AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ 'ಆಜಾದಿ' ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಬೆಂಗಳೂರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Dec 01, 2023 | 8:16 PM

Share

ಬೆಂಗಳೂರು, ಡಿ.01: ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ ‘ಆಜಾದಿ’ ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮ(Social Media)ಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕರ್ನಾಟಕ, ದೆಹಲಿ, ಚೆನ್ನೈ ಮತ್ತು ಮುಂಬೈನ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಬಳಿ “ಮನುವಾದ್ ಸೇ ಆಜಾದಿ, “ಬ್ರಹ್ಮಣವಾದ್ ಸೇ ಆಜಾದಿ  ಮತ್ತು “ಹಿಂದುತ್ವವಾದ್ ಸೇ ಆಜಾದಿ” ಎಂಬ ಘೋಷಣೆಯನ್ನು ಕೂಗಿದ್ದಾರೆ.

ಇನ್ನು ಈ ಘೋಷಣೆ ಕೂಗಿದ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಬ್ಯಾನರ್​ಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಒಬ್ಬ ವ್ಯಕ್ತಿ “ಆಜಾದಿ” ಘೋಷಣೆಗಳನ್ನು ಪ್ರಾರಂಭಿಸಿದ್ದನ್ನು ಕಾಣಬಹುದು. ಇದಾದ ಬಳಿಕ ಅನೇಕರು ಇತನೊಟ್ಟಿಗೆ ಸೇರಿಕೊಂಡು “ಹಿಂದುತ್ವವಾದ್ ಸೇ ಆಜಾದಿ” ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ವಿಡಿಯೋ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದೆ. ಈ ಪ್ರತಿಭಟನೆಯಲ್ಲಿ “ಹಿಂದುತ್ವ ಸೇ ಆಜಾದಿ” ಘೋಷಣೆ, ಇಲ್ಲಿ ನಡೆಯುತ್ತಿರುವ ಮಾರ್ಚ್​ಗೆ ಏನು ಸಂಬಂಧ. “ಲಿಂಗ-ಸಮಾನತೆ” ಹೆಸರಿನಲ್ಲಿ ನೀವು ಯಾರ ಅಜೆಂಡಾವನ್ನು ಹರಡಲು ಪ್ರಯತ್ನಿಸುತ್ತಿದ್ದೀರಿ? ” ಎಂದು  ಬಳಕೆದಾರರು ಪ್ರಶ್ನಿಸಿದ್ದಾರೆ. ಮತ್ತೊಬ್ಬರು “ಬೆಂಗಳೂರಿನಲ್ಲಿ ಇದು ಹೆಮ್ಮೆಯ ಮೆರವಣಿಗೆ? ಆದರೆ, ಕೆಲವರು ಸ್ವಾತಂತ್ರ್ಯ ಕೇಳುತ್ತಾ ದಾರಿ ತಪ್ಪಿದಂತಿದೆ ಎಂದು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 1 December 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು