AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪಟಾಕಿ ಅಗ್ನಿ ದುರಂತ: ಮೃತರ ಗುರುತು ಪತ್ತೆ, ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ನಸುಕಿನಜಾವ 4.30 ರ ವರೆಗೆ ಕಾರ್ಯಾಚರಣೆ ನಡೆಸಲಾಗಿದೆ. 14 ಜನ ಮೃತರಾಗಿದ್ದರೆ. 11 ದೇಹಗಳ ಗುರುತು ಪತ್ತೆಯಾಗಿದೆ. ಮೂರು ದೇಹಗಳ ಗುರುತು ಪತ್ತೆಯಾಗಬೇಕಿದೆ ಎಂದರು.

ಬೆಂಗಳೂರು ಪಟಾಕಿ ಅಗ್ನಿ ದುರಂತ: ಮೃತರ ಗುರುತು ಪತ್ತೆ, ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ
ಸುಟ್ಟು ಕರಕಲಾದ ಪಟಾಕಿ ಗೋಡೌನ್
Kiran Surya
| Edited By: |

Updated on:Oct 08, 2023 | 11:28 AM

Share

ಬೆಂಗಳೂರು ಅ.08: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆಂದು ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ ಸಂಗ್ರಹಿಸಿದ್ದ ಪಟಾಕಿ ಗೋಡೌನಲ್ಲಿ (Firecrackers Godown) ಭಾರಿ ಅಗ್ನಿ ಅವಘಡ (Explosion) ಸಂಭವಿಸಿ 14 ಜನ ಕಾರ್ಮಿಕರು (Workers) ಸಜೀವದಹನವಾಗಿದ್ದರು. ಇದರಲ್ಲಿ ಇಬ್ಬರು ಬಾಲ ಕಾರ್ಮಿಕರು ನಿಧರಾಗಿದ್ದಾರೆ. ಈ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ.

ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ನಸುಕಿನಜಾವ 4.30 ರ ವರೆಗೆ ಕಾರ್ಯಾಚರಣೆ ನಡೆಸಲಾಗಿದೆ. 14 ಜನ ಮೃತರಾಗಿದ್ದರೆ. 11 ದೇಹಗಳ ಗುರುತು ಪತ್ತೆಯಾಗಿದೆ. ಮೂರು ದೇಹಗಳ ಗುರುತು ಪತ್ತೆಯಾಗಬೇಕಿದೆ. ಸ್ಥಳಕ್ಕೆ ತಮಿಳುನಾಡಿನ ಇಬ್ಬರು ಸಚಿವರು ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದಾರೆ ಎಂದು ಹೇಳಿದರು.

10 ಶವಗಳನ್ನು ಡಿಎನ್​ಎ ಪರೀಕ್ಷೆಗೆ ಒಳಪಡಿಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡುತ್ತೇವೆ. ಗೋಡೌನ್​ ಮಾಲೀಕ ರಾಮಸ್ವಾಮಿ ರೆಡ್ಡಿಯನ್ನು ವಶಕ್ಕೆ ಪಡೆದಿದ್ದೇವೆ. ನಿರ್ವಹಣೆ ಮಾಡುತ್ತಿದ್ದ ರಾಮಸ್ವಾಮಿ ಪುತ್ರ ನವೀನ್ ರೆಡ್ಡಿ ಸಹ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಗೋದಾಮು ಮಾಲೀಕನ ಪುತ್ರ ಪೊಲೀಸರ ವಶಕ್ಕೆ

ಅವಘಡದಲ್ಲಿ ನಿಧರಾದ, ಗಾಯಾಳುಗಳ ಮಾಹಿತಿ

ದುರಂತದಲ್ಲಿ 14 ಕಾರ್ಮಿಕರು ಸಾವೀಗಿಡಾಗಿದ್ದು, ಮೂವರಿಗೆ ಗಾಯಗಳಾಗಿವೆ. ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆ, ಕಲ್ಲಕುರುಚಿ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇದರಲ್ಲಿ ಎಂಟು ಜನ ಯುವಕರು ಧರ್ಮಪುರಿ ಜಿಲ್ಲೆ ಹರೂರ್ ತಾಲೂಕಿನ ಅಮ್ಮಾಪೇಟ್ಟೈ ನಿವಾಸಿಗಳು ಎಂದು ಮಾಹಿತಿ ದೊರೆತಿದೆ.

ಧರ್ಮಪುರಿ ಜಿಲ್ಲೆಯ ಎಂಟು ಯುವಕರು ಸಾವು

ಪ್ರಕಾಶ್ (20), ವೆಟ್ಟಪ್ಪನ್(25), ಆದಿಕೇಶವನ್(23), ವಿಜಯರಾಘವನ್(20), ಇಳಂಬರುತಿ(19), ಆಕಾಶ್(23), ಗಿರಿ(22), ಸಚಿನ್(22) ಮೃತ ಯುವಕರು.

ಕಲ್ಲಕುರುಚಿ ಜಿಲ್ಲೆಯ ಮೂವರು ಯುವಕರು ಸಾವು

ಪ್ರಭಾಕರನ್(17), ವಸಂತರಾಜ್(23), ಅಪ್ಪಾಸ್(23) ಮೃತರು. ಇನ್ನೂ ಮೂವರ ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಮೃತದೇಹಗಳು ಅತ್ತಿಬೆಲೆಯ ಆಕ್ಸ್​ಫರ್ಡ್​ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಗಾಯಗೊಂಡವರು

ಬಾಲಾಜಿ ಪಟಾಕಿ ಗೋದಾಮು ಮಾಲಿಕ ರಾಮಸ್ವಾಮಿ ರೆಡ್ಡಿ ಮಗ ನವೀನ್, ರಾಜೇಶ್​ ಮತ್ತು ವೆಂಕಟೇಶ್​. ಸಂಜಯ, ಚಂದ್ರು, ಪೌಲ್​ ಕಬೀರ್​​. ಇವರನ್ನು ಅತ್ತಿಬೆಲೆಯ ಆಕ್ಸ್​ಫರ್ಡ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆನೇಕಲ್ ಉಪ ವಿಭಾಗದ ಅತ್ತಿಬೆಲೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಕುಂಟುಂಬಗಳಿಗೆ ಪರಿಹಾರ ಘೋಷಣೆ

ಮೃತರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ಮೂರು ಲಕ್ಷ ರೂ. ಪರಿಹಾರ ಘೋಷಿಸಿದೆ. ಹೆಚ್ಚಿನ ಪರಿಹಾರಕ್ಕೆ ಮೃತರ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಜೊತೆ ಚರ್ಚಿಸಿ ಮತ್ತಷ್ಟು ಪರಿಹಾರ ಕೊಡಿಸುತ್ತೇವೆ ಎಂದು ಅತ್ತಿಬೆಲೆಯಲ್ಲಿ ತಮಿಳುನಾಡು ಸಚಿವ ಮಾ.ಸುಬ್ರಮಣಿಯನ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:27 am, Sun, 8 October 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ