AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಅಭಾವ ತೀವ್ರಗೊಂಡಿದ್ದು, ಚಾಲಕರು ಮಧ್ಯರಾತ್ರಿಯಿಂದಲೇ ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುತ್ತಿದ್ದಾರೆ. ಚಾಲಕರು ಪ್ರತಿದಿನ 700-800 ರೂ. ನಷ್ಟ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ಸಚಿವ ಕೆಎಚ್ ಮುನಿಯಪ್ಪ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಪೀಸ್ ಆಟೋ ಸಂಘಟನೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ
ಆಟೋ ಗ್ಯಾಸ್ ಅಭಾವImage Credit source: tv9
ಗಣಪತಿ ಶರ್ಮಾ
|

Updated on:Apr 03, 2026 | 2:29 PM

Share

ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ.

ಮಧ್ಯರಾತ್ರಿಯಿಂದಲೇ ಕಿಲೋಮೀಟರ್‌ಗಟ್ಟಲೆ ಕ್ಯೂ

ನಗರದ ಉತ್ತರ ಭಾಗದ ನಾಗೇನಹಳ್ಳಿ ಮತ್ತು ಯಲಹಂಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾಸ್‌ಗಾಗಿ ಆಟೋಗಳ ಬೃಹತ್ ಸರದಿ ಸಾಲು ಕಂಡುಬರುತ್ತಿದೆ. ಪ್ರೊಪೆಲ್ ಆಟೋ ಗ್ಯಾಸ್ ಬಂಕ್ ಬಳಿ ಸುಮಾರು 2 ಕಿಲೋಮೀಟರ್‌ವರೆಗೂ ಆಟೋಗಳು ಸಾಲುಗಟ್ಟಿ ನಿಂತಿವೆ. ಚಾಲಕರು ರಾತ್ರಿ 11 ಗಂಟೆಯಿಂದಲೇ ತಿಂಡಿ-ತೀರ್ಥವಿಲ್ಲದೆ ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ದಿನವಿಡೀ ಕ್ಯೂ ನಿಂತರೆ ದುಡಿಯುವುದು ಯಾವಾಗ? ಮಕ್ಕಳ ಶಾಲಾ ಫೀಸು, ಸಾಲದ ಕಂತು ಕಟ್ಟುವುದು ಹೇಗೆ? ಎಂದು ಚಾಲಕರು ಕಣ್ಣೀರಿಡುತ್ತಿದ್ದಾರೆ.

ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಆರೋಪ

ಪೀಸ್ ಆಟೋ ಸಂಘಟನೆಯ ಅಧ್ಯಕ್ಷ ರಘು ಮಾತನಾಡಿ, ‘ಹಿಂದೆ 55 ರೂ. ಇದ್ದ ಗ್ಯಾಸ್ ದರ ಈಗ ಕಾಳಸಂತೆಯಲ್ಲಿ 135 ರೂ. ವರೆಗೆ ಏರಿಕೆಯಾಗಿದೆ. ಸರ್ಕಾರ ಹೋಟೆಲ್‌ಗಳಿಗೆ ಸಬ್ಸಿಡಿ ಹೆಚ್ಚಿಸಿ, ಆಟೋ ಚಾಲಕರ ಹೊಟ್ಟೆಗೆ ಹೊಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಚಾಲಕರು 10-20 ರೂಪಾಯಿ ಹೆಚ್ಚುವರಿ ಬಾಡಿಗೆ ಕೇಳಿದರೆ, ಗ್ರಾಹಕರು ಟ್ವಿಟರ್‌ನಲ್ಲಿ ದೂರು ನೀಡುತ್ತಾರೆ. ಇದರಿಂದ ಬೆಂಗಳೂರು ಪೊಲೀಸ್ ಆಯುಕ್ತರು ಚಾಲಕರ ಬಂಧನಕ್ಕೆ ಆದೇಶ ನೀಡುತ್ತಾರೆ. ಈ ಕಾರಣದಿಂದ ಚಾಲಕರು ಹೆಚ್ಚುವರಿ ದರ ಕೇಳಲು ಹಿಂಜರಿಯುತ್ತಾರೆ, ಇದು ಅವರ ನಷ್ಟವನ್ನು ಹೆಚ್ಚಿಸುತ್ತಿದೆ ಎಂದು ರಘು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬಂಕ್ ವ್ಯವಸ್ಥಾಪಕರ ಪ್ರಕಾರ, ಗ್ಯಾಸ್ ಪೂರೈಕೆ ಅನಿಶ್ಚಿತವಾಗಿದ್ದು, ಸ್ಟಾಕ್ ಬಂದ ಕೂಡಲೇ ಖಾಲಿಯಾಗುತ್ತಿದೆ. ಮುಂದಿನ ಲೋಡ್ ಯಾವಾಗ ಬರುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲದಿರುವುದು ಚಾಲಕರ ಆತಂಕವನ್ನು ಇಮ್ಮಡಿಗೊಳಿಸಿದೆ. ಸೋಮವಾರದೊಳಗೆ ಸರ್ಕಾರ ಶಾಶ್ವತ ಪರಿಹಾರ ನೀಡದಿದ್ದರೆ ವಿಧಾನಸೌಧದ ಬದಲು ನೇರವಾಗಿ ಸಚಿವರ ನಿವಾಸವೇ ನಮ್ಮ ಹೋರಾಟದ ಕೇಂದ್ರವಾಗಲಿದೆ ಎಂದು ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Fri, 3 April 26

Follow Us
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ