AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಮಸೀದಿ ಕುರಿತ ಈಮೇಲ್ ಸೂಕ್ತ ಪರಿಷ್ಕರಣೆ ಮಾಡದೆ ಕಳಿಸಲಾಗಿತ್ತು ಎಂದ ಬೆಂಗಳೂರು ಶಾಲೆ

ಸದರಿ ಪ್ರಮಾದವನ್ನು ಮೊದಲ ಸ್ತರದ ಅದ್ಯತೆ ನೀಡಿ ನಿರ್ವಹಣೆ ಮಾಡಲಾಗುತ್ತಿದೆ. ಸಾಮಾನ್ಯವಾಗಿ ನಮ್ಮ ಸಂಸ್ಥೆಯಿಂದ ರವಾನೆಯಾಗುವ ಈಮೇಲ್ ಗಳ ಸೂಕ್ತ ಪರಿಷ್ಕರಣೆಯ ನಂತರವೇ ಕಳಿಸಲಾಗುತ್ತದೆ. ಆದರೆ ವಿವಾದಕ್ಕೆ ಕಾರಣವಾಗಿರುವ ಸದರಿ ಮೇಲ್ ವಿಷಯದಲ್ಲಿ ಅದು ಆಗಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.

ಜ್ಞಾನವಾಪಿ ಮಸೀದಿ ಮಸೀದಿ ಕುರಿತ ಈಮೇಲ್ ಸೂಕ್ತ ಪರಿಷ್ಕರಣೆ ಮಾಡದೆ ಕಳಿಸಲಾಗಿತ್ತು ಎಂದ ಬೆಂಗಳೂರು ಶಾಲೆ
ನ್ಯೂ ಹೊರೈಜನ್ ಪಬ್ಲಿಕ್ ಶಾಲೆಯ ಸ್ಪಷ್ಟನೆ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: May 24, 2022 | 9:10 PM

Share

Bengaluru:  ಮೂರು ದಿನಗಳ ಹಿಂದೆ ತನ್ನ ಶೈಕ್ಷಣಿಕ ಸಂಸ್ಥೆಯಲ್ಲಿ ಓದಿದ ಹಳೆ ವಿದ್ಯಾರ್ಥಿಗಳಿಗೆ (alumni) ವಿವಾದಾತ್ಮಕ ಈಮೇಲ್ (controversial email) ಕಳಿಸಿ ವ್ಯಾಪಕ ಖಂಡನೆಗೆ ಗುರಿಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿರುನ ನ್ಯೂ ಹೊರೈಜನ್ ಪಬ್ಲಿಕ್ ಶಾಲೆ (New Horizon Public School) ತನ್ನಿಂದಾಗಿರುವ ಪ್ರಮಾದಕ್ಕೆ ಸ್ಪಷ್ಟನೆ ನೀಡಿದೆಯೇ ಹೊರತು ಕ್ಷಮೆ ಕೇಳಿಲ್ಲ. ಗೂಗಲ್ ‌ಮ್ಯಾಪ್ನಲ್ಲಿ ಜ್ಞಾನವಾಪಿ ಮಸೀದಿ ಬದಲು ಮಂದಿರ ಎಂದು ಬದಲಾಯಿಸಿಕೊಳ್ಳಿ ಅಂತ ಶಾಲೆಯು ತನ್ನ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಈಮೇಲ್ ಕಳಿಸಿತ್ತು.

ಕಳೆದ 50 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ನಮ್ಮ ಸಂಸ್ಥೆಯು ಈ ಎಲ್ಲ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ನೀಡುವ ಪ್ರಯತ್ನಮಾಡುತ್ತಿದೆ. ನಮ್ಮ ಶಾಲಾ ಆವರಣದಲ್ಲಿ ಉತ್ತ್ತಮ ಶಿಕ್ಷಣಕ್ಕಾಗಿ ಪೂರಕ ಮತ್ತು ಸೌಹಾರ್ದಯುತ ವಾತಾವರಣವನ್ನು ಕಲ್ಪಿಸಲಾಗಿದೆ. ನಮ್ಮ ವಿದ್ಯಾರ್ಥಿಗಳಿಗೆ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ಶಾಲೆಯಲ್ಲಿ ನೀಡಿದ್ದೇವೆ ಎಂದು ತನ್ನ ಸ್ಪಷ್ಟನೆಯಲ್ಲಿ ಹೇಳಿರುವ ನ್ಯೂ ಹೊರೈಜನ್ ಪಬ್ಲಿಕ್ ಶಾಲೆ ಆಡಳಿತ ಮಂಡಳಿಯು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಇಮೇಲ್‌ನ ಕಳಿಸಿದ್ದು ನಮ್ಮ ಗಮನಕ್ಕೆ ಬಂದಿದೆ ಎಂದಿದೆ.

ಈಮೇಲ್ ಕಳಿಸುವ ಮುನ್ನ ಸರಿಯಾದ ಪರಿಶೀಲನೆ ಆಗಿಲ್ಲ ಇದು ನಮ್ಮ ಕಣ್ತಪ್ಪಿನಿಂದ ಆದ ಪ್ರಮಾದ ಎಂದು ಆಡಳಿಯ ಮಂಡಳಿ ಸ್ಪಷ್ಟನೆ ನೀಡಿದೆ. ಸದರಿ ಪ್ರಮಾದವನ್ನು ಮೊದಲ ಸ್ತರದ ಅದ್ಯತೆ ನೀಡಿ ನಿರ್ವಹಣೆ ಮಾಡಲಾಗುತ್ತಿದೆ. ಸಾಮಾನ್ಯವಾಗಿ ನಮ್ಮ ಸಂಸ್ಥೆಯಿಂದ ರವಾನೆಯಾಗುವ ಈಮೇಲ್ ಗಳ ಸೂಕ್ತ ಪರಿಷ್ಕರಣೆಯ ನಂತರವೇ ಕಳಿಸಲಾಗುತ್ತದೆ. ಆದರೆ ವಿವಾದಕ್ಕೆ ಕಾರಣವಾಗಿರುವ ಸದರಿ ಮೇಲ್ ವಿಷಯದಲ್ಲಿ ಅದು ಆಗಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.

ಭಾರತದ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ನಮಗೆ ಹೆಮ್ಮೆಯಿದೆ ಮತ್ತು ನಾವು ಅದನ್ನು ಪ್ರತಿದಿನ ಮತ್ತು ಶಾಲೆಯ ಎಲ್ಲ ಕಾರ್ಯಕ್ರಮಗಳಲ್ಲಿ ತತ್ವಶಃ ಪಾಲಿಸುತ್ತೇವೆ ಎಂದು ಮಂಡಳಿ ಹೇಳಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ