AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಖಾಡಕ್ಕಿಳಿದ ಆರ್​​ಟಿಓ ಅಧಿಕಾರಿಗಳು: ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಆಟೋಗಳು ಸೀಜ್

ಬೆಂಗಳೂರಿನಲ್ಲಿ ಆಟೋ ಚಾಲಕರು ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಆರ್​​ಟಿಓ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ದಾಳಿ ನಡೆಸಿ 100ಕ್ಕೂ ಅಧಿಕ ಆಟೋಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಬೆನ್ನಲ್ಲೇ ಹೆಚ್ಚು ದರ ವಸೂಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಅಖಾಡಕ್ಕಿಳಿದ ಆರ್​​ಟಿಓ ಅಧಿಕಾರಿಗಳು: ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಆಟೋಗಳು ಸೀಜ್
ಆರ್​ಟಿಓ ಅಧಿಕಾರಿಗಳಿಂದ ಪರಿಶೀಲನೆ
ಕಿರಣ್​ ಸೂರ್ಯ
| Edited By: |

Updated on:Jun 30, 2025 | 1:01 PM

Share

ಬೆಂಗಳೂರು, ಜೂನ್​ 30: ಸರ್ಕಾರ ಇತ್ತೀಚೆಗೆ ಕರ್ನಾಟಕದಲ್ಲಿ ರ‍್ಯಾಪಿಡೋ (rapido), ಉಬರ್ ಬೈಕ್ ಟ್ಯಾಕ್ಸಿಯನ್ನ ಬ್ಯಾನ್ ಮಾಡಿತ್ತು. ಇದರ ಬೆನ್ನಲ್ಲೇ ಆಟೋ ಚಾಲಕರು (auto drivers) ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಹೀಗಾಗಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಆಟೋ ಚಾಲಕರಿಗೆ ಆರ್​ಟಿಓ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.

ಸಾರಿಗೆ ಇಲಾಖೆ ಕಮಿಷನರ್​ಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್​ ಸೂಚನೆ

ಆಟೋ ಚಾಲಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆ ನಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ಮಾಡಲಾಗಿದೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆ್ಯಪ್ ಆಧಾರಿತ ಮತ್ತು ಇನ್ನಿತರ ಆಟೋ ಚಾಲಕರ ವಿರುದ್ಧ, ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ಪ್ರಯಾಣಿಕರಿಂದ ಹಗಲು ದರೋಡೆ ಮಾಡಿದರೆ ಅಂತವರ ಪರ್ಮೀಟ್ ರದ್ದು ಪಡಿಸುವಂತೆ ಸಾರಿಗೆ ಇಲಾಖೆ ಕಮಿಷನರ್​ಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

100ಕ್ಕೂ ಅಧಿಕ ಆಟೋ ಸೀಜ್ ಮಾಡಿದ್ದೇವೆ: ಆಯುಕ್ತೆ ಶೋಭಾ 

ಈ ಕುರಿತಾಗಿ ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಅವರು ಪ್ರತಿಕ್ರಿಯಿಸಿದ್ದು, ಸಾರ್ವಜನಿಕರಿಂದ ಆಟೋ ದರ ಹೆಚ್ಚಳ ವಸೂಲಿ ದೂರು ಬಂದಿತ್ತು. ಹೀಗಾಗಿ ಇಂದು ಆಟೋ ದರ ಪರಿಶೀಲನೆ ಮಾಡಲು ಮುಂದಾಗಿದ್ದೇವೆ. ಬೆಳಗ್ಗೆಯಿಂದ ಈವರೆಗೆ ನಗರದಲ್ಲಿ 100ಕ್ಕೂ ಅಧಿಕ ಆಟೋ ಸೀಜ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರಿಂದ ಭಾರಿ ಮಳೆ
Image
ಕಾಂಗ್ರೆಸ್ ಗೊಂದಲ, ಬಿಕ್ಕಟ್ಟು ಶಮನಕ್ಕೆ ಇಂದು ಬೆಂಗಳೂರಿಗೆ ಸುರ್ಜೇವಾಲ
Image
ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಐಶ್ವರ್ಯಾ ಮಹಾದೇವ್ ನೂತನ ಮುಖ್ಯಸ್ಥೆ
Image
ಬೆಳಗಾವಿಯಲ್ಲಿ ಗೋ ರಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ

ಇದನ್ನೂ ಓದಿ: ಜಲಮಂಡಳಿ ಕಾಮಗಾರಿ: ಜುಲೈ 2ರ ವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

ದುಪ್ಪಟ್ಟು ದರ ಪರಿಶೀಲನೆ ವೇಳೆ ಇತರೆ ದಾಖಲೆಗಳೂ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. 250ಕ್ಕೂ ಅಧಿಕ ದೂರನ್ನು ಆಟೋ ಚಾಲಕರ ಮೇಲೆ ದಾಖಲೆ ಮಾಡಿಕೊಂಡಿದ್ದು, ಅಗ್ರಿಗೇಟರ್ ಕಂಪೆನಿಗಳ ಮೇಲೂ ನಾವು ನಿಗಾ ಇಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯ ಭಯಾನಕ ಕೊಲೆ: ಶವವನ್ನ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಪರಾರಿ

ಸರ್ಕಾರ ನೀಡಿರುವ ಆಟೋ ದರಕ್ಕೆ 5% ಸರ್ವೀಸ್ ಚಾರ್ಜ್ ಹಾಕಬಹುದು. ಅದು ಬಿಟ್ಟರೆ ದುಪ್ಪಟ್ಟು ದರ ವಿಧಿಸುವ ಅಧಿಕಾರ ಅಗ್ರಿಗೇಟರ್ ಕಂಪೆನಿಗಳಿಗಿಲ್ಲ. ಎಲ್ಲಾ ಕಡೆ ದಾಳಿ ನಡೆಯುತ್ತಿದೆ. ಇದನ್ನು ಹತೋಟಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಬ್ಬರು ಹೇಳಿದ್ದಿಷ್ಟು 

ರೂಪಾ ಎಂಬ ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿದ್ದು, ರ‍್ಯಾಪಿಡೋ ಆ್ಯಪ್ ಮೂಲಕ ಆಟೋ ಬುಕ್ ಮಾಡಿದ್ದೆ. ಬಿಇಎಸ್​ಯಿಂದ ಬಜಾಜ್ ಪಾಪ್ಯುಲರ್​ ವರೆಗೆ ಆಟೋ ಬುಕ್ ಮಾಡಿದ್ದೆ. 1 ಕಿಮೀ ಒಳಗಡೆ ದೂರ ಇದೆ. ಅದಕ್ಕೆ 50 ರೂ ತೋರಿಸಿತು ಬುಕ್ ಮಾಡಿದ್ದೇನೆ. ಆ್ಯಪ್ ಮೂಲಕ ಬುಕ್ ಮಾಡಿಲ್ಲ ಅಂದರೆ ಆಟೋದವರು 100 ರೂ ಕೇಳುತ್ತಾರೆ. ಬೆಳಿಗ್ಗೆ 60 ರೂ ಕೊಟ್ಟು ಹೋಗಿದ್ದೆ. ಈಗ 50 ರೂ. ತೋರಿಸಿತು ಬುಕ್ ಮಾಡಿ ಬಂದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:00 pm, Mon, 30 June 25

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ