ಕಾರಿನ ಗಾಜಿಗೆ ಆಟೋ ಚಾಲಕನಿಂದ ಯದ್ವಾತದ್ವಾ ಗುದ್ದು: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್

|

Updated on: Mar 04, 2025 | 3:02 PM

ಬೆಂಗಳೂರಿನಲ್ಲಿ ಆಟೋ ಚಾಲಕನ ರೋಡ್ ರೇಜ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ತ್ವರಿತ ಕ್ರಮವನ್ನು ಶ್ಲಾಘಿಸಲಾಗಿದೆ. ಆದರೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಡವೂ ಎದುರಾಗಿದೆ. ರೋಡ್ ರೇಜ್ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾರಿನ ಗಾಜಿಗೆ ಆಟೋ ಚಾಲಕನಿಂದ ಯದ್ವಾತದ್ವಾ ಗುದ್ದು: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್
ಕಾರಿನ ಗಾಜಿಗೆ ಆಟೋ ಚಾಲಕನಿಂದ ಯದ್ವಾತದ್ವಾ ಗುದ್ದು
Follow us on

ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ರಸ್ತೆಯಲ್ಲಿ ಕೋಪದಿಂದ ಕಿರುಚಾಡುತ್ತಾ ಕಾರಿನ ಗಾಜಿನ ಮೇಲೆ ಯದ್ವಾತದ್ವಾ ಗುದ್ದಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋ ಗಮನಿಸಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ರೋಡ್​ರೇಜ್ ಪ್ರಕರಣಗಳಿಗೆ ನಗರದಲ್ಲಿ ಆಸ್ಪದ ನೀಡುವುದಿಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ಜತೆಗೆ, ಆಟೊ ಚಾಲಕನ ದುಂಡಾವರ್ತನೆಯ ಹಾಗೂ ಆತನನ್ನು ಬಂಧಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಆಟಫ ಚಾಲಕನ ವರ್ತನೆಗೆ ಸಾಮಾಜಿಕ ಮಾಧ್ಯಮದಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಟೋ ಚಾಲಕನ ಕೋಪಕ್ಕೆ ನಿಖರವಾದ ಕಾರಣ ಏನೆಂಬುದು ಗೊತ್ತಾಗಿಲ್ಲವಾದರೂ, ಈ ದೃಶ್ಯಾವಳಿಗಳು ಬೆಂಗಳೂರು ಪೊಲೀಸರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮಾಡಿದ್ದಂತೂ ನಿಜ.

ಇದನ್ನೂ ಓದಿ
ಕರ್ನಾಟಕದಲ್ಲಿ ಇನ್ಮುಂದೆ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ
ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
Mann Ki Baat: ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ವೈರಲ್ ಆದ ಈ ವಿಡಿಯೋ ಕ್ಲಿಪ್‌ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಟ್ವಿಟರ್​​ ಹ್ಯಾಂಡಲ್​ನಿಂದ ಪ್ರತಿಕ್ರಿಯಿಸಲಾಗಿದ್ದು, ‘ರೋಡ್​​ ರೇಜ್​​ ಅನ್ನು ಸಹಿಸುವುದಿಲ್ಲ. ನಮ್ಮ ತಂಡ ತಕ್ಷಣ ಕ್ರಮ ಕೈಗೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಸ್ತೆಯಲ್ಲಿ ಅಜಾಗರೂಕ ವರ್ತನೆ ಜೀವಗಳಿಗೆ ಅಪಾಯವನ್ನುಂಟು ಮಾಡುತ್ತದೆ – ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ’ ಎಂದು ಉಲ್ಲೇಖಿಸಿದೆ.

ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಟ್ವೀಟ್


ಈ ವಿಡಿಯೋಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು ವತಯಕ್ತವಾಗಿವೆ. ಅನೇಕ ಬಳಕೆದಾರರು ನಗರದಲ್ಲಿ ಹೆಚ್ಚುತ್ತಿರುವ ರೋಡ್​ ರೇಜ್ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವರು ಪೊಲೀಸರ ತ್ವರಿತ ಪ್ರತಿಕ್ರಿಯೆಯನ್ನು ಶ್ಲಾಘಿಸಿದರೆ, ಇನ್ನು ಕೆಲವರು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

‘ಬೆಂಗಳೂರು ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ನಗರದ ಇಡೀ ಆಟೋ ಚಾಲಕ ಸಮುದಾಯವೇ ಇತರ ವಾಹನ ಚಾಲಕರಿಗೆ ಒಂದು ಬೆದರಿಕೆಯಾಗಿ ಪರಿಣಮಿಸಿದೆ. ಅವರು ಸ್ಥಳೀಯರು ಮತ್ತು ವಲಸಿಗರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಟೀಕಿಸಿದ್ದಾರೆ.

ಬೆಂಗಳೂರಿನಂಥ ನಗರದಲ್ಲಿ, ಪೊಲೀಸರಿಂದ ಇಂತಹ ತ್ವರಿತ ಕ್ರಮವು ನಮ್ಮನ್ನು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡುತ್ತದೆ. ದಯವಿಟ್ಟು ಸಾಮಾನ್ಯ ಜನರ ಹಿತದೃಷ್ಟಿಯಿಂದ ದೃಢವಾಗಿ ಮತ್ತು ದೃಢನಿಶ್ಚಯದಿಂದ ಇರಿ. ಪೊಲೀಸರಿಗೆ ಬಿಗ್ ಸೆಲ್ಯೂಟ್ ಎಂದು ಮತ್ತೊಬ್ಬ ಬಳಕೆದಾರರು ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಅಧಿಕೃತ ಭಾಷೆ ಯಾವುದು? ಇಲ್ಲಿ ಕೊಟ್ಟ ಉತ್ತರ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ಆದಾಗ್ಯೂ, ಕೆಲವರು ಕೇವಲ ಬಂಧನವಷ್ಟೇ ಸಾಲದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಒಬ್ಬ ಬಳಕೆದಾರರು ‘ಆರೋಪಿಯ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಿ. ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಪ್ರಯೋಜನವಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.

ಹಲ್ಲೆಯ ಮೊಬೈಲ್ ರೆಕಾರ್ಡಿಂಗ್ ಇಲ್ಲದಿದ್ದರೆ ಮತ್ತು ವಾಹನ ಮಾಲೀಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಇಂಥ ಕ್ರಮ ಕೈಗೊಳ್ಳುತ್ತಿದ್ದರೇ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Tue, 4 March 25