AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಇತ್ತೀಚೆಗೆ ರೌಡಿಶೀಟರ್​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಮೃತ ರೌಡಿಶೀಟರ್​ ಸಾಗರ್​
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 9:25 AM

Share

ಬೆಂಗಳೂರು: ಇತ್ತೀಚೆಗೆ ರೌಡಿಶೀಟರ್(Rowdy Sheeter)​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ. ರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡಿದ್ದ ಸಾಗರ್​ ಹಾಗೂ ನವೀನ್. ಬಳಿಕ ಮಾತಿಗೆ ಮಾತು ಬೆಳೆದು ಸಾಗರ್, ನವೀನ್ ನಡುವೆ ಜಗಳ ಶುರುವಾಗಿದೆ. ಈ ವೇಳೆ ಲಾಂಗ್​​ನಿಂದ ಹಲ್ಲೆ ಮಾಡಿದ್ದ ನವೀನ್ ಸಾಗರ್​ನನ್ನ​ ಕೊಲೆಗೈದಿದ್ದಾನೆ. ಈ ಕುರಿತು ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರೌಡಿಶೀಟರ್ ನವೀನ್​​​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್​ ಸುನೀಲ್​ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.

ಇದನ್ನೂ ಓದಿ:ಹುಣಸೂರು ಡಬಲ್ ಮರ್ಡರ್ ಕೇಸ್: ಜೈಲಿಂದ ಆರೋಪ ಮುಕ್ತನಾಗಿ ಹೊರಬಂದ ರೌಡಿಶೀಟರ್​ ಚಂದು ಭೀಕರ ಹತ್ಯೆ, ಹಂತಕರು ಯಾರು?

ಕೆಲ ದಿನಗಳ ಹಿಂದೆ ನನ್ನನ್ನ ಕೊಲೆ ಮಾಡಲು ಸ್ಕೆಚ್; ಬಾತ್ರೂಮ್​ನಲ್ಲಿ ನನ್ನ ಶವ ಸೀಗಬಹುದು ಹೇಳಿದ್ದ ಸುನೀಲ್​ ಹೌದು ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್​ ‘ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಅಥವಾ ಬಾತ್ರೂಮ್​ನಲ್ಲಿ ನಾನೇ ನೇಣುಹಾಕಿಕೊಂಡ ರೀತಿ ನಿಮಗೆ ಸಿಗಬಹುದು ಎಂದು ಸಹ ಹೆಳಿಕೊಂಡಿದ್ದ. ಈ ಹಿಂದೆ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ಇವೆಲ್ಲವನ್ನೂ ನೋಡುತ್ತಿದ್ದರೆ. ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ. ಆ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್