AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನ ಈ ಪಾರ್ಕ್​ನಲ್ಲಿ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ; ನಾಗಿಣಿ ಡ್ಯಾನ್ಸ್​ ಮಾಡಬಹುದಾ ಎಂದ ನೆಟ್ಟಿಗರು!

ಬೆಂಗಳೂರಿನ ಈ ಪಾರ್ಕ್​ನಲ್ಲಿ ಯಾರೂ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ, ಬಲದಿಂದ ಎಡಕ್ಕೆ ಯಾರೂ ನಡೆಯುವಂತಿಲ್ಲ ಎಂದು ಬಿಬಿಎಂಪಿ ದೊಡ್ಡ ಬೋರ್ಡ್​ ಹಾಕಿದೆ. ಇದರ ಫೋಟೋ ಈಗ ವೈರಲ್ ಆಗಿದೆ.

Bengaluru: ಬೆಂಗಳೂರಿನ ಈ ಪಾರ್ಕ್​ನಲ್ಲಿ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ; ನಾಗಿಣಿ ಡ್ಯಾನ್ಸ್​ ಮಾಡಬಹುದಾ ಎಂದ ನೆಟ್ಟಿಗರು!
ಬೆಂಗಳೂರಿನ ಪಾರ್ಕ್​ನಲ್ಲಿರುವ ಬೋರ್ಡ್Image Credit source: Hindustan Times
TV9 Web
| Edited By: |

Updated on:Jul 14, 2022 | 1:22 PM

Share

ಬೆಂಗಳೂರು: ಬೆಂಗಳೂರು ಉದ್ಯಾನನಗರಿ ಎಂಬ ಹೆಗ್ಗಳಿಕೆ ಪಡೆದಿರುವ ನಗರ. ಇಲ್ಲಿ ಪ್ರತಿ ಏರಿಯಾಗೂ ನಾಲ್ಕೈದು ಪಾರ್ಕ್​ಗಳಿರುತ್ತವೆ. ಸಾಮಾನ್ಯವಾಗಿ ಭಾರತದ ಸಾರ್ವಜನಿಕ ಪಾರ್ಕ್​ಗಳಲ್ಲಿ ಜನರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಅವರಿಗಾಗಿ ಸಮಯವನ್ನೂ ನಿಗದಿ ಮಾಡಲಾಗುತ್ತದೆ. ಬೆಳಗಿನ ವೇಳೆ ಜಾಗಿಂಗ್, ವಾಕಿಂಗ್ ಮಾಡುವವರಿಗೆ ಮತ್ತು ಸಂಜೆಯ ವೇಳೆ ವಾಕಿಂಗ್ ಮಾಡುವವರಿಗೆ ಪಾರ್ಕ್​ಗಳ ಗೇಟ್ ಓಪನ್ ಮಾಡಲಾಗುತ್ತದೆ. ಆದರೆ, ಬೆಂಗಳೂರಿನ ಈ ಪಾರ್ಕ್​ನಲ್ಲಿ ಯಾರೂ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ, ಬಲದಿಂದ ಎಡಕ್ಕೆ ಯಾರೂ ನಡೆಯುವಂತಿಲ್ಲ ಎಂದು ಬಿಬಿಎಂಪಿ ದೊಡ್ಡ ಬೋರ್ಡ್​ ಹಾಕಿದೆ. ಇದರ ಫೋಟೋ ಈಗ ವೈರಲ್ ಆಗಿದ್ದು, ಪಾರ್ಕ್​ನಲ್ಲಿ ವಾಕಿಂಗ್ ಮಾಡಬಾರದು ಎಂದಾದರೆ ನಾಗಿಣಿ ಡ್ಯಾನ್ಸ್​ ಮಾಡಬಹುದಾ? ಎಂದು ಲೇವಡಿ ಮಾಡಿದ್ದಾರೆ.

ಬೆಂಗಳೂರಿನ ಪಾರ್ಕ್​ನ ಗೇಟ್​​ನಲ್ಲಿ ಹಾಕಿರುವ ಒಂದು ಫಲಕದ ಫೋಟೋ ಈಗ ವೈರಲ್ ಆಗಿದೆ. ಇಲ್ಲಿ ಜನರು ಆ್ಯಂಟಿ ಕ್ಲಾಕ್​ವೈಸ್​ (ಬಲದಿಂದ ಎಡಕ್ಕೆ) ನಡೆಯುವಂತಿಲ್ಲ, ವಾಕಿಂಗ್ ಮಾಡುವಂತಿಲ್ಲ, ಜಾಗಿಂಗ್ ಮಾಡುವಂತಿಲ್ಲ ಎಂದು ಬೋರ್ಡ್​ ಹಾಕಲಾಗಿದೆ. ಹಾಗಿದ್ದರೆ ಈ ಪಾರ್ಕ್​ನಲ್ಲಿ ಏನು ಮಾಡಬೇಕು? ಎಂಬುದು ಸದ್ಯಕ್ಕೆ ನೆಟ್ಟಿಗರ ಪ್ರಶ್ನೆಯಾಗಿದೆ. ಈ ಬೋರ್ಡ್​ ಹಾಕುವ ಮೂಲಕ ಬಿಬಿಎಂಪಿ ಸಾಮಾಜಿಕ ಜಾಲತಾಣ ಬಳಕೆದಾರರ ಲೇವಡಿಗೆ ಗುರಿಯಾಗಿದೆ.

ಇದನ್ನೂ ಓದಿ
Image
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ
Image
ಆಹಾರದ ಮೇಲೆ ಜಿಎಸ್​ಟಿ ಹೇರಿಕೆ; ನಾಳೆ ಯಶವಂತಪುರ ಎಪಿಎಂಸಿ ಬಂದ್, ಅಕ್ಕಿಗಿರಣಿ ಮಾಲೀಕರ ಸಂಘದಿಂದ ಪ್ರತಿಭಟನೆ
Image
ಬಿಬಿಎಂಪಿಯ ಮತ್ತೊಂದು ಕಳಪೆ ಕಾಮಗಾರಿ ಬಟಾಬಯಲು! ವೈಟ್ ಟಾಪಿಂಗ್ ಮಾಡಿದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣ

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲಿ ಹೆಂಡತಿಯನ್ನು ಇರಿದು ಕೊಂದು ಪೊಲೀಸರಿಗೆ ಫೋನ್ ಮಾಡಿದ ಟೈಲರ್!

ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಕಿರುವ ಬೋರ್ಡ್ ಈಗ ಚರ್ಚೆಗೆ ಕಾರಣವಾಗಿದೆ. ಹಾಗಿದ್ದರೆ ಪಾರ್ಕ್​ನಲ್ಲಿ ನಾಗಿನ್ (ಹಾವಿನ) ನೃತ್ಯವನ್ನು ಮಾಡಬಹುದಾ? ಎಂದು ಒಬ್ಬರು ಇದಕ್ಕೆ ಕಮೆಂಟ್ ಮಾಡಿದ್ದಾರೆ. ಅದಕ್ಕೆ ಮರುಟ್ವೀಟ್ ಮಾಡಿರುವ ಇನ್ನೊಬ್ಬರು, ನೀವು ನಾಗಿಣಿ ಡ್ಯಾನ್ಸನ್ನು ಕೂಡ ಎಡದಿಂದ ಬಲಕ್ಕೇ ಮಾಡಬೇಕು, ಇಲ್ಲವಾದರೆ ನಿಮಗೆ ಅನುಮತಿಯಿಲ್ಲ ಎಂದು ತಮಾಷೆ ಮಾಡಿದ್ದಾರೆ.

ಇನ್ನು ಕೆಲವರು ಹಾಗಾದರೆ ಈ ಪಾರ್ಕ್​ನಲ್ಲಿ ಮೂನ್ ವಾಕ್ ಮಾಡಬಹುದಾ? ಎಂದು ಬಿಬಿಎಂಪಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ. ಸರಿಯಾಗಿ ರಸ್ತೆ ರಿಪೇರಿ, ಚರಂಡಿ ರಿಪೇರಿ ಮಾಡೋದನ್ನು ಬಿಟ್ಟು ಬಿಬಿಎಂಪಿ ಬೇರೆಲ್ಲ ನಿಯಮಗಳನ್ನೂ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

Published On - 1:20 pm, Thu, 14 July 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ