AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ 'ಆಜಾದಿ' ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಬೆಂಗಳೂರು
ಕಿರಣ್ ಹನುಮಂತ್​ ಮಾದಾರ್
|

Updated on:Dec 01, 2023 | 8:16 PM

Share

ಬೆಂಗಳೂರು, ಡಿ.01: ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ ‘ಆಜಾದಿ’ ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮ(Social Media)ಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕರ್ನಾಟಕ, ದೆಹಲಿ, ಚೆನ್ನೈ ಮತ್ತು ಮುಂಬೈನ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಬಳಿ “ಮನುವಾದ್ ಸೇ ಆಜಾದಿ, “ಬ್ರಹ್ಮಣವಾದ್ ಸೇ ಆಜಾದಿ  ಮತ್ತು “ಹಿಂದುತ್ವವಾದ್ ಸೇ ಆಜಾದಿ” ಎಂಬ ಘೋಷಣೆಯನ್ನು ಕೂಗಿದ್ದಾರೆ.

ಇನ್ನು ಈ ಘೋಷಣೆ ಕೂಗಿದ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಬ್ಯಾನರ್​ಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಒಬ್ಬ ವ್ಯಕ್ತಿ “ಆಜಾದಿ” ಘೋಷಣೆಗಳನ್ನು ಪ್ರಾರಂಭಿಸಿದ್ದನ್ನು ಕಾಣಬಹುದು. ಇದಾದ ಬಳಿಕ ಅನೇಕರು ಇತನೊಟ್ಟಿಗೆ ಸೇರಿಕೊಂಡು “ಹಿಂದುತ್ವವಾದ್ ಸೇ ಆಜಾದಿ” ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ವಿಡಿಯೋ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದೆ. ಈ ಪ್ರತಿಭಟನೆಯಲ್ಲಿ “ಹಿಂದುತ್ವ ಸೇ ಆಜಾದಿ” ಘೋಷಣೆ, ಇಲ್ಲಿ ನಡೆಯುತ್ತಿರುವ ಮಾರ್ಚ್​ಗೆ ಏನು ಸಂಬಂಧ. “ಲಿಂಗ-ಸಮಾನತೆ” ಹೆಸರಿನಲ್ಲಿ ನೀವು ಯಾರ ಅಜೆಂಡಾವನ್ನು ಹರಡಲು ಪ್ರಯತ್ನಿಸುತ್ತಿದ್ದೀರಿ? ” ಎಂದು  ಬಳಕೆದಾರರು ಪ್ರಶ್ನಿಸಿದ್ದಾರೆ. ಮತ್ತೊಬ್ಬರು “ಬೆಂಗಳೂರಿನಲ್ಲಿ ಇದು ಹೆಮ್ಮೆಯ ಮೆರವಣಿಗೆ? ಆದರೆ, ಕೆಲವರು ಸ್ವಾತಂತ್ರ್ಯ ಕೇಳುತ್ತಾ ದಾರಿ ತಪ್ಪಿದಂತಿದೆ ಎಂದು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 1 December 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!