AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್: ಇಂದು ಎಲ್ಲೆಲ್ಲಿ, ಯಾವ ಸಂಘಟನೆಗಳ ಹೋರಾಟ? ಇಲ್ಲಿದೆ ಫುಲ್ ಪ್ಲಾನ್

ತಮಿಳುನಾಡಿಗೆ ಕಾವೇರಿ ಹರಿಬಿಟ್ಟ ಹಿನ್ನೆಲೆ ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿದ್ದು ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ ನಡೆಸಲಿವೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಬಂದ್: ಇಂದು ಎಲ್ಲೆಲ್ಲಿ, ಯಾವ ಸಂಘಟನೆಗಳ ಹೋರಾಟ? ಇಲ್ಲಿದೆ ಫುಲ್ ಪ್ಲಾನ್
ಬೆಂಗಳೂರು ಬಂದ್
Poornima Agali Nagaraj
| Edited By: |

Updated on: Sep 26, 2023 | 7:43 AM

Share

ಬೆಂಗಳೂರು, ಸೆ.26: ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರನ್ನ (Cauvery Water Dispute) ಕರ್ನಾಟಕ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವುದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ (Bengaluru Bandh) ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ ನಡೆಸಲಿವೆ ಎಂಬ ಮಾಹಿತಿ ಇಲ್ಲಿದೆ.

ಇಂದು ಎಲ್ಲೆಲ್ಲಿ? ಯಾವ ಸಂಘಟನೆಗಳ ಹೋರಾಟ

  • ಕಾವೇರಿ ಹೋರಾಟ ಸಮಿತಿ:  ಬೆಳಗ್ಗೆ 09.30ಕ್ಕೆ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಬಳೆಪೇಟೆ,  ಮೈಸೂರು ಬ್ಯಾಂಕ್ ಸರ್ಕಲ್, ಟೌನ್ ಹಾಲ್ ಸಮೀಪ ಜನರಲ್ಲಿ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.
  • ಕನ್ನಡ ಚಳುವಳಿ ಕೇಂದ್ರ ಸಮಿತಿ, ನಾಡಪ್ರಭು ಕೆಂಪೇಗೌಡ ಪ್ರತಿಷ್ಟಾನ ವತಿಯಿಂದ ಟೋಲ್ ಗೇಟ್ ಸಿಗ್ನಲ್ ನಿಂದ ಟೌನ್ ಹಾಲ್ ತನಕ ಬೆಳಗ್ಗೆ 9 ಘಂಟೆಗೆ ಬೈಕ್ ರ್ಯಾಲಿ
  • ಜಯ ಕರ್ನಾಟಕ ಸಮರ ಸೇನೆ: ಬಾಪೂಜಿನಗರಿಂದ ಸ್ಯಾಟಲೈಟ್ ಬಸ್ ನಿಲ್ದಾಣ ತನಕ ಕಾಲ್ನಡಿಗೆ ಮೂಲಕ ಬಂದು ತಮಿಳುನಾಡು ಬಸ್ ತಡೆ.
  • ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಟೌನ್ ಹಾಲ್ ತನಕ ಸೈಕಲ್ ಜಾಥ ( ಖಾಲಿ ಬಿಂದಿಗೆಯನ್ನ ಸೈಕಲ್​ಗಳಿಗೆ ಕಟ್ಟಿಕೊಂಡು ಕೆ.ಆರ್. ಮಾರ್ಕೆಟ್, ಟೌನ್ ಹಾಲ್ ತನಕ ಗುಲಾಬಿ ಹೂ ನೀಡಿ ಬಂದ್ ಗೆ ಮನವಿ
  • ಖಾಸಗಿ ವಾಹನ ಮಾಲೀಕರ ಒಕ್ಕೂಟ: ನ್ಯಾಷನಲ್ ಕಾಲೇಜ್ ಮೈದಾನದಿಂದ ಟೌನ್ ಹಾಲ್ ವರೆಗೆ ಒಂದು ಸಾವಿರ ಆಟೋ, 300 ಕ್ಯಾಬ್ ಗಳ ಮೂಲಕ  ಮೆರವಣಿಗೆ
  • ಸ್ವಾಭಿಮಾನಿ ಸೇನೆಯಿಂದ ಮೈಸೂರು ರೋಡ್ ನ  ಗಾಳಿ ಆಂಜನೇಯ ದೇವಸ್ಥಾನ ದಿಂದ  ಮೆಜೆಸ್ಟಿಕ್, ಗಾಂಧಿನಗರ, ಬ್ರಿಗೇಡ್ , ಟೌನ್ ಹಾಲ್ ತನಕ ಕ್ಯಾಂಟರ್ ವಾಹನ ಮೂಲಕ ಬಂದ್ ಬಗ್ಗೆ ಜಾಗೃತಿ, ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಮನವಿ.
  • ಪೀಸ್ ಆಟೋ ಸಂಘಟನೆಯಿಂದ  9 ಗಂಟೆಗೆ ಆಟೋ ರ್ಯಾಲಿ
  • ಕರ್ನಾಟಕ ಕ್ರೈಸ್ತ ಸಂಘಟನೆಯ 200 ಜನರಿಂದ ಟೌನ್ ಹಾಲ್ ನಿಂದ  ಫ್ರೀಡಂಪಾರ್ಕ್ ವರೆಗೆ ಬೈಕ್ ರ್ಯಾಲಿ
  • ನಮ್ಮ ಕರುನಾಡು ಯುವ ಸೇನೆಯಿಂದ ನವರಂಗ್ ಸರ್ಕಲ್ ಬಳಿ ಟೈರ್ ಗೆ ಬೆಂಕಿ, ರಾಜ್ಯ ನಾಯಕರ ಪ್ರತಿಕೃತಿ ದಹನ

ಫ್ರೀಡಂಪಾರ್ಕ್​ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ

ಇನ್ನು ಫ್ರೀಡಂಪಾರ್ಕ್ ಹೊರತುಪಡಿಸಿ ಬೇರೆ ಕಡೆ ಧರಣಿಗೆ ಅವಕಾಶವಿಲ್ಲ. ನಗರದ ವಿವಿಧೆಡೆ ಪ್ರತಿಭಟನೆ ನಡೆಸಲು ಮುಂದಾದರೆ ವಶಕ್ಕೆ ಪಡೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್