಾತ್ರೂಮ್​ನಲ್ಲಿ ನಾನೇ ನೇಣುಹಾಕಿಕೊಂಡ ರೀತಿ ನಿಮಗೆ ಸಿಗಬಹುದು ಎಂದು ಸಹ ಹೆಳಿಕೊಂಡಿದ್ದ. ಈ ಹಿಂದೆ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ಇವೆಲ್ಲವನ್ನೂ ನೋಡುತ್ತಿದ್ದರೆ. ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ. ಆ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​