AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ

ಕೊನೆಗೂ ಬೆಂಗಳೂರಿನಲ್ಲಿ ಮಳೆಯಾಗಲು ಶುರುವಾಗಿದೆ. ಆದರೆ ರಾಜಕಾಲುವೆಯಲ್ಲಿ ಸುಗಮ ಹರಿವಿಗೆ ತಡೆಯಾಗುತ್ತಿರುವುದು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಿಬಿಎಂಪಿಗೆ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಕಾರಣ, ಸಾರ್ವಜನಿಕರು ರಾಜ ಕಾಲುವೆಯಲ್ಲಿ ಕಸ ಎಸೆಯುತ್ತಿರುವುದು. ಇದರ ತಡೆಗೆ ಬಿಬಿಎಂಪಿ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ
ರಾಜಕಾಲುವೆಗೆ ಕಸ ಎಸೆದವರಿಗೆ ದಂಡ
ಶಾಂತಮೂರ್ತಿ
| Updated By: Ganapathi Sharma|

Updated on: May 10, 2024 | 6:53 AM

Share

ಬೆಂಗಳೂರು, ಮೇ 10: ಬಿಸಿಲಿನಿಂದ ಬಳಲಿದ್ದ ಬೆಂಗಳೂರಿನಲ್ಲಿ (Bengaluru) ಕೊನೆಗೂ ಮಳೆಯಾಗಲು (Rain) ಆರಂಭವಾಗಿದೆ. 6 ತಿಂಗಳಿಂದ ಮರೆಯಾಗಿದ್ದ ಮಳೆರಾಯನ ಆಗಮನದ ಜೊತೆ ಜೊತೆಗೆ ರಾಜಧಾನಿಯ ರಾಜಕಾಲುವೆಗಳಿಂದಾಗುವ (Rajakaluve) ಅವಾಂತರಗಳನ್ನು ತಪ್ಪಿಸಲು ಬಿಬಿಎಂಪಿ ಅಲರ್ಟ್ ಆಗಿದೆ. ಈಗಾಗಲೇ ರಾಜಕಾಲುವೆ ಕ್ಲೀನಿಂಗ್ ನಡೆಸುತ್ತಿರುವ ಪಾಲಿಕೆ, ರಾಜಕಾಲುವೆಗೆ ಕಸ, ಘನತ್ಯಾಜ್ಯ ಎಸೆಯುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಮಳೆ ಬರುತ್ತಿದ್ದಂತೆ ರಾಜಕಾಲುವೆಗಳಿಂದ ಭೀತಿ ಎದುರಾಗಿದೆ. ಅತ್ತ ರಾಜಕಾಲುವೆಗಳ ಕ್ಲೀನಿಂಗ್​​ಗೆ ಇಳಿದಿರುವ ಪಾಲಿಕೆಗೆ ಮತ್ತೊಂದು ಸವಾಲು ಎದುರಾಗಿದೆ. ಅದೆಷ್ಟೇ ಬೇಲಿ ಹಾಕಿದರೂ, ರಾಜಕಾಲುವೆ ಸುತ್ತ ಎತ್ತರದ ಜಾಲರಿ ಅಳವಡಿಸಿದ್ದರೂ ರಾಜಕಾಲುವೆಗೆ ಕಸ ಎಸೆಯುವವರನ್ನು ತಡೆಯುವುದು ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.

ಈಗಾಗಲೇ ಕೆಲ ರಾಜಕಾಲುವೆಗಳ ಬಳಿ ಗೋಡೆಗಳು ಒಡೆದು ಹೋಗಿರುವ ಕಡೆ ಜನರು ಡಪಿಂಗ್ ಯಾರ್ಡ್​​​ಗಳಂತೆ ಕಸ ಸುರಿಯಲು ಶುರುಮಾಡಿದ್ದಾರೆ. ಕಸ ಅಲ್ಲದೇ ಕಟ್ಟಡದ ಅವಶೇಷಗಳು, ಘನತ್ಯಾಜ್ಯಗಳನ್ನು ರಾಜಕಾಲುವೆಗೆ ಎಸೆಯುತ್ತಿದ್ದವರಿಗೆ ಬಿಸಿ ಮುಟ್ಟಿಸಲು ಪಾಲಿಕೆ ಸಜ್ಜಾಗಿದೆ. ಮಾರ್ಷಲ್​​ಗಳ ಮೂಲಕ ನಿಗಾ ಇಡುವುದರ ಜೊತೆಗೆ ರಾಜಕಾಲುವೆಗೆ ಕಸ ಎಸೆದವರಿಗೆ ದಂಡ ವಿಧಿಸಲು ಪಾಲಿಕೆ ಸಜ್ಜಾಗಿದೆ.

ಇದನ್ನೂ ಓದಿ: ಮೇ 12ರ ವರೆಗೂ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ, ಗುರುವಾರದ ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

ಸದ್ಯ ರಾಜಕಾಲುವೆಗಳ ಸ್ವಚ್ಛತೆಗೆ ಅಭಿಯಾನ ನಡೆಸುತ್ತಿರುವ ಪಾಲಿಕೆ, ರಾಜಕಾಲುವೆಗೆ ಕಸ ಎಸೆಯದಂತೆ ಮನವಿ ಮಾಡುತ್ತಿದೆ. ಆದರೆ, ಕೆಲ ಭಾಗಗಳಲ್ಲಿ ಪ್ಲಾಸ್ಟಿಕ್, ಕಟ್ಟಡದ ಅವಶೇಷಗಳು ರಾಜಕಾಲುವೆ ಒಡಲು ಸೇರುತ್ತಿದ್ದು, ಸದ್ಯ ದಂಡಾಸ್ತ್ರ ಪ್ರಯೋಗಿಸಲು ಹೊರಟಿರುವ ಪಾಲಿಕೆ ಎಷ್ಟರಮಟ್ಟಿಗೆ ಕಡಿವಾಣ ಹಾಕುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?