AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ, ಹಲವು ಕಟ್ಟಡಗಳು ಸೀಜ್

ತೆರಿಗೆ ವಂಚಿಸುವ ದೊಡ್ಡ ಕುಳಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈ ಹಿಂದೆಯೂ ಹಲವು ಬಾರಿ ಬಿಬಿಎಂಪಿ ಹೇಳಿತ್ತು. ಆದರೆ, ಬಳಿಕ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಈ ಬಾರಿ ಬಿಸಿಮುಟ್ಟಿಸುತ್ತಿದೆ.

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ, ಹಲವು ಕಟ್ಟಡಗಳು ಸೀಜ್
ಆಸ್ತಿ ತೆರಿಗೆ ಪಾವತಿಸದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ, ಹಲವು ಕಟ್ಟಗಳು ಸೀಜ್
TV9 Web
| Edited By: |

Updated on:Dec 22, 2023 | 12:31 PM

Share

ಬೆಂಗಳೂರು, ಡಿಸೆಂಬರ್ 22: ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಕಾರ್ಯಾಚರಣೆ ಆರಂಭಿಸಿದೆ. ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್​ ಮಾಡುವ ಕಾರ್ಯವನ್ನು ಅಧಿಕಾರಿಗಳು ಶುರುಮಾಡಿದ್ದಾರೆ. ಬಿಬಿಎಂಪಿ ಆಸ್ತಿ ತೆರಿಗೆ (Property Tax) ವಸೂಲಿಗೆ ಕಠಿಣ ಕ್ರಮ ಕೈಗೊಳ್ಳಲು ನವೆಂಬರ್‌ನಲ್ಲೇ ಬಿಬಿಎಂಪಿ ಮುಂದಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಹೆಚ್ಚು ಪ್ರಮಾಣದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಕಾರು, ಬೈಕ್​ ಜಪ್ತಿ ಮಾಡಲು ಆರಂಭಿಸಿತ್ತು.

ಆಸ್ತಿ ತೆರಿಗೆ ಕಟ್ಟದವರಿಗೆ ಮೊದಲು ನೋಟಿಸ್ ನೀಡಲಾಗುತ್ತದೆ. ನಂತರ ಕಟ್ಟಡ ಮಾಲೀಕರ ಕಾರ್, ಬೈಕ್​ಗಳನ್ನು​ ಸೀಜ್ ಮಾಡಿ ಹರಾಜು ಹಾಕಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಕೆಲ ದಿನಗಳ ಹಿಂದೆ ತಿಳಿಸಿದ್ದರು. ಅದರಂತೆ ಕಾರ್ಯಪ್ರವೃತ್ತರಾಗಿದ್ದರು. ತೆರಿಗೆ ಬಾಕಿ ಉಳಿಸಿಕೊಂಡವರ ಕಾರ್​ ಮತ್ತು ಬೈಕ್​ ಸೀಜ್ ಮಾಡುವುದಕ್ಕೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದರು.

ತೆರಿಗೆ ವಂಚಿಸುವ ದೊಡ್ಡ ಕುಳಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈ ಹಿಂದೆಯೂ ಹಲವು ಬಾರಿ ಬಿಬಿಎಂಪಿ ಹೇಳಿತ್ತು. ಆದರೆ, ಬಳಿಕ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಈ ಬಾರಿ ಬಿಸಿಮುಟ್ಟಿಸುತ್ತಿದೆ.

ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ 6 ಮಂದಿ ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸಿ ರಾಜ್ಯ ಸರ್ಕಾರ ಅಕ್ಟೋಬರ್​​ನಲ್ಲಿ ಆದೇಶ ಹೊರಡಿಸಿತ್ತು. ಮುನೀಶ್ ಮೌದ್ಗಿಲ್​ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಮೌದ್ಗಿಲ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ವಸೂಲಿಗೆ ಹೊಸ ಪ್ಲಾನ್: ಕಾರು, ಬೈಕ್​ ಜಪ್ತಿಗೆ ಮುಂದಾದ ಬಿಬಿಎಂಪಿ

ವರ್ತೂರು, ವೈಟ್​ಫೀಲ್ಡ್ ಸೇರಿದಂತೆ ನಗರದ ಹಲವೆಡೆ ಗುರುವಾರ ಸಂಜೆಯಿಂದ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹಲವು ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:28 pm, Fri, 22 December 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್