AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಗೆಟ್ಟ ಬೆಂಗಳೂರು ರಸ್ತೆಗೆ ಮತ್ತೊಂದು ಬಲಿ: ಮಹಿಳೆ ದುರಂತ ಸಾವು

ಬೆಂಗಳೂರಿನ ಹುಳಿಮಾವಿನಲ್ಲಿ ಹದಗೆಟ್ಟ ರಸ್ತೆಗಳಿಂದಾಗಿ ಭೀಕರ ಅಪಘಾತವೊಂದು ನಡೆದಿದೆ. ದುರಂತದಲ್ಲಿ ಗೋಕಾಕ್ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಳಾದ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದ ಮಹಿಳೆ ಮೇಲೆ ಟಿಪ್ಪರ್ ಹರಿದಿದೆ. ಸದ್ಯ ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಕೇಸ್​​ ದಾಖಲಾಗಿದೆ.

ಹದಗೆಟ್ಟ ಬೆಂಗಳೂರು ರಸ್ತೆಗೆ ಮತ್ತೊಂದು ಬಲಿ: ಮಹಿಳೆ ದುರಂತ ಸಾವು
ಮಹಿಳೆ ಸಾವು
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 20, 2025 | 9:44 PM

Share

ಬೆಂಗಳೂರು, ನವೆಂಬರ್​ 20: ನಗರದಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಬಲಿ (death) ಆಗಿದೆ. ಸ್ನೇಹಿತೆ ಜೊತೆಗೆ ತೆರಳುತ್ತಿದ್ದಾಗ ಬೈಕ್​ನಿಂದ ಬಿದ್ದ ಮಹಿಳೆ (woman) ಮೇಲೆ ಟಿಪ್ಪರ್​​ ಹರಿದು ಮೃತಪಟ್ಟಿರುವಂತಹ ಘಟನೆ ಹುಳಿಮಾವಿನ ಸರಸ್ವತಿಪುರಂನಲ್ಲಿ ನಡೆದಿದೆ. ಗೋಕಾಕ್​ ಮೂಲದ ಶಾಂತಮ್ಮ(46) ಮೃತ ಮಹಿಳೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಶಾಂತಮ್ಮ ಅವರು ಕಮ್ಮನಹಳ್ಳಿಯಲ್ಲಿ ಮಗನ ಜೊತೆಗೆ ವಾಸವಿದ್ದರು. ಇಂದು ಸ್ನೇಹಿತೆ ಜೊತೆಗೆ ಬೈಕ್​ನಲ್ಲಿ ಹೊರಗಡೆ ತೆರಳುತ್ತಿದ್ದರು. ಈ ವೇಳೆ ಹಾಳಾದ ರಸ್ತೆಯಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದ ಶಾಂತಮ್ಮ ಮೇಲೆ ಹರಿದ ಟಿಪ್ಪರ್ ಹರಿದಿದೆ. ಹುಳಿಮಾವಿನ ಸರಸ್ವತಿಪುರಂನಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಬಿಎಂಟಿಸಿ ಬಸ್​​ಗೆ ಒಂದೇ ದಿನ ಇಬ್ಬರು ವೃದ್ಧರು ಬಲಿ

ಬೆಂಗಳೂರಿನಲ್ಲಿ ಇಂದು ಒಂದೇ ಬಿಎಂಟಿಸಿ ಬಸ್​ಗೆ ಇಬ್ಬರು ಬಲಿಯಾಗಿರುವಂತಹ ಘಟನೆ ನಡೆದಿದೆ. ಇಬ್ಬರೂ ಕೂಡ ವೃದ್ಧರು. ಬಿಎಂಟಿಸಿಯ ಡಿಪೋ– 2 ಶಾಂತಿನಗರಕ್ಕೆ ಸೇರಿದ ಡಿಸೇಲ್ ಬಸ್, ಎಸ್ಎಂವಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್​ಗೆ ಹೋಗುತ್ತಿದ್ದ KA-57-F2973 ನಂಬರಿನ ಬಸ್ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದ ವೃದ್ಧನ ತಲೆ ಮೇಲೆ ಹರಿದ ಪರಿಣಾಮ, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6-30 ರ ಸುಮಾರಿಗೆ ನಡೆದಿದೆ. 65 ವರ್ಷದ ವೆಂಕಟರಾಮಯ್ಯ ಮೃತ ದುದೈರ್ವಿ.

ಇದನ್ನೂ ಓದಿ: ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು

ಇನ್ನು ಬಸ್ ಚಕ್ರಕ್ಕೆ ಸಿಲುಕಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ವಿಜಯನಗರ ಎಂಸಿ ಲೇಔಟ್ ಬಸ್ ಬಳಿ ನಡೆದಿದೆ. ಸುಶೀಲಾ (70) ಮೃತ ದುದೈರ್ವಿ. ಕೆಂಗೇರಿಯಿಂದ ಯಲಹಂಕಗೆ ಹೋಗುತ್ತಿದ್ದ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ KA-51-AH-4246 ನಿಂದ ಇಳಿದು ಬಲಭಾಗದ ರಸ್ತೆ ದಾಟುವಾಗ ತಾನು ಸಂಚಾರ ಮಾಡಿದ್ದ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬಲಭಾಗದ ಚಕ್ರ ಸುಶೀಲಮ್ಮ ತಲೆ ಮೇಲೆ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್