AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ 'ಆಜಾದಿ' ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಬೆಂಗಳೂರು
Follow us
ಕಿರಣ್ ಹನುಮಂತ್​ ಮಾದಾರ್
|

Updated on:Dec 01, 2023 | 8:16 PM

ಬೆಂಗಳೂರು, ಡಿ.01: ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ ‘ಆಜಾದಿ’ ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮ(Social Media)ಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕರ್ನಾಟಕ, ದೆಹಲಿ, ಚೆನ್ನೈ ಮತ್ತು ಮುಂಬೈನ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಬಳಿ “ಮನುವಾದ್ ಸೇ ಆಜಾದಿ, “ಬ್ರಹ್ಮಣವಾದ್ ಸೇ ಆಜಾದಿ  ಮತ್ತು “ಹಿಂದುತ್ವವಾದ್ ಸೇ ಆಜಾದಿ” ಎಂಬ ಘೋಷಣೆಯನ್ನು ಕೂಗಿದ್ದಾರೆ.

ಇನ್ನು ಈ ಘೋಷಣೆ ಕೂಗಿದ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಬ್ಯಾನರ್​ಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಒಬ್ಬ ವ್ಯಕ್ತಿ “ಆಜಾದಿ” ಘೋಷಣೆಗಳನ್ನು ಪ್ರಾರಂಭಿಸಿದ್ದನ್ನು ಕಾಣಬಹುದು. ಇದಾದ ಬಳಿಕ ಅನೇಕರು ಇತನೊಟ್ಟಿಗೆ ಸೇರಿಕೊಂಡು “ಹಿಂದುತ್ವವಾದ್ ಸೇ ಆಜಾದಿ” ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ವಿಡಿಯೋ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದೆ. ಈ ಪ್ರತಿಭಟನೆಯಲ್ಲಿ “ಹಿಂದುತ್ವ ಸೇ ಆಜಾದಿ” ಘೋಷಣೆ, ಇಲ್ಲಿ ನಡೆಯುತ್ತಿರುವ ಮಾರ್ಚ್​ಗೆ ಏನು ಸಂಬಂಧ. “ಲಿಂಗ-ಸಮಾನತೆ” ಹೆಸರಿನಲ್ಲಿ ನೀವು ಯಾರ ಅಜೆಂಡಾವನ್ನು ಹರಡಲು ಪ್ರಯತ್ನಿಸುತ್ತಿದ್ದೀರಿ? ” ಎಂದು  ಬಳಕೆದಾರರು ಪ್ರಶ್ನಿಸಿದ್ದಾರೆ. ಮತ್ತೊಬ್ಬರು “ಬೆಂಗಳೂರಿನಲ್ಲಿ ಇದು ಹೆಮ್ಮೆಯ ಮೆರವಣಿಗೆ? ಆದರೆ, ಕೆಲವರು ಸ್ವಾತಂತ್ರ್ಯ ಕೇಳುತ್ತಾ ದಾರಿ ತಪ್ಪಿದಂತಿದೆ ಎಂದು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 1 December 23

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ