ಎಂಆರ್​ಐ ಕುರಿತ ಚಾಟ್​ಜಿಪಿಟಿ ಮಾಹಿತಿಯಿಂದ ಅಚ್ಚರಿಗೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನ ಕ್ಯಾಪಿಟಲ್‌ಮೈಂಡ್‌ನ ಸಂಸ್ಥಾಪಕ ಮತ್ತು ಸಿಇಒ ದೀಪಕ್ ಶೆಣೈ ಅವರು ಚಾಟ್‌ಜಿಪಿಟಿಯನ್ನು ಬಳಸಿಕೊಂಡು ಮಾಡಿದ ಆವಿಷ್ಕಾರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಕೃತಕ ಬುದ್ಧಿಮತ್ತೆ (AI) ದೈನಂದಿನ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ. ಆಗಾಗ ಬಳಕೆದಾರರಿಗೆ ಅವರ ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತದೆ. ಈಗ, ಬೆಂಗಳೂರು ಮೂಲದ ಸಿಇಒ ತಮ್ಮ ಆರೋಗ್ಯ ರಕ್ಷಣೆಯಲ್ಲಿ ಎಐನ ಸಾಮರ್ಥ್ಯದ ಕುರಿತು ಹಂಚಿಕೊಂಡ ಮಾಹಿತಿಯೊಂದು ಆನ್‌ಲೈನ್‌ನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಎಂಆರ್​ಐ ಕುರಿತ ಚಾಟ್​ಜಿಪಿಟಿ ಮಾಹಿತಿಯಿಂದ ಅಚ್ಚರಿಗೊಂಡ ಬೆಂಗಳೂರು ಉದ್ಯಮಿ
Bengaluru Ceo Deepak Shenoy
Follow us
ಸುಷ್ಮಾ ಚಕ್ರೆ
|

Updated on:Feb 01, 2025 | 7:57 PM

ಬೆಂಗಳೂರು: ಬೆಂಗಳೂರು ಮೂಲದ ಕ್ಯಾಪಿಟಲ್‌ಮೈಂಡ್‌ನ ಸಂಸ್ಥಾಪಕ ಮತ್ತು ಸಿಇಒ ದೀಪಕ್ ಶೆಣೈ ಅವರು ಚಾಟ್‌ಜಿಪಿಟಿಯನ್ನು ಬಳಸಿಕೊಂಡು ಮಾಡಿದ ಆವಿಷ್ಕಾರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಎಐ ಚಾಟ್‌ಬಾಟ್ ದೀಪಕ್​ ಶೆಣೈ ಅವರ ಎಂಆರ್‌ಐ ರಿಪೋರ್ಟ್​ನ ವಿಶ್ಲೇಷಣೆ ಮಾಡಿ ಅವರ ಮೊಣಕಾಲಿನ ಸಮಸ್ಯೆಯಿಂದಾಗಿ ಡೀಪ್ ಸ್ಕ್ವಾಟ್‌ ಮಾಡಬಾರದು ಎಂದು ಯಾವ ರೀತಿ ಎಚ್ಚರಿಕೆ ನೀಡಿತು ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ. ಇದು ಇದೀಗ ಆನ್​ಲೈನ್​ನಲ್ಲಿ ಚರ್ಚೆಯಾಗುತ್ತಿದೆ. ಆರೋಗ್ತ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವನ್ನು ಯಾವ ರೀತಿ ಬಳಸಬಹುದು ಎಂಬುದನ್ನು ಇದು ಸಾಬೀತುಪಡಿಸಿದೆ.

“ನನ್ನ ಎಂಆರ್‌ಐ ವರದಿಯ ಚಾಟ್‌ಜಿಪಿಟಿ ವಿಶ್ಲೇಷಣೆಯಿಂದ ನಾನು ಡೀಪ್ ಸ್ಕ್ವಾಟ್‌ಗಳನ್ನು ಮಾಡುವುದನ್ನು ನಿಲ್ಲಿಸಬೇಕು ಎಂದು ಇದೀಗ ತಿಳಿದುಬಂದಿದೆ. ನಾನು ಸ್ಕ್ವಾಟ್​ಗಳನ್ನು ಮಾಡಲು ತರಬೇತಿ ಪಡೆಯುತ್ತಿದ್ದರಿಂದ ಚಾಟ್​ಜಿಪಿಟಿಯ ಈ ಸಲಹೆ ತುಂಬಾ ಆಸಕ್ತಿದಾಯಕವೆನಿಸಿತು” ಎಂದು ದೀಪಕ್ ಶೆಣೈ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ; ವಿಡಿಯೋ ವೈರಲ್ ಆಗುತ್ತಿದ್ದಂತೆ ಅರೆಸ್ಟ್!

ಕುತೂಹಲಕಾರಿ ಎಕ್ಸ್ ಬಳಕೆದಾರರು “ಈ ರೆಕಮಂಡೇಷನ್ ಏಕೆ ಬಂತು?” ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ದೀಪಕ್, “ನನಗೆ ಮೊಣಕಾಲಿನ ಸಮಸ್ಯೆ ಇತ್ತು. ವೈದ್ಯರು MRI ಮಾಡಿಸಿಕೊಳ್ಳಲು ಸೂಚಿಸಿದರು. ನಾನು ಫೋಟೋಗಳನ್ನು ಹಾಕಿದ್ದೇನೆ. ನನ್ನ ಮೊಣಕಾಲಿನ ಕ್ಯಾಪ್​ಗೆ ಹಾನಿಯಾಗಿದೆ. ಅದರ ವಿಶ್ಲೇಷಣೆಯಲ್ಲಿ ಚಾಟ್​ಜಿಪಿಟಿ ದೀರ್ಘವಾದ ಸ್ಕ್ವಾಟ್‌ಗಳನ್ನು ಮಾಡಬಾರದು ಎಂದು ನನಗೆ ಸೂಚಿಸಿದೆ. ನಾನಿನ್ನೂ ವೈದ್ಯರನ್ನು ಭೇಟಿಯಾಗಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Sat, 1 February 25

Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್