AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪರಿಸಿ ತಿನ್ನುತ್ತಿದ್ದ ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಬೆಂಗಳೂರಿನ ಕ್ಯಾಬ್​​ ಚಾಲಕ

ಬೆಂಗಳೂರಿನ ಬೇಕರಿಯೊಂದರಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕ್ಯಾಬ್ ಚಾಲಕರೊಬ್ಬರು ಖರೀದಿಸಿದ ಪನೀರ್ ಟಿಕ್ಕಾ ರೋಲ್‌ನಲ್ಲಿ ಹಲ್ಲಿ ಪತ್ತೆಯಾದ ಆರೋಪ ಕೇಳಿಬಂದಿದೆ. ಇದನ್ನು ಸೇವಿಸಿದ ಗ್ರಾಹಕ ಅಸ್ವಸ್ಥರಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದು, ಈ ಘಟನೆ ಬೇಕರಿ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಪತ್ತೆಯಾಗಿರುವ ಬಗ್ಗೆ ಕ್ಯಾಬ್​​ ಚಾಲಕನ ಬಳಿ ಯಾವುದೇ ಸಾಕ್ಷಿ ಇಲ್ಲ. ಗಾಬರಿಯಿಂದ ಫೋಟೋ ತೆಗೆದುಕೊಳ್ಳಲಾಗಿಲ್ಲ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನಂತೆ.

ಚಪ್ಪರಿಸಿ ತಿನ್ನುತ್ತಿದ್ದ ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಬೆಂಗಳೂರಿನ ಕ್ಯಾಬ್​​ ಚಾಲಕ
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on: Apr 29, 2026 | 9:39 PM

Share

ಬೆಂಗಳೂರು, ಏಪ್ರಿಲ್​​ 29: ಬೇಕರಿ ತಿಂಡಿಗಳಂದರೆ ಬಹುತೇಕ ಯುವ ಜನತೆಗೆ ಅಚ್ಚುಮೆಚ್ಚು. ಕೆಲವರಿಗಂತೂ ದಿನಕ್ಕೆ ಒಮ್ಮೆಯಾದರೂ ಬೇಕರಿಗೆ ಭೇಟಿ ನೀಡದಿದ್ದರೆ ಸಮಾಧಾನವೇ ಇರೋದಿಲ್ಲ. ಆದರೆ ಬೆಂಗಳೂರಲ್ಲಿ ಜನ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಬೇಕರಿಯಲ್ಲಿ ಖರೀದಿಸಿದ ಪನೀರ್ ಟಿಕ್ಕಾ ರೋಲ್‌ನಲ್ಲಿ ಹಲ್ಲಿ ಕಂಡುಬಂದಿರುವ ಘಟನೆ ಮಾಗಡಿ ಮುಖ್ಯ ರಸ್ತೆಯ ಹೌಸಿಂಗ್ ಬೋರ್ಡ್ ಸಮೀಪ ನಡೆದಿದೆ. ಇದನ್ನು ಸೇವಿಸಿದ್ದ 32 ವರ್ಷದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ.

ಘಟನೆ ಏನು?

ಅಗ್ರಹಾರ ದಾಸರಹಳ್ಳಿಯ ನಿವಾಸಿಯಾಗಿರುವ ಕ್ಯಾಬ್​​ ಚಾಲಕನಿಗೆ ಏಪ್ರಿಲ್ 25ರಂದು ಮಧ್ಯಾಹ್ನ ಊಟ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸಂಜೆ ವೇಳೆಗೆ ಬೇಕರಿಗೆ ತೆರಳಿದ್ದ ಆತ ಮೊದಲು ಹನಿ ಕೇಕ್ ತಿಂದಿದ್ದಾನೆ. ಬಳಿಕ ಚಿಕನ್ ರೋಲ್ ಆರ್ಡರ್​​ ಮಾಡಿದ್ದು, ಈ ವೇಳೆ ಅದಿಲ್ಲ ಎಂಬ ಉತ್ತರ ಬೇಕರಿ ಸಿಬ್ಬಂದಿಯಿಂದ ಬಂದಿದೆ. ಹೀಗಾಗಿ ಪನೀರ್ ಟಿಕ್ಕಾ ರೋಲ್ ನೀಡುವಂತೆ ಚಾಲಕ ಕೇಳಿದ್ದಾರೆ. ರೋಲ್​​ನ ಸ್ವಲ್ಪ ತಿಂದ ಬಳಿಕ ಕ್ಯಾಬ್​ ಚಾಲಕ ಅಕ್ಷರಶಃ ಬೆಚ್ಚಿಬಿದ್ದಿದ್ದು, ಅದರೊಳಗೆ ಹಲ್ಲಿ ಇರೋದನ್ನು ಗಮನಿಸಿದ್ದಾರೆ. ಈ ಬಗ್ಗೆ ಬೇಕರಿ ಸಿಬ್ಬಂದಿಯನ್ನು ಪ್ರಶ್ನಿಸಿದರೆ ಅವರಿಂದ ಉಡಾಫೆ ಉತ್ತರ ಬಂದಿದೆಯಂತೆ.

ಇದನ್ನೂ ಓದಿ: ಬೈಕ್ ಪಾರ್ಕ್ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಪಿಯುಸಿ ವಿದ್ಯಾರ್ಥಿ ಸಾವು!

ಬಳಿಕ ಕ್ಯಾಬ್​​ ಚಾಲಕ ವಾಂತಿಮಾಡಿಕೊಳ್ಳಲು ಆರಂಭಿಸಿದ್ದು, ಆತನನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜೀರ್ಣ ಹಾಗೂ ಅತಿಸಾರ ಸಮಸ್ಯೆಯಿಂದ ಆತ ಬಳಲುತ್ತಿರೋದಾಗಿ ವೈದ್ಯರು ತಿಳಿಸಿದ್ದು, 24 ಗಂಟೆಗಳ ಕಾಲ ನಿಗಾದ ಅವಶ್ಯಕತೆ ಇದೆ ಎಂದಿದ್ದಾರೆ. ಆದರೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಬೇಕರಿ ಸಿಬ್ಬಂದಿ ನಿರಾಕರಿಸಿದ್ದು, ತಮ್ಮ ಪರಿಚಯದ ಇನ್ನೊಂದು ಆಸ್ಪತ್ರೆಗೆ ಹೋಗುವಂತೆ ಹೇಳಿರೋದಾಗಿ ಕ್ಯಾಬ್​​ ಚಾಲಕ ಆರೋಪಿಸಿದ್ದಾರೆ. ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಪತ್ತೆಯಾಗಿರುವ ಬಗ್ಗೆ ಕ್ಯಾಬ್​​ ಚಾಲಕನ ಬಳಿ ಯಾವುದೇ ಸಾಕ್ಷಿ ಇಲ್ಲವಂತೆ. ಗಾಬರಿಯಿಂದ ಫೋಟೋ ತೆಗೆದುಕೊಳ್ಳಲಾಗಿಲ್ಲ ಎಂದು ಆತ ಪೊಲೀಸರಿಗೆ ಆತ ತಿಳಿಸಿದ್ದಾನೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ