ಸೋಮವಾರ ಬೆಂಗಳೂರು ಬಂದ್, ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಿಎಂಟಿಸಿಯಿಂದ ಹೆಚ್ಚುವರಿ ಟ್ರಿಪ್

ಸೆ.11 ಬೆಂಗಳೂರು ಬಂದ್​ ಹಿನ್ನೆಲೆ ಸರ್ಕಾರಿ ಸಾರಿಗೆ ಇಲಾಖೆ ಅಲರ್ಟ್ ಆಗಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಬಿಎಂಟಿಸಿ ಪ್ಲಾನ್ ಮಾಡಿದೆ. ಬಂದ್​ನಿಂದಾಗಿ ಏರ್ಪೋಟ್ ಪ್ರಯಾಣಿಕರಿಗೆ ತೊಂದರೆಯಾಗದಂತೆ ನಾಳೆ ಟ್ಯಾಕ್ಸಿ ಬದಲಾಗಿ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಕೆಂಪೇಗೌಡ ಏರ್ಪೋಟ್​ನಿಂದ ವಿವಿಧೆಡೆಗೆ ಹೆಚ್ಚುವರಿ ಟ್ರಿಪ್ ಮಾಡಲು ಚಾಲಕರಿಗೆ ಸೂಚಿಸಲಾಗಿದೆ.

ಸೋಮವಾರ ಬೆಂಗಳೂರು ಬಂದ್, ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಿಎಂಟಿಸಿಯಿಂದ ಹೆಚ್ಚುವರಿ ಟ್ರಿಪ್
ಪ್ರಾತಿನಿಧಿಕ ಚಿತ್ರ
Edited By: ಆಯೇಷಾ ಬಾನು

Updated on: Sep 10, 2023 | 2:22 PM

ದೇವನಹಳ್ಳಿ, ಸೆ.10: ನಾಡಿನ ನಾರಿ ಶಕ್ತಿಗೆ ಉಚಿತ ಬಸ್ ಸೇವೆ ನೀಡುವ ಸರ್ಕಾರದ ಶಕ್ತಿಯೋಜನೆಯಿಂದಾಗಿ ಖಾಸಗಿ ಸಾರಿಗೆಗೆ ಭಾರೀ ಹೊಡೆತಬಿದ್ದಿದೆ. ಹೀಗಾಗಿ ಸರ್ಕಾರದ ಜೊತೆ ಮುಸುಕಿನ ಗುದ್ದಾಟ ನಡೆಸುತ್ತಿದ್ದ ಖಾಸಗಿ ಸಾರಿಗೆ ಒಕ್ಕೂಟ, ಇದೀಗ ತಮ್ಮ ಬೇಡಿಕೆಗಳ ಈಡೇರಿಕೆಗೆ ಬೆಂಗಳೂರು ಬಂದ್​ಗೆ ಮುಂದಾಗಿದೆ. ಆದರೆ ಇತ್ತ ನಗರದ ಜನರಿಗೆ ಸಮಸ್ಯೆ ಆಗಬಾರದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರ್ಜರಿ ಪ್ಲಾನ್ ಮಾಡಿದ್ದು ಹೆಚ್ಚುವರಿ ಬಸ್​ಗಳನ್ನು ರಸ್ತೆಗಿಳಿಸಲು ಸೂಚಿಸಿದ್ದಾರೆ. ಬಂದ್ ನಿಂದ ಏರ್ಪೋಟ್ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಪ್ರತಿನಿತ್ಯ 500ಕ್ಕೂ ಅಧಿಕ ಟ್ರಿಪ್​ಗಳನ್ನ ಓಡಿಸುವ ಬಿಎಂಟಿಸಿಗೆ ನಾಳೆ 500 ಟ್ರಿಪ್ ಜೊತೆಗೆ ಹೆಚ್ಚುವರಿ 100 ಟ್ರಿಪ್ ಓಡಿಸಲು ಸೂಚಿಸಲಾಗಿದೆ.

ಬೈಕ್‌ ಟ್ಯಾಕ್ಸಿ ನಿರ್ಬಂಧ, ಚಾಲಕರಿಗೆ ಸಹಾಯಧನ ಸೇರಿದಂತೆ ಸರ್ಕಾರದ ಮುಂದೆ ಹತ್ತು ಹಲವು ಬೇಡಿಕೆ ಇಟ್ಟಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇದೇ ಸೋಮವಾರ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ. ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ ಸೇವೆ ಸ್ಥಗಿತ ಮಾಡಿ ಬಂದ್‌ ನಡೆಸಲು ತಯಾರಿ ನಡೆದಿದೆ. ಆದರೆ ಇತ್ತ ಸರ್ಕಾರಿ ಸಾರಿಗೆ ಇಲಾಖೆ ಅಲರ್ಟ್ ಆಗಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ಲಾನ್ ರೂಪಿಸಿದೆ.

ಬಂದ್​ನಿಂದಾಗಿ ಏರ್ಪೋಟ್ ಪ್ರಯಾಣಿಕರಿಗೆ ತೊಂದರೆಯಾಗದಂತೆ ನಾಳೆ ಟ್ಯಾಕ್ಸಿ ಬದಲಾಗಿ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಕೆಂಪೇಗೌಡ ಏರ್ಪೋಟ್​ನಿಂದ ವಿವಿಧೆಡೆಗೆ ಹೆಚ್ಚುವರಿ ಟ್ರಿಪ್ ಮಾಡಲು ಚಾಲಕರಿಗೆ ಸೂಚಿಸಲಾಗಿದೆ. ಇಂದು ಮಧ್ಯರಾತ್ರಿಯಿಂದಲೆ ಏರ್ಪೋಟ್ ನಿಂದ ಬಿಎಂಟಿಸಿ ವಾಯುವಜ್ರ ಬಸ್​ಗಳ ಸಂಚಾರ ಆರಂಭವಾಗಲಿದೆ. ಪ್ರತಿನಿತ್ಯ 500ಕ್ಕೂ ಅಧಿಕ ಟ್ರಿಪ್​ಗಳನ್ನ ಬಿಎಂಟಿಸಿ ಓಡಿಸುತ್ತಿದೆ. ಆದರೆ ನಾಳೆ ಬಂದ್ ಇರುವ ಹಿನ್ನೆಲೆ ಹೆ್ಚುವರಿ 100 ಟ್ರಿಪ್ ಓಡಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಸೆ.11 ಬೆಂಗಳೂರು ಬಂದ್; ಯಾರಿಗೆಲ್ಲ ಸಮಸ್ಯೆ, ಸಾರಿಗೆ ಸಂಘಟನೆಗಳ ಪ್ರಮುಖ ಬೇಡಿಕೆಗಳೇನು?

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ

ಇನ್ನು ಈ ಸಂಬಂಧ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ ಆಯೋಜಿಸಲಾಗಿದೆ. ಬೆಂಗಳೂರು ನಗರದಲ್ಲಿ ಯಾವುದೇ ಱಲಿ ನಡೆಸಲು ಅವಕಾಶವಿಲ್ಲ. ಭದ್ರತೆಗೆ ಕೆಎಸ್​ಆರ್​ಪಿ, ಸಿಎಆರ್​ ತುಕಡಿ ನಿಯೋಜಿಸಲಾಗುವುದು. ಕಾನೂನು ಬಾಹಿರ ಕೃತ್ಯ, ಶಾಂತಿ ಕದಡುವ ಯತ್ನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್​ ತಿಳಿಸಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us