AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಆರ್​ಐ ಕುರಿತ ಚಾಟ್​ಜಿಪಿಟಿ ಮಾಹಿತಿಯಿಂದ ಅಚ್ಚರಿಗೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನ ಕ್ಯಾಪಿಟಲ್‌ಮೈಂಡ್‌ನ ಸಂಸ್ಥಾಪಕ ಮತ್ತು ಸಿಇಒ ದೀಪಕ್ ಶೆಣೈ ಅವರು ಚಾಟ್‌ಜಿಪಿಟಿಯನ್ನು ಬಳಸಿಕೊಂಡು ಮಾಡಿದ ಆವಿಷ್ಕಾರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಕೃತಕ ಬುದ್ಧಿಮತ್ತೆ (AI) ದೈನಂದಿನ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ. ಆಗಾಗ ಬಳಕೆದಾರರಿಗೆ ಅವರ ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತದೆ. ಈಗ, ಬೆಂಗಳೂರು ಮೂಲದ ಸಿಇಒ ತಮ್ಮ ಆರೋಗ್ಯ ರಕ್ಷಣೆಯಲ್ಲಿ ಎಐನ ಸಾಮರ್ಥ್ಯದ ಕುರಿತು ಹಂಚಿಕೊಂಡ ಮಾಹಿತಿಯೊಂದು ಆನ್‌ಲೈನ್‌ನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಎಂಆರ್​ಐ ಕುರಿತ ಚಾಟ್​ಜಿಪಿಟಿ ಮಾಹಿತಿಯಿಂದ ಅಚ್ಚರಿಗೊಂಡ ಬೆಂಗಳೂರು ಉದ್ಯಮಿ
Bengaluru Ceo Deepak Shenoy
ಸುಷ್ಮಾ ಚಕ್ರೆ
|

Updated on:Feb 01, 2025 | 7:57 PM

Share

ಬೆಂಗಳೂರು: ಬೆಂಗಳೂರು ಮೂಲದ ಕ್ಯಾಪಿಟಲ್‌ಮೈಂಡ್‌ನ ಸಂಸ್ಥಾಪಕ ಮತ್ತು ಸಿಇಒ ದೀಪಕ್ ಶೆಣೈ ಅವರು ಚಾಟ್‌ಜಿಪಿಟಿಯನ್ನು ಬಳಸಿಕೊಂಡು ಮಾಡಿದ ಆವಿಷ್ಕಾರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಎಐ ಚಾಟ್‌ಬಾಟ್ ದೀಪಕ್​ ಶೆಣೈ ಅವರ ಎಂಆರ್‌ಐ ರಿಪೋರ್ಟ್​ನ ವಿಶ್ಲೇಷಣೆ ಮಾಡಿ ಅವರ ಮೊಣಕಾಲಿನ ಸಮಸ್ಯೆಯಿಂದಾಗಿ ಡೀಪ್ ಸ್ಕ್ವಾಟ್‌ ಮಾಡಬಾರದು ಎಂದು ಯಾವ ರೀತಿ ಎಚ್ಚರಿಕೆ ನೀಡಿತು ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ. ಇದು ಇದೀಗ ಆನ್​ಲೈನ್​ನಲ್ಲಿ ಚರ್ಚೆಯಾಗುತ್ತಿದೆ. ಆರೋಗ್ತ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವನ್ನು ಯಾವ ರೀತಿ ಬಳಸಬಹುದು ಎಂಬುದನ್ನು ಇದು ಸಾಬೀತುಪಡಿಸಿದೆ.

“ನನ್ನ ಎಂಆರ್‌ಐ ವರದಿಯ ಚಾಟ್‌ಜಿಪಿಟಿ ವಿಶ್ಲೇಷಣೆಯಿಂದ ನಾನು ಡೀಪ್ ಸ್ಕ್ವಾಟ್‌ಗಳನ್ನು ಮಾಡುವುದನ್ನು ನಿಲ್ಲಿಸಬೇಕು ಎಂದು ಇದೀಗ ತಿಳಿದುಬಂದಿದೆ. ನಾನು ಸ್ಕ್ವಾಟ್​ಗಳನ್ನು ಮಾಡಲು ತರಬೇತಿ ಪಡೆಯುತ್ತಿದ್ದರಿಂದ ಚಾಟ್​ಜಿಪಿಟಿಯ ಈ ಸಲಹೆ ತುಂಬಾ ಆಸಕ್ತಿದಾಯಕವೆನಿಸಿತು” ಎಂದು ದೀಪಕ್ ಶೆಣೈ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ; ವಿಡಿಯೋ ವೈರಲ್ ಆಗುತ್ತಿದ್ದಂತೆ ಅರೆಸ್ಟ್!

ಕುತೂಹಲಕಾರಿ ಎಕ್ಸ್ ಬಳಕೆದಾರರು “ಈ ರೆಕಮಂಡೇಷನ್ ಏಕೆ ಬಂತು?” ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ದೀಪಕ್, “ನನಗೆ ಮೊಣಕಾಲಿನ ಸಮಸ್ಯೆ ಇತ್ತು. ವೈದ್ಯರು MRI ಮಾಡಿಸಿಕೊಳ್ಳಲು ಸೂಚಿಸಿದರು. ನಾನು ಫೋಟೋಗಳನ್ನು ಹಾಕಿದ್ದೇನೆ. ನನ್ನ ಮೊಣಕಾಲಿನ ಕ್ಯಾಪ್​ಗೆ ಹಾನಿಯಾಗಿದೆ. ಅದರ ವಿಶ್ಲೇಷಣೆಯಲ್ಲಿ ಚಾಟ್​ಜಿಪಿಟಿ ದೀರ್ಘವಾದ ಸ್ಕ್ವಾಟ್‌ಗಳನ್ನು ಮಾಡಬಾರದು ಎಂದು ನನಗೆ ಸೂಚಿಸಿದೆ. ನಾನಿನ್ನೂ ವೈದ್ಯರನ್ನು ಭೇಟಿಯಾಗಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Sat, 1 February 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ