AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪ ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ’: 8 ಪುಟದ ಡೆತ್‌ನೋಟ್​ ಬರೆದಿಟ್ಟು ಮಗಳು ಆತ್ಮಹತ್ಯೆಗೆ ಶರಣು

ಹಾಸನ ಮೂಲದ ವಿದ್ಯಾರ್ಥಿನಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜ್​​ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಇದು ಕುಟುಂಬದವರಿಗೆ ಆಘಾತ ತರಿಸಿದೆ. ಸಾವಿಗೂ ಮುನ್ನ 8 ಪುಟದ ಡೆತ್‌ನೋಟ್‌ ಬರೆದಿದ್ದು, ತಂದೆ ಬಗೆಗೆ ಬರೆದ ಸಾಲುಗಳು ಮನಕಲಕುವಂತಿವೆ. ಸೋಲದೇವನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಅಪ್ಪ ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ’: 8 ಪುಟದ ಡೆತ್‌ನೋಟ್​ ಬರೆದಿಟ್ಟು ಮಗಳು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಗಂಗಾಧರ​ ಬ. ಸಾಬೋಜಿ
|

Updated on: Nov 30, 2025 | 11:47 AM

Share

ನೆಲಮಂಗಲ, ನವೆಂಬರ್​​ 30: ಆ ಪ್ರತಿಭಾವಂತ ವಿದ್ಯಾರ್ಥಿನಿ (Student), ನೂರಾರು ಕನಸುಗಳನ್ನ ಕಟ್ಟಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಲು ಹಾಸನದಿಂದ ಬೆಂಗಳೂರಿಗೆ ಬಂದಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಾಂಗ ಮಾಡುತ್ತಿದ್ದು, ಶನಿವಾರ ಮಧ್ಯಾಹ್ನ ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ. ತಂದೆಗೆ 8 ಪುಟದ ಭಾವನಾತ್ಮಕ ಡೆತ್​ನೋಟ್​​ ಬರೆದಿದ್ದು, ಪತ್ರದ ಸಾಲುಗಳು ಮನಕಲಕುವಂತಿವೆ.

ಪಿಜಿಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು ಹೊರವಲಯ ಹೆಸರುಘಟ್ಟ ರಸ್ತೆಯ ಆಚಾರ್ಯ ಕಾಲೇಜು ವಿಧ್ಯಾರ್ಥಿನಿ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹಾಸನದ ಹೆಸರಘಟ್ಟದ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜಿನಲ್ಲಿ ಓದುತ್ತಿದ್ದಳು.

ಇದನ್ನೂ ಓದಿ: ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ

ಪೆಟಲ್ಸ್‌ ಗರ್ಲ್ಸ್‌ ಪಿಜಿಯಲ್ಲಿ ವಾಸವಿದ್ದಳು. ಆದರೆ, ಪಿಜಿಯ 3ನೇ ಮಹಡಿಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡ್ಕೊಂಡಿದ್ದಾಳೆ. ಸಾವಿಗೂ ಮುನ್ನ 8 ಪುಟದ ಡೆತ್‌ನೋಟ್‌ ಬರೆದಿದ್ದು, ತಂದೆ ಬಗೆಗೆ ಬರೆದ ಸಾಲುಗಳು ಮನಕಲಕುವಂತಿವೆ.

ಅಪ್ಪ ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ

ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ ಅಪ್ಪ. ನೀವು ಕೊಟ್ಟಿರುವ ಪ್ರೀತಿ ಇನ್ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಕೇಳಿದ್ದನ್ನೆಲ್ಲ ಕೊಡಿಸಿದ್ದೀರಿ. ನಿಮ್ಮ ಮರ್ಯಾದೆ ತೆಗೆಯುವ ಕೆಲಸ ಮಾಡಿಲ್ಲ. ನಿಮ್ಮ ಪ್ರೀತಿ ಉಳಿಸಿಕೊಳ್ಳುವ ಭಾಗ್ಯವೂ ನನಗಿಲ್ಲ. ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ಇಷ್ಟವಿಲ್ಲ. ನಾನು ಸಾವಿಗೆ ಶರಣಾಗುತ್ತಿದ್ದೇನೆ. ನಿಮ್ಮ ಅಕ್ಕರೆಯ ಮಗಳು ವತ್ಸಲಾ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ

ಹಾಸನ ಮೂಲದ ವತ್ಸಲಾ ಬೆಂಗಳೂರಿಗೆ ಓದಲೆಂದು ಬಂದಿದ್ದಳು. ಆದರೆ ಏನಾಯ್ತೋ ಗೊತ್ತಿಲ್ಲ. ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದು ಕುಟುಂಬದವರಿಗೆ ಆಘಾತ ತರಿಸಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ವರದಿ: ಮಂಜುನಾಥ್ ಟಿವಿ9ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ