AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ

ಕರ್ನಾಟಕದಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ. 7 ರಿಂದ 115 ರೂಪಾಯಿವರೆಗೆ ದರ ಏರಿಕೆಯಾಗಿದೆ. ಈಗ ಆಟೋರಿಕ್ಷಾ ಚಾಲಕರು ಕೂಡ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಕಿಲೋಮೀಟರ್‌ಗೆ 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಆದರೆ, ಆಟೋ ಸಂಘಟನೆಗಳಲ್ಲಿ ಒಮ್ಮತವಿಲ್ಲ.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ
ಆಟೋ ರಿಕ್ಷಾ
Kiran Surya
| Edited By: |

Updated on: Jan 05, 2025 | 10:18 AM

Share

ಬೆಂಗಳೂರು, ಜನವರಿ 05: ಸರ್ಕಾರಿ ಬಸ್​ಗಳ ಟಿಕೆಟ್​ ದರ ಏರಿಕೆ (Karnataka Bus Ticket Price Hike) ಸಾರ್ವಜನಿಕರ ಜೇಬು ಸುಡುತ್ತಿದೆ. 7 ರೂಪಾಯಿಂದ 115 ರೂ.ವರೆಗೆ ಟಿಕೆಟ್​ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ನಡುವೆ ಆಟೋರಿಕ್ಷಾ (Auto) ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.

ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ಇದನ್ನೂ ಓದಿ: ಟಿಕೆಟ್​ ದರ ಏರಿಕೆ ನಿರ್ಧಾರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸರ್ಕಾರದಿಂದ ಗುಡ್​ ನ್ಯೂಸ್​

ದರ ಏರಿಕೆ ಸಂಬಂಧ 2024ರ ಡಿಸೆಂಬರ್​ 23 ರಂದು ಅಸೋಸಿಯೇಷನ್​ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ.

ಆದರೆ, ಆಟೋ ಸಂಘಟನೆಗಳಲ್ಲೇ ದರ ಏರಿಕೆ ಬಗ್ಗೆ ಒಮ್ಮತ್ತವಿಲ್ಲ. ಬೈಕ್ ಟ್ಯಾಕ್ಸಿ ಬ್ಯಾನ್ ಆಗುವವರೆಗೂ ಆಟೋ ಪ್ರಯಣಾ ದರ ಏರಿಕೆ ಬೇಡ ಎನ್ನುತ್ತಿದ್ದಾರೆ. ಎಲ್ಲ ಚಾಲಕ ಸಂಘಟನೆಗಳಿಂದ ಒಂದೇ ಅಭಿಪ್ರಾಯ ನೀಡಿದ ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ದರ ಏರಿಕೆ ಮಾಡಲಿದ್ದಾರೆ.

ದರ ಏರಿಕೆ ಕಮಿಟಿಯಲ್ಲಿ ಯಾರೆಲ್ಲ ಇರುತ್ತಾರೆ?

ಬೆಂಗಳೂರು ನಗರ ಜಿಲ್ಲಾಧಿಕಾರಿ- ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಯನಗರ ಆರ್​ಟಿಓ ಕಚೇರಿಯ ಓರ್ವ ಅಧಿಕಾರಿ- ಕಾರ್ಯದರ್ಶಿ ಹಾಗೂ ಟ್ರಾಫಿಕ್ ಡಿಸಿಪಿ (ಯಾವುದಾದರು ಒಂದು ವಿಭಾಗ) ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿ, ಗ್ರಾಹಕರ ವೇದಿಕೆಯಿಂದ ಓರ್ವ ಅಧಿಕಾರಿ ಕಮಿಟಿ ಸದಸ್ಯರಾಗಿರುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?