AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್: ನಾಳೆ ಏನೇನು ಇರುತ್ತೆ? ಏನೇನು ಇರುವುದಿಲ್ಲ?

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಭಾಗವಾಗಿ ನಾಳೆ ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. ಸರ್ಕಾರಿ ಸಾರಿಗೆಗಳು, ಆಸ್ಪತ್ರೆ, ಮೆಡಿಕಲ್ ಲಭ್ಯವಿದ್ದು, ಆಟೋ, ಗೂಡ್ಸ್ ಇತ್ಯಾದಿಗಳು ಲಭ್ಯವಿರುವುದಿಲ್ಲ.

ಬೆಂಗಳೂರು ಬಂದ್: ನಾಳೆ ಏನೇನು ಇರುತ್ತೆ? ಏನೇನು ಇರುವುದಿಲ್ಲ?
ನಾಳೆ ಬೆಂಗಳೂರು ಬಂದ್, ಏನಿರುತ್ತೆ? ಏನಿರಲ್ಲ? (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 25, 2023 | 6:21 PM

Share

ಬೆಂಗಳೂರು, ಸೆ.25: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಭಾಗವಾಗಿ ನಾಳೆ ಬೆಂಗಳೂರು ಬಂದ್​ಗೆ (Bangalore Bandh) ಕರೆ ಕೊಟ್ಟಿವೆ. ಹಾಗಾದರೆ ನಾಳೆ ಏನೆಲ್ಲಾ ಲಭ್ಯವಿದೆ? ಯಾವುದು ಲಭ್ಯವಿರುವುದಿಲ್ಲ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ನಾಳೆ ಏನೇನು ಇರುತ್ತದೆ?

  • ಬಿಎಂಟಿಸಿ ಬಸ್ಸುಗಳು
  • ಮೆಟ್ರೋ‌ ವ್ಯವಸ್ಥೆ ಇರುತ್ತೆ
  • ಒಲಾ ಒಬರ್ ಇರಲಿವೆ
  • ಥಿಯೇಟರ್ ಒಪನ್ ಇರಲಿವೆ
  • ಮೆಡಿಕಲ್ ಒಪನ್ ಇರಲಿವೆ
  • ಹಾಲಿನ ಬೂತ್ ತೆರದಿಲಿವೆ
  • ಅಂಚೆ ಕಚೇರಿ
  • ಸರ್ಕಾರಿ ಕಚೇರಿ
  • ಪೆಟ್ರೋಲ್ ಬಂಕ್
  • ಬ್ಯಾಂಕ್
  • ಅಂಬುಲೆನ್ಸ್

ಇದನ್ನೂ ಓದಿ: ಬಲವಂತದ ಬಂದ್​ಗೆ ಇಲ್ಲ ಅವಕಾಶ, ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ; ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ

ಏನು ಇರುವುದಿಲ್ಲ?

  • ಆಟೋ
  • ಗೂಡ್ಸ್ ವಾಹನ
  • ಖಾಸಗಿ ಬಸ್ಸುಗಳು
  • ಕೈಗಾರಿಕೆಗಳು
  • ಜುವೆಲ್ಲರಿ ಶಾಪ್
  • ಶಾಲೆಗಳು ಒಪನ್
  • ಶಾಲಾ ವಾಹನಗಳು ಇರುವುದಿಲ್ಲ

ಬೆಂಗಳೂರು ನಗರ ಬಂದ್​ ಹಿನ್ನೆಲೆ ಕೆಲವೆಡೆ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ. ಖಾಸಗಿ ವಾಹನಗಳ ಒಕ್ಕೂಟದಿಂದ ನ್ಯಾಷನಲ್ ಕಾಲೇಜಿನಿಂದ ಟೌನ್​ಹಾಲ್​ವರೆಗೂ ಬೃಹತ್ ಱಲಿ ನಡೆಯಲಿದ್ದು, ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಮತ್ತೊಂದು ಱಲಿ ನಡೆಯಲಿದೆ. ಈ ವೇಳೆ ಸಾಕಷ್ಟು ಟ್ರಾಫಿಕ್​ಜಾಮ್ ಉಂಟಾಗುವ ಸಾಧ್ಯತೆ ಇದೆ.

ಬೆಂಗಳೂರು ಬಂದ್​ಗೆ ರಾಜ್ಯ ಹೊಟೇಲ್ ಮಾಲೀಕರ ಸಂಘ ಬೆಂಬಲ

ರಾಜ್ಯ ಹೊಟೇಲ್ ಮಾಲೀಕರ ಸಂಘ ಲಾಗಿ ಕರ್ನಾಟಕ ಬಂದ್​ಗೆ ಮಾತ್ರ ಬೆಂಬಲ ಸೂಚಿಸಿತ್ತು. ಇದೀಗ ಬೆಂಗಳೂರು ಬಂದ್​ಗೂ ಬೆಂಬಲ ಸೂಚಿಸಿದೆ. ಈ ಬಗ್ಗೆ ಟಿವಿ9ಗೆ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾರ್ ಮಾಹಿತಿ ನೀಡಿದ್ದು, ನಾಳೆ ಸಂಪೂರ್ಣವಾಗಿ ಹೋಟೆಲ್​ಗಳು ಮುಚ್ಚಲಿವೆ ಎಂದರು.

ಬೆಂಗಳೂರು ಬಂದ್​ಗೆ ಖಾಸಗಿ ಸಾರಿಗೆ ಒಕ್ಕೂಟದ ಬೆಂಬಲ

ಬೆಂಗಳೂರು ನಗರ ಬಂದ್​ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ. ನಮ್ಮ 37 ಸಂಘಟನೆಗಳು ನಾಳೆಯ ಬಂದ್​ನಲ್ಲಿ ಭಾಗಿಯಾಗಲಿವೆ. ಯಾವುದೇ ಕಾರಣಕ್ಕೂ ನಾಳೆ ಖಾಸಗಿ ಬಸ್​ಗಳು ರಸ್ತೆಗಿಳಿಯುವುದಿಲ್ಲ. ನ್ಯಾಷನಲ್ ಕಾಲೇಜಿನಿಂದ ಟೌನ್ ಹೌಲ್​ವರೆಗೆ ಱಲಿ ನಡೆಸುತ್ತೇವೆ. ಎರಡು ಸಾವಿರಕ್ಕೂ ಹೆಚ್ಚು ಚಾಲಕರು ಬಂದ್​ನಲ್ಲಿ ಭಾಗಿಯಾಗಲಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!