AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ

ಕೊನೆಗೂ ಬೆಂಗಳೂರಿನಲ್ಲಿ ಮಳೆಯಾಗಲು ಶುರುವಾಗಿದೆ. ಆದರೆ ರಾಜಕಾಲುವೆಯಲ್ಲಿ ಸುಗಮ ಹರಿವಿಗೆ ತಡೆಯಾಗುತ್ತಿರುವುದು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಿಬಿಎಂಪಿಗೆ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಕಾರಣ, ಸಾರ್ವಜನಿಕರು ರಾಜ ಕಾಲುವೆಯಲ್ಲಿ ಕಸ ಎಸೆಯುತ್ತಿರುವುದು. ಇದರ ತಡೆಗೆ ಬಿಬಿಎಂಪಿ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ
ರಾಜಕಾಲುವೆಗೆ ಕಸ ಎಸೆದವರಿಗೆ ದಂಡ
ಶಾಂತಮೂರ್ತಿ
| Edited By: |

Updated on: May 10, 2024 | 6:53 AM

Share

ಬೆಂಗಳೂರು, ಮೇ 10: ಬಿಸಿಲಿನಿಂದ ಬಳಲಿದ್ದ ಬೆಂಗಳೂರಿನಲ್ಲಿ (Bengaluru) ಕೊನೆಗೂ ಮಳೆಯಾಗಲು (Rain) ಆರಂಭವಾಗಿದೆ. 6 ತಿಂಗಳಿಂದ ಮರೆಯಾಗಿದ್ದ ಮಳೆರಾಯನ ಆಗಮನದ ಜೊತೆ ಜೊತೆಗೆ ರಾಜಧಾನಿಯ ರಾಜಕಾಲುವೆಗಳಿಂದಾಗುವ (Rajakaluve) ಅವಾಂತರಗಳನ್ನು ತಪ್ಪಿಸಲು ಬಿಬಿಎಂಪಿ ಅಲರ್ಟ್ ಆಗಿದೆ. ಈಗಾಗಲೇ ರಾಜಕಾಲುವೆ ಕ್ಲೀನಿಂಗ್ ನಡೆಸುತ್ತಿರುವ ಪಾಲಿಕೆ, ರಾಜಕಾಲುವೆಗೆ ಕಸ, ಘನತ್ಯಾಜ್ಯ ಎಸೆಯುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಮಳೆ ಬರುತ್ತಿದ್ದಂತೆ ರಾಜಕಾಲುವೆಗಳಿಂದ ಭೀತಿ ಎದುರಾಗಿದೆ. ಅತ್ತ ರಾಜಕಾಲುವೆಗಳ ಕ್ಲೀನಿಂಗ್​​ಗೆ ಇಳಿದಿರುವ ಪಾಲಿಕೆಗೆ ಮತ್ತೊಂದು ಸವಾಲು ಎದುರಾಗಿದೆ. ಅದೆಷ್ಟೇ ಬೇಲಿ ಹಾಕಿದರೂ, ರಾಜಕಾಲುವೆ ಸುತ್ತ ಎತ್ತರದ ಜಾಲರಿ ಅಳವಡಿಸಿದ್ದರೂ ರಾಜಕಾಲುವೆಗೆ ಕಸ ಎಸೆಯುವವರನ್ನು ತಡೆಯುವುದು ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.

ಈಗಾಗಲೇ ಕೆಲ ರಾಜಕಾಲುವೆಗಳ ಬಳಿ ಗೋಡೆಗಳು ಒಡೆದು ಹೋಗಿರುವ ಕಡೆ ಜನರು ಡಪಿಂಗ್ ಯಾರ್ಡ್​​​ಗಳಂತೆ ಕಸ ಸುರಿಯಲು ಶುರುಮಾಡಿದ್ದಾರೆ. ಕಸ ಅಲ್ಲದೇ ಕಟ್ಟಡದ ಅವಶೇಷಗಳು, ಘನತ್ಯಾಜ್ಯಗಳನ್ನು ರಾಜಕಾಲುವೆಗೆ ಎಸೆಯುತ್ತಿದ್ದವರಿಗೆ ಬಿಸಿ ಮುಟ್ಟಿಸಲು ಪಾಲಿಕೆ ಸಜ್ಜಾಗಿದೆ. ಮಾರ್ಷಲ್​​ಗಳ ಮೂಲಕ ನಿಗಾ ಇಡುವುದರ ಜೊತೆಗೆ ರಾಜಕಾಲುವೆಗೆ ಕಸ ಎಸೆದವರಿಗೆ ದಂಡ ವಿಧಿಸಲು ಪಾಲಿಕೆ ಸಜ್ಜಾಗಿದೆ.

ಇದನ್ನೂ ಓದಿ: ಮೇ 12ರ ವರೆಗೂ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ, ಗುರುವಾರದ ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

ಸದ್ಯ ರಾಜಕಾಲುವೆಗಳ ಸ್ವಚ್ಛತೆಗೆ ಅಭಿಯಾನ ನಡೆಸುತ್ತಿರುವ ಪಾಲಿಕೆ, ರಾಜಕಾಲುವೆಗೆ ಕಸ ಎಸೆಯದಂತೆ ಮನವಿ ಮಾಡುತ್ತಿದೆ. ಆದರೆ, ಕೆಲ ಭಾಗಗಳಲ್ಲಿ ಪ್ಲಾಸ್ಟಿಕ್, ಕಟ್ಟಡದ ಅವಶೇಷಗಳು ರಾಜಕಾಲುವೆ ಒಡಲು ಸೇರುತ್ತಿದ್ದು, ಸದ್ಯ ದಂಡಾಸ್ತ್ರ ಪ್ರಯೋಗಿಸಲು ಹೊರಟಿರುವ ಪಾಲಿಕೆ ಎಷ್ಟರಮಟ್ಟಿಗೆ ಕಡಿವಾಣ ಹಾಕುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ