AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರು ಬಂದ್​: ಎಂದಿನಂತೆ ಸಂಚರಿಸಲಿದೆ ಮೆಟ್ರೋ, ಆದರೆ..

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ. ಉಳಿದಂತೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘ ಸೇರಿದಂತೆ ಕೆಲವೊಂದು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ನಮ್ಮ ಮೆಟ್ರೋ ಎಂದಿನಂತೆ ಸಂಚರಿಸಲಿದೆ.

ನಾಳೆ ಬೆಂಗಳೂರು ಬಂದ್​: ಎಂದಿನಂತೆ ಸಂಚರಿಸಲಿದೆ ಮೆಟ್ರೋ, ಆದರೆ..
ನಮ್ಮ ಮೆಟ್ರೋImage Credit source: ANI
TV9 Web
| Updated By: Rakesh Nayak Manchi|

Updated on:Sep 25, 2023 | 4:16 PM

Share

ಬೆಂಗಳೂರು, ಸೆ.25: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್​ಗೆ (Bangalore Bandh) ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಬಿಎಂಟಿಸಿ ಬಸ್​ಗಳು ಪರಿಸ್ಥಿತಿ ನೋಡಿಕೊಂಡು ಸಂಚಾರ ಆರಂಭಿಸಲಿವೆ. ಆದರೆ ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಅರ್​ಸಿಎಲ್ (BMRCL) ತಿಳಿಸಿದೆ.

ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಬಿಎಂಆರ್​ಸಿಎಲ್ ಅಧಿಕಾರಿಗಳು, ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೈನಂದಿನಂತೆ ನಮ್ಮ ಮೇಟ್ರೋ ಸಂಚಾರ ಇರಲಿದೆ. ಸಂದರ್ಭಕ್ಕೆ ತಕ್ಕಂತೆ ಮೇಟ್ರೋ ಕಾರ್ಯಚರಣೆ ನಡೆಸಲಿದೆ. ಅದಾಗ್ಯೂ, ಸ್ಥಿತಿಗತಿಯ ಮೇಲೆ ಮೇಟ್ರೋ ಸಂಚಾರದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಂದ್; ವಿಮಾನ, ರೈಲು ನಿಲ್ದಾಣಗಳಿಗೆ ಬಂದವರು ಗಮ್ಯ ತಲುಪಲು ಏನು ವ್ಯವಸ್ಥೆ? ಇಲ್ಲಿದೆ ವಿವರ

ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿವೆ. ಈ ಬಂದ್​ಗೆ ಆಟೋ, ಓಲಾ, ಊಬರ್, ಖಾಸಗಿ ಬಸ್​ ಮಾಲೀಕರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಪೈಕಿ ಆಟೋ, ಓಲಾ, ಊಬರ್ ಸಂಘಟನೆಗಳು ಬೆಂಬಲ ವಾಪಸ್ ಪಡೆದಿದ್ದು, ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿವೆ.

ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಅದಾಗ್ಯೂ ಕೆಲವೊಂದು ಸಂಘಟನೆಗಳು ಬೆಂಗಳೂರು ಬಂದ್​ಗೆ ಬೆಂಬಲ ಸೂಚಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Mon, 25 September 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!