AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ದರ ಪ್ರತಿ ಲೀಟರ್‌ಗೆ 5.73 ರೂ. ಏರಿಕೆಯಾಗಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಲು ಚಾಲಕರು ಒತ್ತಾಯಿಸುತ್ತಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ ಹಾಗೂ ಗ್ಯಾಸ್ ಕೊರತೆಯಿಂದ ಕಂಗಾಲಾಗಿರುವ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾರಿಗೆ ಸಚಿವರ ಮಧ್ಯಸ್ಥಿಕೆಗೆ ಆಗ್ರಹಿಸಿದ್ದಾರೆ. ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!
ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ?
ಭಾವನಾ ಹೆಗಡೆ
|

Updated on: May 05, 2026 | 8:32 AM

Share

ಬೆಂಗಳೂರು, ಮೇ 05: ರಾಜಧಾನಿಯ ಜನತೆಗೆ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರವು ಆಟೋ ಎಲ್.ಪಿ.ಜಿ (LPG) ದರವನ್ನು ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಆಟೋ ಚಾಲಕರು, ಈಗ ಆಟೋ ಪ್ರಯಾಣ ದರವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿಗರಿಗೆ ಆಟೋ ಚಾರ್ಜ್​ ಏರಿಕೆಯ ಬಿಸಿ ಮುಟ್ಟುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕಳೆದ ಕೆಲವು ದಿನಗಳಿಂದ ಎಲ್.ಪಿ.ಜಿ ಕೊರತೆ ಎದುರಾಗಿತ್ತು. ಇದರಿಂದಾಗಿ ಚಾಲಕರು ಗಂಟೆಗಟ್ಟಲೆ ಕ್ಯೂ ನಿಂತು ಕಂಗಾಲಾಗಿದ್ದರು. ಈ ಸಂಕಷ್ಟದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಬಂಕ್‌ಗಳಲ್ಲಿ ಬೆಲೆ ಏರಿಕೆ ಮಾಡಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಬಂಕ್​ಗಳೆ ಬೆಲೆ ಏರಿಕೆ ಮಾಡಿದಾಗ, ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಂಕ್‌ಗಳು ಕೂಡ ದರವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದ ಆಟೋ ಚಾಲಕರು ಕೆಂಡಾಮಂಡಲಾಗಿದ್ದಾರೆ.

ಬೇಡಿಕೆಗಳೇನು?

ಸದ್ಯ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ. ಗ್ಯಾಸ್ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಸಾರಿಗೆ ಸಚಿವರು ಕೂಡಲೇ ಸಭೆ ನಡೆಸಿ ನಮ್ಮ ಕಷ್ಟ ಆಲಿಸಬೇಕು ಎಂದು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸಂತೋಷ್ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ, ಚುನಾವಣೆ ಬೆನ್ನಲ್ಲೇ ಕೇಂದ್ರದ ಈ ಬೆಲೆ ಏರಿಕೆ ನಿರ್ಧಾರವು ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ.

ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು