AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದವ ದುರಂತ ಸಾವು

ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡೋ ಚಾಲಕ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.

ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ  ಜಗಳ ಕೊಲೆಯಲ್ಲಿ ಅಂತ್ಯ, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದವ ದುರಂತ ಸಾವು
ಆಟೋ ಚಾಲಕ, ಕೊಲೆ ಆರೋಪಿ
ರಮೇಶ್ ಬಿ. ಜವಳಗೇರಾ
|

Updated on:Jun 12, 2023 | 2:51 PM

Share

ಬೆಂಗಳೂರು: ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ(Bengaluru) ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ. ಬಾಡಿಗೆ ವಿಚಾರಕ್ಕೆ ಆಟೋ ಚಾಲಕ(auto driver) ಅಶ್ವಥ್ ಎನ್ನುವಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ. ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದ ಯುವಕ. ಮತ್ತೊಬ್ಬ ಯುವಕ ಅಯೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: Dutch Vlogger Thrashed: ಬೆಂಗಳೂರಿನಲ್ಲಿ ವಿದೇಶಿ ಯೂಟ್ಯೂಬರ್ ಮೇಲೆ ಹಲ್ಲೆಗೆ ಯತ್ನ, ಚಿಕ್ಕಪೇಟೆ ವ್ಯಾಪಾರಿ ಅರೆಸ್ಟ್

ಮೃತ ಅಹ್ಮದ್ ಮತ್ತು ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು. ಇವರಿಬ್ಬರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಯಶವಂತಪುರದಲ್ಲಿ ವಾಸವಿದ್ದರು. ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಆಟೋ ಹಿಡಿದು ಮನೆಗೆ ಹೊರಟ್ಟಿದ್ದಾರೆ. ಆಟೋ ಹತ್ತಿಸಿಕೊಂಡು ಚಾಲಕ, ಡಬಲ್ ಬಾಡಿಗೆ ಕೇಳಿದ್ದಾನೆ. ಈ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಆಟೋ ಚಾಲಕ ಮಾರಾಕಾಸ್ತ್ರಗಳಿಂದ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಅಹ್ಮದ್ ಮೃತಪಟ್ಟಿದ್ದು, ಅಯೂಬ್ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ನಿವೇಶನ ವಿಚಾರಕ್ಕೆ ಗಲಾಟೆ, ಮೂವರಿಗೆ ಗಾಯ

ಬೆಂಗಳೂರು: ನಿವೇಶನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಹಮ್ಮದ್​ ಜಾವಿದ್​(47), ಪತ್ನಿ ನಸೀಮ್ ತಾಜ್(43), ಸೋದರ ಮಹಮ್ಮದ್​ ಆಬಿದ್(43) ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಜಮೀರ್ ಎನ್ನುವಾತ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Published On - 2:33 pm, Mon, 12 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್