AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೀದಿನಾಯಿಗಳ ಸಂತತಿ ತಡೆಯಲು 3 ವರ್ಷಗಳಲ್ಲಿ 15 ಕೋಟಿ ಖರ್ಚು; ಆದರೂ ಅವುಗಳ ಸಂಖ್ಯೆ ದುಪ್ಪಟ್ಟು!

ಬೀದಿ ನಾಯಿಗಳ ಸಂತತಿ ತಡೆಯಲು, ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗಿತ್ತು. ಆದರೂ ಅವುಗಳ ಸಂತತಿ ದುಪ್ಪಟ್ಟಾಗಿದೆ. ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಹೆಸರಲ್ಲಿ ದುಂದುವೆಚ್ಚ ಆಗಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ.

Bengaluru: ಬೀದಿನಾಯಿಗಳ ಸಂತತಿ ತಡೆಯಲು 3 ವರ್ಷಗಳಲ್ಲಿ 15 ಕೋಟಿ ಖರ್ಚು; ಆದರೂ ಅವುಗಳ ಸಂಖ್ಯೆ ದುಪ್ಪಟ್ಟು!
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Mar 18, 2022 | 8:59 AM

Share

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಹೆಸರಲ್ಲಿ ದುಂದುವೆಚ್ಚ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. 3 ವರ್ಷದ ಹಿಂದೆ 3 ಲಕ್ಷ ಇದ್ದ ಬೀದಿ ನಾಯಿಗಳು, ಇದೀಗ ಸುಮಾರು 6 ಲಕ್ಷಕ್ಕೆ ಏರಿಕೆ ಆಗಿವೆ. ಬೀದಿ ನಾಯಿಗಳ ಸಂತತಿ ತಡೆಯಲು, ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗಿತ್ತು. ಆದರೂ ಅವುಗಳ ಸಂತತಿ ದುಪ್ಪಟ್ಟಾಗಿದೆ. ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಹೆಸರಲ್ಲಿ ದುಂದುವೆಚ್ಚ ಆಗಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ.

ಬೀದಿ ನಾಯಿಗಳ ಸಂತತಿ ತಡೆಯಲು ಬಿಬಿಎಂಪಿಯಿಂದ ಮೂರು ವರ್ಷಗಳಲ್ಲಿ ಬರೋಬ್ಬರಿ 15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಕಳೆದ 3 ವರ್ಷದಲ್ಲಿ 15,79,04,250 ಕೋಟಿ ರೂಪಾಯಿ ವೆಚ್ಚ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಮಾಡಲಾಗಿದೆ. ಆದರೂ ಬೆಂಗಳೂರಿನಲ್ಲಿ ಹೆಚ್ಚಾಗಿದೆ ಬೀದಿ ನಾಯಿಗಳ ಕಾಟ ಎಂದು ಹೇಳಲಾಗಿದೆ. 3 ವರ್ಷದಿಂದ ಬೀದಿನಾಯಿಗಳ ಸಂತತಿ ತಡೆಯಲು ಕೋಟಿ ಕೋಟಿ ಖರ್ಚು ಮಾಡಿದ್ದರೂ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ.

2019 ರಿಂದ 2020 ರ ವರೆಗೂ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಗೆ 3,79,82,550 ರೂಪಾಯಿ ಖರ್ಚು ಮಾಡಲಾಗಿತ್ತು. 2020-21 ರಲ್ಲಿ 5,64,46,500 ರೂಪಾಯಿ ಖರ್ಚು ಆಗಿತ್ತು. ಮತ್ತು 2021- 2022 ರಲ್ಲಿ 6,34,75,200 ಕೋಟಿ ಖರ್ಚು ಮಾಡಲಾಗಿದೆ. ಸಂತಾನ ಹರಣ ಚಿಕಿತ್ಸೆ ಹೆಸರಲ್ಲಿ ಹಗರಣ ನಡೆಯುತ್ತಿದೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ: ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಕಿರು ಉದ್ಯಮಿಗಳಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ

Published On - 8:56 am, Fri, 18 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ