AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ

ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದಾಗಿ ಅಲ್ಲಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ. ಇದೀಗ ರಸ್ತೆ ಗುಂಡಿಗೆ ಬಿದ್ದ ಆಟೋವೊಂದು ಪಲ್ಟಿಯಾದ ಘಟನೆ ನಗರದಲ್ಲಿ ನಡೆದಿದೆ.

Bengaluru News: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jan 03, 2023 | 12:50 PM

Share

ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳಿಂದಾಗಿ (Road pothole) ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿತ್ತಿದ್ದರೂ, ಜೀವ ಹಾನಿಯಾಗುತ್ತಿದ್ದರೂ ಬಿಬಿಎಂಪಿ (BBMP) ಮಾತ್ರ ಸಂಪೂರ್ಣವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುವಲ್ಲಿ ವಿಫಲಗೊಂಡಿದೆ. ರಸ್ತೆ ಮಧ್ಯೆ ಇದ್ದ ಗುಂಡಿಗೆ ಬಿದ್ದ ಆಟೋವೊಂದು ಪಲ್ಟಿ (Auto overturns)ಯಾದ ಘಟನೆ ನಗರದ ಬನ್ನೇರುಘಟ್ಟ ಹಾಗೂ ಅಂಜನಪುರ ರಸ್ತೆಯಲ್ಲಿ ನಡೆದಿದೆ. ಜನವರಿ 2ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಂಜನಪುರದ‌ 80 ಫೀಟ್ ರಸ್ತೆಯಲ್ಲಿ ಆಟೋ ಪಲ್ಟಿಯಾಗಿದೆ. ರಸ್ತೆಗೆ ಬಿದ್ದ ಆಟೋ ಚಾಲಕನನ್ನು ಸಾರ್ವಜನಿಕರು ಕೂಡಲೇ ಮೇಲಕ್ಕೆತ್ತಿದ್ದು, ಅದೃಷ್ಟವಶಾತ್ ಯಾವುದೇ‌ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ನೂರಾರು ಕೋಟಿ ಬಿಡುಗಡೆಯಾಗಿದ್ದರೂ ಹಿಂದೂತ್ವ ಅಂಜೆಂಡಾದ ಬಿಜೆಪಿ ಸರ್ಕಾರ ಅಂಜನಾದ್ರಿ ಬೆಟ್ಟ ಅಭಿವೃದ್ದಿ ಮಾಡುವುದು ಯಾವಾಗ?

ದೇಗುಲದ ಬೀಗ ಮುರಿದ ಹುಂಡಿಯ ಹಣ ಕಳವು

ನೆಲಮಂಗಲ: ವೈಕುಂಠ ಏಕಾದಶಿ ರಾತ್ರಿಯಂದೇ ದೇವಾಲಯದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ ಕಳವು (Temple Hundi Theft) ಮಾಡಿದ ಘಟನೆ ಚಿಕ್ಕಬಾಣಾವರದ ಸಂತೆ ಬೀದಿಯ ಶ್ರೀಚನ್ನಕೇಶವಸ್ವಾಮಿ ದೇವಾಲಯ (Sri Channakeshavaswamy Temple)ದಲ್ಲಿ ನಡೆದಿದೆ. ದೇವಸ್ಥಾನದ ಹುಂಡಿಯಲ್ಲಿದ್ದ ಸುಮಾರು 80 ಸಾವಿರದಿಂದ 1 ಲಕ್ಷದ ಹಣ ಕಳವು ಮಾಡಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಸೋಲದೇವನಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ನೆಲಮಂಗಲ ನಗರದಲ್ಲಿ ಹಾಡುಹಗಲೇ ಮನೆಗಳ್ಳತನ

ನೆಲಮಂಗಲ: ಹಾಡುಹಗಲೇ ಮನೆಗಳ್ಳತನ ನಡೆಸಿದ ಘಟನೆ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಮನೆ ಹೊರಗೆ ಬೀಗದ ಕೀ ಇಟ್ಟಿದ್ದ ಸ್ಥಳ ನೋಡಿಕೊಂಡ ಖದೀಮರು ಮನೆ ಬೀಗ ತಗೆದು ಬೀರುವಿನಲ್ಲಿದ್ದ ಸುಮಾರು 1.5 ಲಕ್ಷ ನಗದು, 50 ಸಾವಿರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ರೂಪ ರಾಮಮೂರ್ತಿ ಎಂಬವರು ಕುಟುಂಬ ಸಹಿತ ಪ್ರವಾಸಕ್ಕೆ ತೆರಳಿದ್ದರು. ಬೀಗದ ಕೀ ಇಟ್ಟ ಸ್ಥಳಗಮನಿಸಿದ ಕಳ್ಳರು ನಿನ್ನೆ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದು, ಇಂದು ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Tue, 3 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್