AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ

ಕರ್ನಾಟಕದಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ. 7 ರಿಂದ 115 ರೂಪಾಯಿವರೆಗೆ ದರ ಏರಿಕೆಯಾಗಿದೆ. ಈಗ ಆಟೋರಿಕ್ಷಾ ಚಾಲಕರು ಕೂಡ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಕಿಲೋಮೀಟರ್‌ಗೆ 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಆದರೆ, ಆಟೋ ಸಂಘಟನೆಗಳಲ್ಲಿ ಒಮ್ಮತವಿಲ್ಲ.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ
ಆಟೋ ರಿಕ್ಷಾ
Kiran Surya
| Edited By: |

Updated on: Jan 05, 2025 | 10:18 AM

Share

ಬೆಂಗಳೂರು, ಜನವರಿ 05: ಸರ್ಕಾರಿ ಬಸ್​ಗಳ ಟಿಕೆಟ್​ ದರ ಏರಿಕೆ (Karnataka Bus Ticket Price Hike) ಸಾರ್ವಜನಿಕರ ಜೇಬು ಸುಡುತ್ತಿದೆ. 7 ರೂಪಾಯಿಂದ 115 ರೂ.ವರೆಗೆ ಟಿಕೆಟ್​ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ನಡುವೆ ಆಟೋರಿಕ್ಷಾ (Auto) ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.

ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ಇದನ್ನೂ ಓದಿ: ಟಿಕೆಟ್​ ದರ ಏರಿಕೆ ನಿರ್ಧಾರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸರ್ಕಾರದಿಂದ ಗುಡ್​ ನ್ಯೂಸ್​

ದರ ಏರಿಕೆ ಸಂಬಂಧ 2024ರ ಡಿಸೆಂಬರ್​ 23 ರಂದು ಅಸೋಸಿಯೇಷನ್​ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ.

ಆದರೆ, ಆಟೋ ಸಂಘಟನೆಗಳಲ್ಲೇ ದರ ಏರಿಕೆ ಬಗ್ಗೆ ಒಮ್ಮತ್ತವಿಲ್ಲ. ಬೈಕ್ ಟ್ಯಾಕ್ಸಿ ಬ್ಯಾನ್ ಆಗುವವರೆಗೂ ಆಟೋ ಪ್ರಯಣಾ ದರ ಏರಿಕೆ ಬೇಡ ಎನ್ನುತ್ತಿದ್ದಾರೆ. ಎಲ್ಲ ಚಾಲಕ ಸಂಘಟನೆಗಳಿಂದ ಒಂದೇ ಅಭಿಪ್ರಾಯ ನೀಡಿದ ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ದರ ಏರಿಕೆ ಮಾಡಲಿದ್ದಾರೆ.

ದರ ಏರಿಕೆ ಕಮಿಟಿಯಲ್ಲಿ ಯಾರೆಲ್ಲ ಇರುತ್ತಾರೆ?

ಬೆಂಗಳೂರು ನಗರ ಜಿಲ್ಲಾಧಿಕಾರಿ- ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಯನಗರ ಆರ್​ಟಿಓ ಕಚೇರಿಯ ಓರ್ವ ಅಧಿಕಾರಿ- ಕಾರ್ಯದರ್ಶಿ ಹಾಗೂ ಟ್ರಾಫಿಕ್ ಡಿಸಿಪಿ (ಯಾವುದಾದರು ಒಂದು ವಿಭಾಗ) ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿ, ಗ್ರಾಹಕರ ವೇದಿಕೆಯಿಂದ ಓರ್ವ ಅಧಿಕಾರಿ ಕಮಿಟಿ ಸದಸ್ಯರಾಗಿರುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ