AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಪ್ರಯಾಣ ದರ ಏರಿಕೆಗೂ ಮುನ್ನವೇ ಪ್ರಯಾಣಿಕರಿಗೆ ಸಂಕಷ್ಟ: ಅಗ್ರಿಗೇಟರ್ ಕಂಪನಿಗಳ ದುಪ್ಪಟ್ಟು ದರ ವಸೂಲಿ

ಬೆಂಗಳೂರು ಆಟೋ ಪ್ರಯಾಣ ದರ ಏರಿಕೆ: ಬೆಂಗಳೂರಿನಲ್ಲಿ ಸದ್ಯ ಆಟೋ ಮೀಟರ್ ಕನಿಷ್ಠ ದರ 30 ರುಪಾಯಿ ಇದೆ. ಈ ತಿಂಗಳು ಅಥವಾ ಮುಂದಿನ ತಿಂಗಳು 10 ರುಪಾಯಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ, ಅಗ್ರಿಗೇಟರ್ ಕಂಪನಿಗಳು ಅಧಿಕೃತವಾಗಿ ದರ ಏರಿಕೆಯಗುವುದಕ್ಕೂ ಮೊದಲೇ ಹೆಚ್ಚು ಹಣ ವಸೂಲಿ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿವೆ.

ಆಟೋ ಪ್ರಯಾಣ ದರ ಏರಿಕೆಗೂ ಮುನ್ನವೇ ಪ್ರಯಾಣಿಕರಿಗೆ ಸಂಕಷ್ಟ: ಅಗ್ರಿಗೇಟರ್ ಕಂಪನಿಗಳ ದುಪ್ಪಟ್ಟು ದರ ವಸೂಲಿ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on: May 27, 2025 | 8:00 AM

Share

ಬೆಂಗಳೂರು, ಮೇ 27: ಬೆಂಗಳೂರಿನಲ್ಲಿ  (Bengaluru) ಸದ್ಯ ಎರಡು ಕಿಮೀ ಪ್ರಯಾಣಕ್ಕೆ ಆಟೋ ಮೀಟರ್ ದರ ಕನಿಷ್ಠ 30 ರುಪಾಯಿ ಇದೆ. ಇದೀಗ ಆ ದರವನ್ನು ಎರಡು ಕಿಮೀ ಗೆ 40 ರುಪಾಯಿಗೆ‌ ಏರಿಕೆ (Auto Fare Hike) ಮಾಡಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಸಮ್ಮತಿಸಲಾಗಿದೆ. ಈ ತಿಂಗಳು ಅಥವಾ ಜೂನ್​ನಲ್ಲಿ ಆದೇಶ ಹೊರ ಬೀಳಬಹುದು ಎಂಬ ನಿರೀಕ್ಷೆ ಇದೆ. ಆದರೆ ಆ್ಯಪ್ ಆಧಾರಿತ ಕಂಪನಿಗಳು ಪ್ರಯಾಣಿಕರಿಂದ ಈಗಾಗಲೇ ದುಪ್ಪಟ್ಟು ದರವನ್ನು ವಸೂಲಿ ಮಾಡಲು ಮುಂದಾಗಿವೆ ಎಂಬ ಆರೋಪಗಳು ಕೇಳಿಬಂದಿವೆ. ಆ್ಯಪ್ ಆಧಾರಿತ ಕಂಪನಿಗಳು 30 ರುಪಾಯಿ ಇರುವ ಆಟೋ ಕನಿಷ್ಠ ದರವನ್ನು 50 ರುಪಾಯಿ ಪಡೆದುಕೊಳ್ಳುತ್ತಿವೆ ಎಂದು ಪ್ರಯಾಣಿಕರು ಆರೋಪಿಸಿದ್​ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎರಡು ಕಿಮೀ ಪ್ರಯಾಣದ ನಂತರದ ಪ್ರತಿ ಕಿಮೀಗೆ ಸದ್ಯ 15 ರುಪಾಯಿ ದರ ಇದೆ. ಆ್ಯಪ್ ಆಧಾರಿತ ಕಂಪನಿಗಳು ಇದನ್ನು 30 ರುಪಾಯಿಗೆ ಏರಿಕೆ ಮಾಡಿವೆ ಎಂಬ ದೂರುಗಳು ಕೇಳಿಬಂದಿವೆ. ಸದ್ಯ ನಗರದಲ್ಲಿ ಹಳೆಯ ಮೀಟರ್ ದರವೇ ಜಾರಿಯಲ್ಲಿದೆ. ಆದರೂ ಅಗ್ರಿಗೇಟರ್ ಕಂಪನಿಗಳಾದ ಓಲಾ, ಉಬರ್, ನಮ್ಮಯಾತ್ರಿ, ರ್ಯಾಪಿಡೋ ತಮಗೆ ತಾವೇ ದರವನ್ನು ಏರಿಕೆ ಮಾಡಿಕೊಂಡು ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿವೆ.

ಸರ್ಕಾರ ಸೂಚಿಸಿದ ದರವನ್ನು ಮಾತ್ರ ಪ್ರಯಾಣಿಕರಿಂದ ತೆಗೆದುಕೊಳ್ಳಬೇಕೆಂದು ಆದೇಶ ಇದೆ. ಅದನ್ನು ಮೀರಿ ಪ್ರಯಾಣಿಕರಿಂದ ಹೆಚ್ಚಿನ ದರವನ್ನು ಪಡೆದುಕೊಂಡರೆ ಅಂತಹ ಕಂಪನಿಗಳ ವಿರುದ್ಧ ಮೊದಲು ನೋಟಿಸ್ ನೀಡಲಾಗುತ್ತದೆ. ನಂತರ ಕಠಿಣವಾದ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆರ್​ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ
Image
ಭೂಕುಸಿತ ಭೀತಿ: ಉತ್ತರ ಕನ್ನಡದಲ್ಲಿ ಹೆದ್ದಾರಿಯ 19 ಕಡೆ ವಾಹನ ನಿಲುಗಡೆ ಬಂದ್
Image
ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ
Image
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ

ಆಟೋ ದರ ಏರಿಕೆ ಸಂಬಂಧ ಮೊದಲು ಮಾರ್ಚ್ ತಿಂಗಳಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಹಲವು ಆಟೋ ಸಂಘಟನೆಗಳು ಭಾಗಿಯಾಗಿದ್ದವು. ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಅಹವಾಲು ಕೇಳಿತ್ತು. ಅಲ್ಲದೆ ಸಭೆಯ ನಿರ್ಣಯವನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿತ್ತು. ವರದಿ ಪರಿಶೀಲಿಸಿದ್ದ ಜಿಲ್ಲಾಧಿಕಾರಿಗಳು ಮೇ ತಿಂಗಳ ಆರಂಭದಲ್ಲಿ ದರ ಏರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಆದರೆ, ದರ ಏರಿಕೆ ಸಂಬಂಧ ಅಧಿಕೃತ ಆದೇಶ ಇನ್ನೂ ಪ್ರಕಟವಾಗಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್, ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ವಿವರ

ಒಟ್ಟಿನಲ್ಲಿ, ಆಟೋ ಮೀಟರ್ ದರ ಏರಿಕೆಗೆ ಜಿಲ್ಲಾಧಿಕಾರಿಗಳು ಇನ್ನೂ ಗ್ರೀನ್ ಸಿಗ್ನಲ್ ನೀಡಿಯೇ ಇಲ್ಲ. ಅಷ್ಟರಲ್ಲೇ ಅಗ್ರಿಗೇಟರ್ ಕಂಪನಿಗಳು ಆಗಲೇ ಹೆಚ್ಚಿನ ದರವನ್ನು ವಸೂಲಿ ಮಾಡಲು ಮುಂದಾಗಿರುವುದು ದುರಂತವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್