Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಎಲ್​​ಸಿ ಕಾರಿನ ನಂಬರ್ ಬಳಸಿ, ಕದ್ದ ಕಾರು ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಜೆಡಿಎಸ್​ ಎಂಎಲ್​ಸಿ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಿದ್ದ ಐಕ್ಯೂ ಕಾರ್ ಶೋ ರೂಂನ ಮಾಲೀಕನನ್ನ ಬಂಧಿಸಲಾಗಿದೆ.

Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 25, 2023 | 9:49 AM

ಬೆಂಗಳೂರು: ಕದ್ದ ಕಾರುಗಳ ನಂಬರ್​ ಬದಲಾಯಿಸಿ ಮಾರಾಟ ಮಾಡಿರುವ ಕುರಿತು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾರು ಶೋ ರೂಂ ಒಂದರಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.  ಜೆಡಿಎಸ್​ ಎಂಎಲ್​ಸಿ ಆಗಿರುವ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ. ಇದೀಗ ಕಾರು ಶೋ ರೂಂ ಮಾಲೀಕ ಶಹಬಾಜ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿ ಬಳಿ ಇರುವ ಪ್ರತಿಷ್ಟಿತ ಕಾರು ಶೋರೂಂನ ಎದುರುಗಡೆ ಎಂಎಲ್​ಸಿ ಕಾರಿನ ನಂಬರ್ ಇರುವ ಕಾರೊಂದು ನಿಂತಿತ್ತು. ಇದನ್ನ ನೋಡಿದ ಭೋಜೇಗೌಡ ಅವರ ಪಿಎ ಮಾದೇಶ್ ಶಾಕ್​ ಆಗಿದ್ದಾರೆ. ಅನುಮಾನಗೊಂಡ ಮಾದೇಶ್​ ಶೋರೂಂನಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಕಾರು ಮಾರಾಟಕ್ಕಿಟ್ಟಿರುವ ಬಗ್ಗೆ ಗೊತ್ತಾಗಿದೆ.

ಕೂಡಲೇ ಎಂಎಲ್​ಸಿ ಭೋಜೇಗೌಡ ಪಿಎ ಮಾದೇಶ್ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು,. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬಳಿಕ ಕದ್ದ ಕಾರುಗಳಿಗೆ ನಂಬರ್​ ಚೇಂಜ್​ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್