Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ

ಕರ್ನಾಟಕದಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ. 7 ರಿಂದ 115 ರೂಪಾಯಿವರೆಗೆ ದರ ಏರಿಕೆಯಾಗಿದೆ. ಈಗ ಆಟೋರಿಕ್ಷಾ ಚಾಲಕರು ಕೂಡ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಕಿಲೋಮೀಟರ್‌ಗೆ 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಆದರೆ, ಆಟೋ ಸಂಘಟನೆಗಳಲ್ಲಿ ಒಮ್ಮತವಿಲ್ಲ.

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ
ಆಟೋ ರಿಕ್ಷಾ
Follow us
Kiran Surya
| Updated By: ವಿವೇಕ ಬಿರಾದಾರ

Updated on: Jan 05, 2025 | 10:18 AM

ಬೆಂಗಳೂರು, ಜನವರಿ 05: ಸರ್ಕಾರಿ ಬಸ್​ಗಳ ಟಿಕೆಟ್​ ದರ ಏರಿಕೆ (Karnataka Bus Ticket Price Hike) ಸಾರ್ವಜನಿಕರ ಜೇಬು ಸುಡುತ್ತಿದೆ. 7 ರೂಪಾಯಿಂದ 115 ರೂ.ವರೆಗೆ ಟಿಕೆಟ್​ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ನಡುವೆ ಆಟೋರಿಕ್ಷಾ (Auto) ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.

ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ಇದನ್ನೂ ಓದಿ: ಟಿಕೆಟ್​ ದರ ಏರಿಕೆ ನಿರ್ಧಾರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸರ್ಕಾರದಿಂದ ಗುಡ್​ ನ್ಯೂಸ್​

ದರ ಏರಿಕೆ ಸಂಬಂಧ 2024ರ ಡಿಸೆಂಬರ್​ 23 ರಂದು ಅಸೋಸಿಯೇಷನ್​ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ.

ಆದರೆ, ಆಟೋ ಸಂಘಟನೆಗಳಲ್ಲೇ ದರ ಏರಿಕೆ ಬಗ್ಗೆ ಒಮ್ಮತ್ತವಿಲ್ಲ. ಬೈಕ್ ಟ್ಯಾಕ್ಸಿ ಬ್ಯಾನ್ ಆಗುವವರೆಗೂ ಆಟೋ ಪ್ರಯಣಾ ದರ ಏರಿಕೆ ಬೇಡ ಎನ್ನುತ್ತಿದ್ದಾರೆ. ಎಲ್ಲ ಚಾಲಕ ಸಂಘಟನೆಗಳಿಂದ ಒಂದೇ ಅಭಿಪ್ರಾಯ ನೀಡಿದ ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ದರ ಏರಿಕೆ ಮಾಡಲಿದ್ದಾರೆ.

ದರ ಏರಿಕೆ ಕಮಿಟಿಯಲ್ಲಿ ಯಾರೆಲ್ಲ ಇರುತ್ತಾರೆ?

ಬೆಂಗಳೂರು ನಗರ ಜಿಲ್ಲಾಧಿಕಾರಿ- ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಯನಗರ ಆರ್​ಟಿಓ ಕಚೇರಿಯ ಓರ್ವ ಅಧಿಕಾರಿ- ಕಾರ್ಯದರ್ಶಿ ಹಾಗೂ ಟ್ರಾಫಿಕ್ ಡಿಸಿಪಿ (ಯಾವುದಾದರು ಒಂದು ವಿಭಾಗ) ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿ, ಗ್ರಾಹಕರ ವೇದಿಕೆಯಿಂದ ಓರ್ವ ಅಧಿಕಾರಿ ಕಮಿಟಿ ಸದಸ್ಯರಾಗಿರುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ