AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೀದಿನಾಯಿಗಳ ಸಂತತಿ ತಡೆಯಲು 3 ವರ್ಷಗಳಲ್ಲಿ 15 ಕೋಟಿ ಖರ್ಚು; ಆದರೂ ಅವುಗಳ ಸಂಖ್ಯೆ ದುಪ್ಪಟ್ಟು!

ಬೀದಿ ನಾಯಿಗಳ ಸಂತತಿ ತಡೆಯಲು, ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗಿತ್ತು. ಆದರೂ ಅವುಗಳ ಸಂತತಿ ದುಪ್ಪಟ್ಟಾಗಿದೆ. ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಹೆಸರಲ್ಲಿ ದುಂದುವೆಚ್ಚ ಆಗಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ.

Bengaluru: ಬೀದಿನಾಯಿಗಳ ಸಂತತಿ ತಡೆಯಲು 3 ವರ್ಷಗಳಲ್ಲಿ 15 ಕೋಟಿ ಖರ್ಚು; ಆದರೂ ಅವುಗಳ ಸಂಖ್ಯೆ ದುಪ್ಪಟ್ಟು!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 18, 2022 | 8:59 AM

Share

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಹೆಸರಲ್ಲಿ ದುಂದುವೆಚ್ಚ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. 3 ವರ್ಷದ ಹಿಂದೆ 3 ಲಕ್ಷ ಇದ್ದ ಬೀದಿ ನಾಯಿಗಳು, ಇದೀಗ ಸುಮಾರು 6 ಲಕ್ಷಕ್ಕೆ ಏರಿಕೆ ಆಗಿವೆ. ಬೀದಿ ನಾಯಿಗಳ ಸಂತತಿ ತಡೆಯಲು, ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗಿತ್ತು. ಆದರೂ ಅವುಗಳ ಸಂತತಿ ದುಪ್ಪಟ್ಟಾಗಿದೆ. ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಹೆಸರಲ್ಲಿ ದುಂದುವೆಚ್ಚ ಆಗಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ.

ಬೀದಿ ನಾಯಿಗಳ ಸಂತತಿ ತಡೆಯಲು ಬಿಬಿಎಂಪಿಯಿಂದ ಮೂರು ವರ್ಷಗಳಲ್ಲಿ ಬರೋಬ್ಬರಿ 15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಕಳೆದ 3 ವರ್ಷದಲ್ಲಿ 15,79,04,250 ಕೋಟಿ ರೂಪಾಯಿ ವೆಚ್ಚ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಮಾಡಲಾಗಿದೆ. ಆದರೂ ಬೆಂಗಳೂರಿನಲ್ಲಿ ಹೆಚ್ಚಾಗಿದೆ ಬೀದಿ ನಾಯಿಗಳ ಕಾಟ ಎಂದು ಹೇಳಲಾಗಿದೆ. 3 ವರ್ಷದಿಂದ ಬೀದಿನಾಯಿಗಳ ಸಂತತಿ ತಡೆಯಲು ಕೋಟಿ ಕೋಟಿ ಖರ್ಚು ಮಾಡಿದ್ದರೂ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ.

2019 ರಿಂದ 2020 ರ ವರೆಗೂ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಗೆ 3,79,82,550 ರೂಪಾಯಿ ಖರ್ಚು ಮಾಡಲಾಗಿತ್ತು. 2020-21 ರಲ್ಲಿ 5,64,46,500 ರೂಪಾಯಿ ಖರ್ಚು ಆಗಿತ್ತು. ಮತ್ತು 2021- 2022 ರಲ್ಲಿ 6,34,75,200 ಕೋಟಿ ಖರ್ಚು ಮಾಡಲಾಗಿದೆ. ಸಂತಾನ ಹರಣ ಚಿಕಿತ್ಸೆ ಹೆಸರಲ್ಲಿ ಹಗರಣ ನಡೆಯುತ್ತಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ: ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಕಿರು ಉದ್ಯಮಿಗಳಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ

Published On - 8:56 am, Fri, 18 March 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?