AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಗೋದಾಮು ಮಾಲೀಕನ ಪುತ್ರ ಪೊಲೀಸರ ವಶಕ್ಕೆ

ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304 ಅಡಿ ಎಫ್​ಐಆರ್​​ ದಾಖಲಾಗಿದೆ.

ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಗೋದಾಮು ಮಾಲೀಕನ ಪುತ್ರ ಪೊಲೀಸರ ವಶಕ್ಕೆ
ಪಟಾಕಿ ಗೋಡೌನ್​ ಅಗ್ನಿ ದುರಂತ
TV9 Web
| Edited By: ವಿವೇಕ ಬಿರಾದಾರ|

Updated on:Oct 08, 2023 | 7:00 AM

Share

ಬೆಂಗಳೂರು ಅ.08: ಆನೇಕಲ್ (Anekal) ತಾಲೂಕಿನ ಅತ್ತಿಬೆಲೆಯಲ್ಲಿ (Attibele) ಪಟಾಕಿ ಗೋದಾಮಿನಲ್ಲಿ (Firecrackers Godown) ಶನಿವಾರ ಭಾರಿ ಅಗ್ನಿ ಅವಘಡ (Explosion) ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304 ಅಡಿ ಎಫ್​ಐಆರ್​​ ದಾಖಲಾಗಿದೆ.

ಐಪಿಸಿ ಸೆಕ್ಷನ್ 337 – ಇತರರ ಜೀವ ಮತ್ತು ಸುರಕ್ಷತೆಗೆ ಧಕ್ಕೆ, ಐಪಿಸಿ ಸೆಕ್ಷನ್ 338 – ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಧಕ್ಕೆ ಮಾಡುವುದು. 304- ಅಪರಾಧಿ ನರಹತ್ಯೆ (ಕೊಲೆಗೆ ಸಮಾನವಲ್ಲ) 9 (ಬಿ) ಸ್ಪೋಟಕ ವಸ್ತು ಅಡಿ ಪ್ರಕರಣ ದಾಖಲಾಗಿದೆ.

ಗೋದಾಮು ಮಾಲೀಕನ ಪುತ್ರ ಪೊಲೀಸರ ವಶಕ್ಕೆ

ಶನಿವಾರ ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಪಟಾಕಿ ಇಳಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಗೋದಾಮಿನ ನಿರ್ಲಕ್ಷ್ಯದಿಂದ ಅಂತ ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದರು.

ಪಟಾಕಿ ಯಾರು ಕಳಿಸಿದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಪಟಾಕಿ ಆರ್ಡರ್ ಬಂದಮೇಲೆ ಇಲ್ಲಿನ ದಾಖಲೆ ಪಡೆದು ಸಾಗಿಸಬೇಕು. ಜೊತೆಗೆ ಪಟಾಕಿ ಸಾಗಾಣಿಕೆ ವೇಳೆಯೂ ಎಸ್​​ಒಪಿ ಪಾಲಿಸಬೇಕಾಗುತ್ತೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ. ಪಟಾಕಿಗಳನ್ನು ತಮಿಳುನಾಡಿನ ಧರ್ಮಪುರಿಯಿಂದ ತಂದಿರುವ ಮಾಹಿತಿ ಇದೆ. ದುರಂತ ಬಗ್ಗೆ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಲಾಗುತ್ತದೆ. ಗಾಯಾಳುಗಳಿಂದಲೇ ದೂರು ಪಡೆಯಲಾಗಿದೆ. ನರಹತ್ಯೆ ಎಂಬ ಆರೋಪದ ಮೇಲೆ ದೂರು ತೆಗೆದುಕೊಳ್ಳಲಾಗಿದೆ. ಯಾವ್ಯಾವ ಇಲಾಖೆಯಿಂದ ಲೋಪ ಆಗಿದೆ ಆ ಬಗ್ಗೆಯೂ ತನಿಖೆ ನಡೆಯುತ್ತದೆ. ಯಾರೇ ಇರಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಇದನ್ನೂ ಓದಿ: ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಇನ್ನು ಗೋದಾಮು ಮಾಲೀಕನ ಪುತ್ರ ನವೀನ್​ನ್ನು ವಶಕ್ಕೆ ಪಡೆದಿದ್ದೇವೆ. ಘಟನೆಯಲ್ಲಿ ನವೀನ್​ಗೂ ಗಾಯಗಳಾಗಿವೆ, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪಟಾಕಿ ದುರಂತ ಸ್ಥಳದಲ್ಲಿದ್ದ ಅಧಿಕಾರಿಗಳು, ಎಫ್ಎಸ್ಎಲ್ ಹಾಗೂ ಅಗ್ನಿಶಾಮಕ ಅಧಿಕಾರಿಗಳ ವರದಿಯ ಮೇಲೆ ಕ್ರಮ ಕೈಗೊಳ್ಳಲಾಗುತ್ತೆ.

ಒಂಬತ್ತು ಜನರ ಗುರುತು ಸದ್ಯಕ್ಕೆ ಸಿಕ್ಕಿದೆ. ಇನ್ನೂ ಮೂರು ಜನ ಗಂಡಸರ ಶವ ಪತ್ತೆಯಾಗಿಲ್ಲ. ಗಾಯಾಳುಗಳಲ್ಲಿ ವೆಂಕಟೇಶ ಎಂಬಾತನ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರು ಔಟ್ ಆಫ್ ಡೇಂಜರ್ ಇದ್ದಾರೆ.

ದುರಂತ ಸ್ಥಳಕ್ಕೆ ಇಂದು ಸಿಎಂ ಭೇಟಿ

ದುರಂತ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 am, Sun, 8 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ